‘ಪಟ್ಟಣದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಜಾಗದ ಕೊರತೆ ಇದೆ. ಆದ್ದರಿಂದ ವಿದ್ಯಾರ್ಥಿ ನಿಲಯಗಳನ್ನು ಪಟ್ಟಣದ ಹೊರವಲಯದಲ್ಲಿ ನಿರ್ಮಿಸಲಾಗುತ್ತಿದೆ. ಹನುಮಂತ ದೇವರ ಕಣಿವೆ, ಬೊಮ್ಮನಕಟ್ಟೆ, ಬಿ.ದುರ್ಗ ಸಮೀಪದ ಗುಡ್ಡಗಳಲ್ಲಿ ವಸತಿ ಶಾಲೆ, ಕಾಲೇಜುಗಳನ್ನು ನಿರ್ಮಿಸಲಾಗಿದೆ. ಶಾಲೆ, ಕಾಲೇಜು, ವಿದ್ಯಾರ್ಥಿ ನಿಲಯಗಳು ಪಟ್ಟಣದಿಂದ ಹೊರಗೆ ಪ್ರಶಾಂತ ವಾತಾವರಣದಲ್ಲಿ ಇದ್ದರೆ ಮಕ್ಕಳಿಗೆ ಓದಲು ಅನುಕೂಲ ಆಗಲಿದೆ. ಪಟ್ಟಣದಲ್ಲಿ ಎಲ್ಲ ವರ್ಗದ ವಿದ್ಯಾರ್ಥಿಗಳಿಗೆ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ಹಾಸ್ಟೆಲ್ ಗಳನ್ನುನಿರ್ಮಿಸಲಾಗಿದೆ’ ಎಂದರು.