ಬೆಳಿಗ್ಗೆ ತೆರೆದಿದ್ದ ಅಂಗಡಿಗಳು ಬಾಗಿಲು ಮುಚ್ಚುತ್ತಿವೆ. ಬಿಜೆಪಿ ಕಾರ್ಯಕರ್ತರು ಟಿಬಿ ರಸ್ತೆಯಲ್ಲಿ ಜಮಾಯಿಸಿ ಪ್ರತಿಭಟನೆ ನಡೆಸುತ್ತಿದ್ದು, ಟೈರ್ಗೆ ಬೆಂಕಿ ಹಚ್ಚಿದ್ದಾರೆ. ಸಾರ್ವಜನಿಕರಿಗೆ ತೊಂದರೆಯಾಗದ ರೀತಿಯಲ್ಲಿ ಪ್ರತಿಭಟನೆ ನಡೆಸಿ, ಒತ್ತಾಯ ಪೂರ್ವಕವಾಗಿ ಬಂದ್ ನಡೆಸಿದರೆ ಕ್ರಮ ಜರುಗಿಸುವುದಾಗಿ ಚಿತ್ರದುರ್ಗ ಎಸ್ಪಿ ಅರುಣ್ ಎಚ್ಚರಿಕೆ ನೀಡಿದ್ದಾರೆ.