ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿಯಲ್ಲೇ ಗೂಂಡಾಗಳು ಹೆಚ್ಚಿರುವುದು: ರಾಮಲಿಂಗಾರೆಡ್ಡಿ ಟೀಕೆ

Last Updated 24 ಅಕ್ಟೋಬರ್ 2020, 8:22 IST
ಅಕ್ಷರ ಗಾತ್ರ

ಚಿತ್ರದುರ್ಗ: ಬಿಜೆಪಿಯಲ್ಲೇ ಹೆಚ್ಚು ಗೂಂಡಾಗಳು ಇರುವುದು. ಡಿ.ಕೆ.ಶಿವಕುಮಾರ್ ಎಲ್ಲಿ ಗೂಂಡಾಗಿರಿ ಮಾಡಿದ್ದಾರೆ ಹೇಳಲಿ ಎಂದು ಶಾಸಕ ರಾಮಲಿಂಗಾರೆಡ್ಡಿ ಸವಾಲು ಹಾಕಿದ್ದಾರೆ.

ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆಯ ಮತಯಾಚನೆಗೆ ಶನಿವಾರ ಚಿತ್ರದುರ್ಗಕ್ಕೆ ಬಂದಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ಬಿಜಿಪಿಯವರು ಹಿಟ್ಲರ್ ಸಂಪುಟದಲ್ಲಿದ್ದ ಸುಳ್ಳಿನ ಮಂತ್ರಿಯಾಗಿದ್ದ ಗೋಬಲ್ಸ್ ವಂಶಸ್ಥರು. ಸುಳ್ಳು ಹೇಳದಿದ್ದರೆ ಬಿಜೆಪಿಗರಿಗೆ ನಿದ್ದೆ ಬರಲ್ಲ, ಊಟ ಸೇರಲ್ಲ ಎಂದು ಕಿಡಿಕಾರಿದರು.

ಪ್ರಧಾನಿ ನರೇಂದ್ರ ಮೋದಿ ತಪ್ಪಿನಿಂದ ಕೋವಿಡ್ ದೇಶದಲ್ಲಿ ವ್ಯಾಪಿಸಿದೆ. ಕೋವಿಡ್ ಲಸಿಕೆಯನ್ನು ಬಿಹಾರಕ್ಕೆ ಮಾತ್ರ ಏಕೆ ಉಚಿತವಾಗಿ ನೀಡಬೇಕು. ಲಸಿಕೆ ವಿಚಾರದಲ್ಲಿ ಬಿಜೆಪಿ ಕೀಳು ಮಟ್ಟದ ರಾಜಕಾರಣ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಉತ್