ಹಿರಿಯೂರು: ತಾಲ್ಲೂಕಿನ ಗುಯಿಲಾಳು ಟೋಲ್ ಸಮೀಪದ ಅತಿಥ್ಯ ಹೋಟೆಲ್ ಬಳಿ ಭಾನುವಾರ ವಾರ್ತಾ ಸಚಿವ ಸಿ.ಸಿ. ಪಾಟೀಲ ಅವರ ಬೆಂಗಾವಲು ವಾಹನಕ್ಕೆ ಲಾರಿ ಡಿಕ್ಕಿಯಾಗಿದ್ದು, ವಾಹನದ ಬಾನೆಟ್ ಜಖಂ ಆಗಿದೆ.
ಸಚಿವರು ಬೆಳಗಾವಿಯಿಂದ ಬೆಂಗಳೂರಿಗೆ ಪ್ರಯಾಣ ಮಾಡುತ್ತಿದ್ದರು. ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ಅಪಘಾತವಾದಕಾರಣ ಇನ್ನೊಂದು ಬೆಂಗಾವಲು ವಾಹನದ ವ್ಯವಸ್ಥೆಮಾಡಿ ಸಚಿವರನ್ನು ಕಳುಹಿಸಿಕೊಡಲಾಗಿದೆ.ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.