<p><strong>ಮೊಳಕಾಲ್ಮುರು</strong>: ಶಿಕ್ಷಣ ವ್ಯವಸ್ಥೆ ಅಭಿವೃದ್ಧಿಯಲ್ಲಿ ಬಿಸಿಯೂಟ ಯೋಜನೆ ಸಿಬ್ಬಂದಿ ಪಾತ್ರ ಪ್ರಮುಖವಾಗಿದ್ದು, ಜವಾಬ್ದಾರಿ ನಿಭಾಯಿಸಲು ಸಿಬ್ಬಂದಿ ಶ್ರಮಿಸಬೇಕು ಎಂದು ಶಾಸಕ ಎನ್.ವೈ. ಗೋಪಾಲಕೃಷ್ಣ ಸಲಹೆ ನೀಡಿದರು.</p>.<p>ತಾಲ್ಲೂಕಿನ ರಾಂಪುರದಲ್ಲಿ ಭಾನುವಾರ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಸಂಯುಕ್ತವಾಗಿ ಬಿಸಿಯೂಟ ಸಿಬ್ಬಂದಿಗೆ ಹಮ್ಮಿಕೊಂಡಿದ್ದ ತಾಲ್ಲೂಕು ಮಟ್ಟದ ತರಬೇತಿ ಕಾರ್ಯಾಗಾರ ಹಾಗೂ ಶೈಕ್ಷಣಿಕ ಪ್ರಗತಿ ಪರಿಶೀಲನಾ ಸಭೆ ಉದ್ಘಾಟಿಸಿ ಮಾತನಾಡಿದರು.</p>.<p>ಬಿಸಿಯೂಟ ಯೋಜನೆ ಜಾರಿಯ ನಂತರ ಗ್ರಾಮೀಣ ಹಾಗೂ ಗಡಿಭಾಗದ ಶಾಲೆಗಳ ಹಾಜರಾತಿಯಲ್ಲಿ ಸುಧಾರಣೆಯಾಗಿದೆ. ಯೋಜನೆ ಆರೋಗ್ಯಕರವಾಗಿ ಮುಂದುವರಿದಲ್ಲಿ ವಿದ್ಯಾರ್ಥಿಗಳ ಆರೋಗ್ಯ ಸುಧಾರಣೆಯ ಜತೆಗೆ ಹಾಜರಾತಿ ಹೆಚ್ಚಲಿದೆ. ಈ ನಿಟ್ಟಿನಲ್ಲಿ ಶಿಕ್ಷಕರು ಯೋಜನೆ ಪ್ರಗತಿಗೆ ಕೈಜೋಡಿಸಬೇಕು ಎಂದರು.</p>.<p>ಗಣಿಭಾದಿತ ಪ್ರದೇಶಾಭಿವೃದ್ಧಿ ಯೋಜನೆಯಲ್ಲಿ ರಾಜ್ಯದ 10 ತಾಲ್ಲೂಕಿನ ವಿದ್ಯಾರ್ಥಿಗಳಿಗೆ ನಿತ್ಯ ಪೌಷ್ಟಿಕ ಆಹಾರ ನೀಡುವ ಯೋಜನೆ ಮಂಜೂರಾಗಿದೆ. ಮೊಳಕಾಲ್ಮುರು ತಾಲ್ಲೂಕಿಗೆ ಸೌಲಭ್ಯ ದೊರಕಿದ್ದು, ಯೋಜನೆಯ ಸದ್ಬಳಕೆ ಮಾಡಿಕೊಳ್ಳಿ ಎಂದರು.</p>.<p>ತಹಶೀಲ್ದಾರ್ ಟಿ. ಜಗದೀಶ್, ಕ್ಷೇತ್ರ ಶಿಕ್ಷಣಾಧಿಕಾರಿ ಎನ್. ನಿರ್ಮಲಾದೇವಿ, ಬಿಸಿಯೂಟ ಯೋಜನಾಧಿಕಾರಿ ಎಂ. ಹನುಮಂತಪ್ಪ, ಎಐಟಿಯುಸಿ ಜಿಲ್ಲಾ ಘಟಕದ ಸಂಚಾಲಕ ಡಿ.