ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ವಿಧಾನಸಭೆಗೆ ನಡೆದ ಉಪಚುನಾವಣೆಯಲ್ಲಿ ಒಂದು ಸ್ಥಾನ ಗೆದ್ದ ಕಾಂಗ್ರೆಸ್, 2023ರಲ್ಲಿ ಅಧಿಕಾರ ಹಿಡಿಯುವ ಕನಸು ಕಾಣುತ್ತಿದೆ. ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನಡುವೆ ಮುಖ್ಯಮಂತ್ರಿ ಗಾದಿಗೆ ಪೈಪೋಟಿ ಶುರುವಾಗಿದೆ. ವಿಧಾನಪರಿಷತ್ ಚುನಾವಣೆ ಗೆದ್ದು ತೋರಿಸಿದರೆ ಮುಂದಿನ ಚುನಾವಣೆಯ ಭವಿಷ್ಯದ ಬಗ್ಗೆ ಮತದಾರರು ನಿರ್ಧರಿಸಲಿದ್ದಾರೆ’ ಎಂದರು.