ವಿಧಾನಪರಿಷತ್ ಸದಸ್ಯ ಕೆ.ಎಸ್. ನವೀನ್ ಮಾತನಾಡಿದರು. ಇದೇ ವೇಳೆ ಕೋನಸಾಗರದಲ್ಲಿ ವಿಎಸ್ಎಸ್ಎನ್ ಬ್ಯಾಂಕ್ ಉದ್ಘಾಟನೆ, ನೇರ್ಲಹಳ್ಳಿಯಲ್ಲಿ ಗ್ರಾಮ ಪಂಚಾಯಿತಿ ಕಚೇರಿ ಉದ್ಘಾಟನೆ, ಮೊಳಕಾಲ್ಮುರಿನಲ್ಲಿ ನೂತನವಾಗಿ ನಿರ್ಮಿಸಿರುವ ಮೆಟ್ರಿಕ್ ನಂತರದ ಪರಿಶಿಷ್ಟ ಜಾತಿ, ಪಂಗಡದ ವಿದ್ಯಾರ್ಥಿಗಳ ವಿದ್ಯಾರ್ಥಿನಿಲಯ ಉದ್ಘಾಟನೆ, ಹಿರೇಕೆರೆಹಳ್ಳಿಯಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿ ವಸತಿ ಗೃಹಗಳ ಉದ್ಘಾಟನೆ, ಅಶೋಕ ಸಿದ್ದಾಪುರದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿ ವಸತಿಗೃಹ ಲೋಕಾರ್ಪಣೆ, ದೇವಸಮುದ್ರದಲ್ಲಿ ಇಂದಿರಾಗಾಂಧಿ ವಸತಿಶಾಲೆ ಕಟ್ಟಡ ಉದ್ಘಾಟನೆ ನೆರವೇರಿಸಿದರು.