ಎಂ. ಮಲಿಯಪ್ಪ, ಸಿಪಿಐ ತಾಲ್ಲೂಕು ಸಂಚಾಲಕ ಡಿ. ಪೆನ್ನಯ್ಯ, ಇಸಿಒ ಲೋಹಿತ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೊಳಕಾಲ್ಮುರು</strong>: ಶಿಕ್ಷಣ ವ್ಯವಸ್ಥೆ ಅಭಿವೃದ್ಧಿಯಲ್ಲಿ ಬಿಸಿಯೂಟ ಯೋಜನೆ ಸಿಬ್ಬಂದಿ ಪಾತ್ರ ಪ್ರಮುಖವಾಗಿದ್ದು, ಜವಾಬ್ದಾರಿ ನಿಭಾಯಿಸಲು ಸಿಬ್ಬಂದಿ ಶ್ರಮಿಸಬೇಕು ಎಂದು ಶಾಸಕ ಎನ್.ವೈ. ಗೋಪಾಲಕೃಷ್ಣ ಸಲಹೆ ನೀಡಿದರು.</p>.<p>ತಾಲ್ಲೂಕಿನ ರಾಂಪುರದಲ್ಲಿ ಭಾನುವಾರ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಸಂಯುಕ್ತವಾಗಿ ಬಿಸಿಯೂಟ ಸಿಬ್ಬಂದಿಗೆ ಹಮ್ಮಿಕೊಂಡಿದ್ದ ತಾಲ್ಲೂಕು ಮಟ್ಟದ ತರಬೇತಿ ಕಾರ್ಯಾಗಾರ ಹಾಗೂ ಶೈಕ್ಷಣಿಕ ಪ್ರಗತಿ ಪರಿಶೀಲನಾ ಸಭೆ ಉದ್ಘಾಟಿಸಿ ಮಾತನಾಡಿದರು.</p>.<p>ಬಿಸಿಯೂಟ ಯೋಜನೆ ಜಾರಿಯ ನಂತರ ಗ್ರಾಮೀಣ ಹಾಗೂ ಗಡಿಭಾಗದ ಶಾಲೆಗಳ ಹಾಜರಾತಿಯಲ್ಲಿ ಸುಧಾರಣೆಯಾಗಿದೆ. ಯೋಜನೆ ಆರೋಗ್ಯಕರವಾಗಿ ಮುಂದುವರಿದಲ್ಲಿ ವಿದ್ಯಾರ್ಥಿಗಳ ಆರೋಗ್ಯ ಸುಧಾರಣೆಯ ಜತೆಗೆ ಹಾಜರಾತಿ ಹೆಚ್ಚಲಿದೆ. ಈ ನಿಟ್ಟಿನಲ್ಲಿ ಶಿಕ್ಷಕರು ಯೋಜನೆ ಪ್ರಗತಿಗೆ ಕೈಜೋಡಿಸಬೇಕು ಎಂದರು.</p>.<p>ಗಣಿಭಾದಿತ ಪ್ರದೇಶಾಭಿವೃದ್ಧಿ ಯೋಜನೆಯಲ್ಲಿ ರಾಜ್ಯದ 10 ತಾಲ್ಲೂಕಿನ ವಿದ್ಯಾರ್ಥಿಗಳಿಗೆ ನಿತ್ಯ ಪೌಷ್ಟಿಕ ಆಹಾರ ನೀಡುವ ಯೋಜನೆ ಮಂಜೂರಾಗಿದೆ. ಮೊಳಕಾಲ್ಮುರು ತಾಲ್ಲೂಕಿಗೆ ಸೌಲಭ್ಯ ದೊರಕಿದ್ದು, ಯೋಜನೆಯ ಸದ್ಬಳಕೆ ಮಾಡಿಕೊಳ್ಳಿ ಎಂದರು.</p>.<p>ತಹಶೀಲ್ದಾರ್ ಟಿ. ಜಗದೀಶ್, ಕ್ಷೇತ್ರ ಶಿಕ್ಷಣಾಧಿಕಾರಿ ಎನ್. ನಿರ್ಮಲಾದೇವಿ, ಬಿಸಿಯೂಟ ಯೋಜನಾಧಿಕಾರಿ ಎಂ. ಹನುಮಂತಪ್ಪ, ಎಐಟಿಯುಸಿ ಜಿಲ್ಲಾ ಘಟಕದ ಸಂಚಾಲಕ ಡಿ.ಎಂ. ಮಲಿಯಪ್ಪ, ಸಿಪಿಐ ತಾಲ್ಲೂಕು ಸಂಚಾಲಕ ಡಿ. ಪೆನ್ನಯ್ಯ, ಇಸಿಒ ಲೋಹಿತ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>