<p><strong>ಚಿಕ್ಕಜಾಜೂರು</strong>: ಗ್ರಾಮ ಹಾಗೂ ಸುತ್ತಲಿನ ಗ್ರಾಮಗಳಲ್ಲಿ ಎರಡು ಮೂರು ದಿನಗಳಿಂದ ದಟ್ಟ ಮಂಜು ಬೀಳುತ್ತಿದ್ದು, ತೆಂಗು, ಅಡಿಕೆ, ಮಾವಿಗೆ ರೋಗ ತಗಲುವ ಆತಂಕ ಎದುರಾಗಿದೆ.</p>.<p>ಈಗಾಗಲೇ ಮಾವಿನ ಮರಗಳಲ್ಲಿ ಸೊಂಪಾಗಿ ಬಿಟ್ಟಿರುವ ಹೂವು ಮತ್ತು ಸಣ್ಣ ಈಚುಗಳಿಗೆ ಹಾನಿಯಾಗುವ ಆತಂಕ ಬೆಳೆಗಾರರನ್ನು ಕಾಡುತ್ತಿದೆ.</p>.<p>ಸೋಮವಾರ ಗ್ರಾಮಗಳಲ್ಲಿ ದಟ್ಟ ಮಂಜು ಮುಸುಕಿತ್ತು. 15–20 ಅಡಿ ಅಂತರದಲ್ಲಿನ ದೃಶ್ಯ ಅಸ್ಪಷ್ಟವಾಗಿ ಕಾಣುತ್ತಿತ್ತು. </p>.<p>ಹಲವು ಸಮಯದವರೆಗೆ ಮಂಜು ಬಿದ್ದರೆ, ತೆಂಗು ಹಾಗೂ ಅಡಿಕೆ ಮರಗಳಲ್ಲಿ ಬಿಟ್ಟ ಹೊಂಬಾಳೆ, ಈಚುಗಳು ಉದುರಿ ಇಳುವರಿ ಕುಂಠಿತವಾಗುತ್ತದೆ. ಇಬ್ಬನಿಯ ನೀರು ಗಿಡದಲ್ಲಿ ತುಂಬಾ ಸಮಯ ಇರುವುದರಿಂದ ಅಡಿಕೆ ಮತ್ತು ತೆಂಗಿನ ಈಚುಗಳು ಉದುರುತ್ತಿವೆ. ಇದರಿಂದ ಇಳುವರಿ ಕುಸಿತವಾಗಲಿದೆ ಎಂದು ರೈತರಾದ ಲೋಕೇಶ್, ಬಸವರಾಜಪ್ಪ, ಉಮಾಪತಿ, ನಾಗರಾಜ್, ನಟರಾಜ್, ದಿವಾಕರ್, ಶಂಕರ್, ಶಿವಕುಮಾರ್ ಹೇಳಿದರು.</p>.<p>‘ಎರಡು ವರ್ಷಗಳಿಂದ ಸರಿಯಾಗಿ ಮಳೆಯಾಗದೆ ಮಾವಿನ ಮರದಲ್ಲಿ ಹೂವು ಬಿಟ್ಟಿರಲಿಲ್ಲ. ಈ ಬಾರಿ ಮುಂಗಾರು ಹಾಗೂ ಹಿಂಗಾರು ಮಳೆಗಳು ಉತ್ತಮವಾಗಿ ಬಂದಿದ್ದರಿಂದ ಚೆನ್ನಾಗಿ ಹೂವು ಬಿಟ್ಟಿವೆ. ಈ ಬಾರಿ ಉತ್ತಮ ಫಸಲಿನ ನಿರೀಕ್ಷೆಯಲ್ಲಿದ್ದೆವು. ಈಗ ಇಬ್ಬನಿ ಬಿದ್ದಿದ್ದರಿಂದ, ಬೂದಿ ರೋಗ ಕಾಣಿಸಿಕೊಳ್ಳುವ ಸಾಧ್ಯತೆ ಇದೆ’ ಎಂದು ಮಾವು ಬೆಳೆಗಾರರಾದ ವೀರೇಶ್, ಮುಕಂದಪ್ಪ, ಹನುಮಂತಪ್ಪ, ಅನಂತಯ್ಯ, ಸಿದ್ಧಪ್ಪ, ಶ್ರೀನಿವಾಸ್, ಮಲ್ಲಿಕಾರ್ಜುನಾಚಾರಿ ಆತಂಕ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಜಾಜೂರು</strong>: ಗ್ರಾಮ ಹಾಗೂ ಸುತ್ತಲಿನ ಗ್ರಾಮಗಳಲ್ಲಿ ಎರಡು ಮೂರು ದಿನಗಳಿಂದ ದಟ್ಟ ಮಂಜು ಬೀಳುತ್ತಿದ್ದು, ತೆಂಗು, ಅಡಿಕೆ, ಮಾವಿಗೆ ರೋಗ ತಗಲುವ ಆತಂಕ ಎದುರಾಗಿದೆ.</p>.<p>ಈಗಾಗಲೇ ಮಾವಿನ ಮರಗಳಲ್ಲಿ ಸೊಂಪಾಗಿ ಬಿಟ್ಟಿರುವ ಹೂವು ಮತ್ತು ಸಣ್ಣ ಈಚುಗಳಿಗೆ ಹಾನಿಯಾಗುವ ಆತಂಕ ಬೆಳೆಗಾರರನ್ನು ಕಾಡುತ್ತಿದೆ.</p>.<p>ಸೋಮವಾರ ಗ್ರಾಮಗಳಲ್ಲಿ ದಟ್ಟ ಮಂಜು ಮುಸುಕಿತ್ತು. 15–20 ಅಡಿ ಅಂತರದಲ್ಲಿನ ದೃಶ್ಯ ಅಸ್ಪಷ್ಟವಾಗಿ ಕಾಣುತ್ತಿತ್ತು. </p>.<p>ಹಲವು ಸಮಯದವರೆಗೆ ಮಂಜು ಬಿದ್ದರೆ, ತೆಂಗು ಹಾಗೂ ಅಡಿಕೆ ಮರಗಳಲ್ಲಿ ಬಿಟ್ಟ ಹೊಂಬಾಳೆ, ಈಚುಗಳು ಉದುರಿ ಇಳುವರಿ ಕುಂಠಿತವಾಗುತ್ತದೆ. ಇಬ್ಬನಿಯ ನೀರು ಗಿಡದಲ್ಲಿ ತುಂಬಾ ಸಮಯ ಇರುವುದರಿಂದ ಅಡಿಕೆ ಮತ್ತು ತೆಂಗಿನ ಈಚುಗಳು ಉದುರುತ್ತಿವೆ. ಇದರಿಂದ ಇಳುವರಿ ಕುಸಿತವಾಗಲಿದೆ ಎಂದು ರೈತರಾದ ಲೋಕೇಶ್, ಬಸವರಾಜಪ್ಪ, ಉಮಾಪತಿ, ನಾಗರಾಜ್, ನಟರಾಜ್, ದಿವಾಕರ್, ಶಂಕರ್, ಶಿವಕುಮಾರ್ ಹೇಳಿದರು.</p>.<p>‘ಎರಡು ವರ್ಷಗಳಿಂದ ಸರಿಯಾಗಿ ಮಳೆಯಾಗದೆ ಮಾವಿನ ಮರದಲ್ಲಿ ಹೂವು ಬಿಟ್ಟಿರಲಿಲ್ಲ. ಈ ಬಾರಿ ಮುಂಗಾರು ಹಾಗೂ ಹಿಂಗಾರು ಮಳೆಗಳು ಉತ್ತಮವಾಗಿ ಬಂದಿದ್ದರಿಂದ ಚೆನ್ನಾಗಿ ಹೂವು ಬಿಟ್ಟಿವೆ. ಈ ಬಾರಿ ಉತ್ತಮ ಫಸಲಿನ ನಿರೀಕ್ಷೆಯಲ್ಲಿದ್ದೆವು. ಈಗ ಇಬ್ಬನಿ ಬಿದ್ದಿದ್ದರಿಂದ, ಬೂದಿ ರೋಗ ಕಾಣಿಸಿಕೊಳ್ಳುವ ಸಾಧ್ಯತೆ ಇದೆ’ ಎಂದು ಮಾವು ಬೆಳೆಗಾರರಾದ ವೀರೇಶ್, ಮುಕಂದಪ್ಪ, ಹನುಮಂತಪ್ಪ, ಅನಂತಯ್ಯ, ಸಿದ್ಧಪ್ಪ, ಶ್ರೀನಿವಾಸ್, ಮಲ್ಲಿಕಾರ್ಜುನಾಚಾರಿ ಆತಂಕ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>