‘ಶ್ರೀರಾಂಪುರದಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡದ ಜನಸಂಖ್ಯೆ ಹೆಚ್ಚಾಗಿದೆ. ಅಲ್ಲಿ ಮದ್ಯದಂಗಡಿ ತೆರೆಯಬೇಡಿ ಎಂದು ಸೂಚಿಸಿದ್ದೆ. ಉತ್ತಮ ವ್ಯಾಪಾರ ನಡೆಯುತ್ತದೆ ಎಂಬ ಕಾರಣಕ್ಕೆ ಖಾಸಗಿ ಮಳಿಗೆಗಳು ಬಾಗಿಲು ತೆರೆದಿವೆ. ನಿಗದಿತ ದರಕ್ಕಿಂತ ಹೆಚ್ಚು ಬೆಲೆಗೆ ಮದ್ಯ ಮಾರಾಟ ಮಾಡಲಾಗುತ್ತಿದೆ. ಕಳಪೆ ಗುಣಮಟ್ಟದ ಮದ್ಯವೂ ಸರಬರಾಜಾಗುತ್ತಿದೆ. ಹೀಗಾಗಿ, ಎಂಎಸ್ಐಎಲ್ ಮಳಿಗೆ ತೆರೆಯುವಂತೆ ಬೇಡಿಕೆ ಇಟ್ಟಿದ್ದೇನೆ’ ಎಂದು ಶಾಸಕ ಗೂಳಿಹಟ್ಟಿ ಶೇಖರ್ ‘ಪ್ರಜಾವಾಣಿ’ಗೆ ತಿಳಿಸಿದರು.