<p><strong>ಹೊಳಲ್ಕೆರೆ</strong>: ತಾಲ್ಲೂಕಿನಲ್ಲಿ ವಿವಿಧ ಸರ್ಕಾರಿ ಶಾಲೆಗಳಿಗೆ 186 ನೂತನ ಕೊಠಡಿಗಳನ್ನು ನಿರ್ಮಿಸಲಾಗಿದೆ ಎಂದು ಶಾಸಕ ಎಂ.ಚಂದ್ರಪ್ಪ ಹೇಳಿದರು.</p>.<p>ತಾಲ್ಲೂಕಿನ ನಗರಘಟ್ಟದಲ್ಲಿ ₹16.5 ಲಕ್ಷ ವೆಚ್ಚದ ಶಾಲಾ ಕೊಠಡಿ ನಿರ್ಮಾಣ ಕಾಮಗಾರಿಗೆ ಶನಿವಾರ ಚಾಲನೆ ನೀಡಿ ಮಾತನಾಡಿದರು.</p>.<p>ಗ್ರಾಮದಲ್ಲಿ ₹50 ಲಕ್ಷ ವೆಚ್ಚದಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಿಸಲಾಗಿದೆ. ಗ್ರಾಮದ ಕರಿಯಮ್ಮ ದೇವಿ ದೇವಸ್ಥಾನಕ್ಕೆ ₹25 ಲಕ್ಷ ಅನುದಾನ ನೀಡಿದ್ದೇನೆ. ಜಾತ್ರೆಯ ಒಳಗೆ ಮುಖ್ಯರಸ್ತೆಯಿಂದ ದೇವಸ್ಥಾನದವರೆಗೆ ಕಾಂಕ್ರೀಟ್ ರಸ್ತೆ ನಿರ್ಮಿಸಲಾಗುವುದು ಎಂದು ಭರವಸೆ ನೀಡಿದರು.</p>.<p>ತಾಳ್ಯ ಹೋಬಳಿಯ 11 ಶಾಲೆಗಳೂ ಸೇರಿದಂತೆ ತಾಲ್ಲೂಕಿನ 35 ಶಾಲೆಗಳಲ್ಲಿ ಇಂಗ್ಲೀಷ್ ಮಾಧ್ಯಮ ತರಗತಿ ಆರಂಭಿಸಲಾಗಿದೆ. ದುಬಾರಿ ಶುಲ್ಕ ನೀಡಿ ಖಾಸಗಿ ಶಾಲೆಗಳಿಗೆ ಮಕ್ಕಳನ್ನು ಕಳಿಸಲು ಆಗದ ಪಾಲಕರ ಅನುಕೂಲಕ್ಕಾಗಿ ಸರ್ಕಾರವು ಸರ್ಕಾರಿ ಶಾಲೆಗಳಲ್ಲಿ ಎಲ್ಕೆಜಿ, ಯುಕೆಜಿ ಆರಂಭಿಸಿದೆ ಎಂದರು.</p>.<p>ಪಟ್ಟಣದ ಎಂಎಂ ಸರ್ಕಾರಿ ಶಾಲೆಗೆ ಮೂರು ಬಸ್ ನೀಡಿದ್ದು, ಹೈಟೆಕ್ ಕಟ್ಟಡ ನಿರ್ಮಿಸಲಾಗಿದೆ. ಇದರಿಂದ ಶಾಲೆಗೆ ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ದಾಖಲಾಗಿದ್ದಾರೆ. ಗಡಿಭಾಗದಲ್ಲಿರುವ ಉಪ್ಪರಿಗೇನಹಳ್ಳಿ ಸರ್ಕಾರಿ ಶಾಲೆಯನ್ನು ಕೆಪಿಎಸ್ ಶಾಲೆಯಾಗಿ ಮೇಲ್ದೆರ್ಜೆಗೆ ಏರಿಸಲಾಗುವುದು. ಇನ್ನು ಒಂದು ತಿಂಗಳಲ್ಲಿ ಆ ಶಾಲೆಗೂ ಉಚಿತ ಬಸ್ ನೀಡಲಾಗುವುದು ಎಂದು ತಿಳಿಸಿದರು.</p>.<p>ಗ್ರಾಮ ಪಂಚಾಯಿತಿ ಅಧ್ಯಕ್ಷ ಅಜ್ಜಯ್ಯ, ಮಾಜಿ ಅಧ್ಯಕ್ಷ ಪ್ರವೀಣ್, ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಪರಮೇಶ್ವರಪ್ಪ, ಎಪಿಎಂಸಿ ಮಾಜಿ ಅಧ್ಯಕ್ಷ ಅಂಕಳಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಶ್ರೀನಿವಾಸ್, ಗ್ರಾಮ ಪಂಚಾಯಿತಿ ಸದಸ್ಯರಾದ ಶೇಖರಪ್ಪ, ಕರಿಯಪ್ಪ, ನಾಗರಾಜಪ್ಪ, ಶ್ರೀನಿವಾಸ್, ಸಿದ್ದಪ್ಪ ಹಾಗೂ ಗ್ರಾಮಸ್ಥರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಳಲ್ಕೆರೆ</strong>: ತಾಲ್ಲೂಕಿನಲ್ಲಿ ವಿವಿಧ ಸರ್ಕಾರಿ ಶಾಲೆಗಳಿಗೆ 186 ನೂತನ ಕೊಠಡಿಗಳನ್ನು ನಿರ್ಮಿಸಲಾಗಿದೆ ಎಂದು ಶಾಸಕ ಎಂ.