ಜಿಲ್ಲೆಗೆ ಸುಮಾರು 2,500 ಮೆಟ್ರಿಕ್ ಟನ್ ಯೂರಿಯಾ ರಸಗೊಬ್ಬರದ ಅಗತ್ಯವಿದೆ ಎಂದು ಕೃಷಿ ಇಲಾಖೆ ಅಂದಾಜಿಸಿದೆ. ಆದರೆ, 100 ಮೆಟ್ರಿಕ್ ಟನ್ ಯೂರಿಯಾ ಮಾತ್ರ ದಾಸ್ತಾನು ಇದೆ. ರಸಗೊಬ್ಬರಕ್ಕೆ ಕೊರತೆ ಉಂಟಾದರೆ ರೈತರು ಅಸಮಧಾನಗೊಳ್ಳುವ ಸಾಧ್ಯತೆ ಇದೆ. ಕಾನೂನು ಮತ್ತು ಸುವ್ಯವಸ್ಥೆಗೂ ಧಕ್ಕೆ ಉಂಟಾಗಬಹುದು ಎಂದು ಜಿಲ್ಲಾಡಳಿತ ಕಳವಳ ವ್ಯಕ್ತಪಡಿಸಿದೆ ಎಂದು ಸಚಿವರ ಗಮನ ಸೆಳೆದಿದ್ದಾರೆ.