ಹಿರಿಯೂರು: ‘ನನ್ನ ಹಣೆಯಲ್ಲಿ ಬರೆದಿದ್ದರೆ, ಪಕ್ಷದ ವರಿಷ್ಠರು ಮನಸ್ಸು ಮಾಡಿದರೆ ಸಚಿವ ಸಂಪುಟದಲ್ಲಿ ಸ್ಥಾನ ಸಿಗಬಹುದು’ ಎಂದು ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಅಭಿಪ್ರಾಯ ವ್ಯಕ್ತಪಡಿಸಿದರು.
‘ಹಿರಿಯೂರು ಕ್ಷೇತ್ರದಿಂದ ಆಯ್ಕೆಯಾಗಿದ್ದ ಕೆ.ಎಚ್. ರಂಗನಾಥ್, ಡಿ. ಮಂಜುನಾಥ್, ಡಿ. ಸುಧಾಕರ್ ಸಚಿವರಾಗಿದ್ದರು. ಯಾರೇ ಸಿಎಂ ಆಗಲಿ ಹಿರಿಯೂರು ಕ್ಷೇತ್ರಕ್ಕೆ ಸಚಿವ ಸ್ಥಾನ ಗ್ಯಾರಂಟಿ ಎಂಬ ಮಾತಿತ್ತು. ಯಡಿಯೂರಪ್ಪ ಸಂಪುಟದಲ್ಲಿ ಸಚಿವ ಸ್ಥಾನ ಸಿಕ್ಕೇ ಬಿಟ್ಟಿತು ಎನ್ನುವಾಗ ಕೈತಪ್ಪಿತು’ ಎಂದು ‘ಪ್ರಜಾವಾಣಿ‘ಗೆ ಮಂಗಳವಾರ ಪ್ರತಿಕ್ರಿಯಿಸಿದರು.
‘ಬಿಎಸ್ವೈ ಅಧಿಕಾರ ತ್ಯಜಿಸಿದ್ದಕ್ಕೆ ವೈಯಕ್ತಿಕವಾಗಿ ಬೇಸರವಿದೆ. ನನ್ನ ಕ್ಷೇತ್ರಕ್ಕೆ ಸಾಕಷ್ಟು ಅನುದಾನ ನೀಡಿದ್ದರು. ವರಿಷ್ಠರ ನಿರ್ಧಾರಕ್ಕೆ ಎಲ್ಲರೂ ಬದ್ಧ’ ಎಂದು ಶಾಸಕರು ಸ್ಪಷ್ಟಪಡಿಸಿದರು.
‘ವಿನಯ್ ಗುರೂಜಿ ಒಂದು ತಿಂಗಳ ಹಿಂದೆಯೇ ನಿಮ್ಮನ್ನು ಸಚಿವರಾಗುತ್ತೀರಿ ಎಂದಿದ್ದರಲ್ಲವೆ?’ ಎಂಬ ಪ್ರಶ್ನೆಗೆ, ‘ಗುರುಗಳ ಆಶೀರ್ವಾದ, ದೈವಬಲ ನಮ್ಮನ್ನು ಯಾವ ಎತ್ತರಕ್ಕೆ ಕೊಂಡೊಯ್ಯುತ್ತದೆ ಎಂಬುದಕ್ಕೆ ಕಾಲವೇ ಉತ್ತರಿಸಲಿದೆ’ ಎಂದು ಪೂರ್ಣಿಮಾ ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.