ಚಂದ್ರಪ್ಪ ಹೇಳಿದರು.</p>.<p>ತಾಲ್ಲೂಕಿನ ನಗರಘಟ್ಟದಲ್ಲಿ ₹16.5 ಲಕ್ಷ ವೆಚ್ಚದ ಶಾಲಾ ಕೊಠಡಿ ನಿರ್ಮಾಣ ಕಾಮಗಾರಿಗೆ ಶನಿವಾರ ಚಾಲನೆ ನೀಡಿ ಮಾತನಾಡಿದರು.</p>.<p>ಗ್ರಾಮದಲ್ಲಿ ₹50 ಲಕ್ಷ ವೆಚ್ಚದಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಿಸಲಾಗಿದೆ. ಗ್ರಾಮದ ಕರಿಯಮ್ಮ ದೇವಿ ದೇವಸ್ಥಾನಕ್ಕೆ ₹25 ಲಕ್ಷ ಅನುದಾನ ನೀಡಿದ್ದೇನೆ. ಜಾತ್ರೆಯ ಒಳಗೆ ಮುಖ್ಯರಸ್ತೆಯಿಂದ ದೇವಸ್ಥಾನದವರೆಗೆ ಕಾಂಕ್ರೀಟ್ ರಸ್ತೆ ನಿರ್ಮಿಸಲಾಗುವುದು ಎಂದು ಭರವಸೆ ನೀಡಿದರು.</p>.<p>ತಾಳ್ಯ ಹೋಬಳಿಯ 11 ಶಾಲೆಗಳೂ ಸೇರಿದಂತೆ ತಾಲ್ಲೂಕಿನ 35 ಶಾಲೆಗಳಲ್ಲಿ ಇಂಗ್ಲೀಷ್ ಮಾಧ್ಯಮ ತರಗತಿ ಆರಂಭಿಸಲಾಗಿದೆ. ದುಬಾರಿ ಶುಲ್ಕ ನೀಡಿ ಖಾಸಗಿ ಶಾಲೆಗಳಿಗೆ ಮಕ್ಕಳನ್ನು ಕಳಿಸಲು ಆಗದ ಪಾಲಕರ ಅನುಕೂಲಕ್ಕಾಗಿ ಸರ್ಕಾರವು ಸರ್ಕಾರಿ ಶಾಲೆಗಳಲ್ಲಿ ಎಲ್ಕೆಜಿ, ಯುಕೆಜಿ ಆರಂಭಿಸಿದೆ ಎಂದರು.</p>.<p>ಪಟ್ಟಣದ ಎಂಎಂ ಸರ್ಕಾರಿ ಶಾಲೆಗೆ ಮೂರು ಬಸ್ ನೀಡಿದ್ದು, ಹೈಟೆಕ್ ಕಟ್ಟಡ ನಿರ್ಮಿಸಲಾಗಿದೆ. ಇದರಿಂದ ಶಾಲೆಗೆ ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ದಾಖಲಾಗಿದ್ದಾರೆ. ಗಡಿಭಾಗದಲ್ಲಿರುವ ಉಪ್ಪರಿಗೇನಹಳ್ಳಿ ಸರ್ಕಾರಿ ಶಾಲೆಯನ್ನು ಕೆಪಿಎಸ್ ಶಾಲೆಯಾಗಿ ಮೇಲ್ದೆರ್ಜೆಗೆ ಏರಿಸಲಾಗುವುದು. ಇನ್ನು ಒಂದು ತಿಂಗಳಲ್ಲಿ ಆ ಶಾಲೆಗೂ ಉಚಿತ ಬಸ್ ನೀಡಲಾಗುವುದು ಎಂದು ತಿಳಿಸಿದರು.</p>.<p>ಗ್ರಾಮ ಪಂಚಾಯಿತಿ ಅಧ್ಯಕ್ಷ ಅಜ್ಜಯ್ಯ, ಮಾಜಿ ಅಧ್ಯಕ್ಷ ಪ್ರವೀಣ್, ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಪರಮೇಶ್ವರಪ್ಪ, ಎಪಿಎಂಸಿ ಮಾಜಿ ಅಧ್ಯಕ್ಷ ಅಂಕಳಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಶ್ರೀನಿವಾಸ್, ಗ್ರಾಮ ಪಂಚಾಯಿತಿ ಸದಸ್ಯರಾದ ಶೇಖರಪ್ಪ, ಕರಿಯಪ್ಪ, ನಾಗರಾಜಪ್ಪ, ಶ್ರೀನಿವಾಸ್, ಸಿದ್ದಪ್ಪ ಹಾಗೂ ಗ್ರಾಮಸ್ಥರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>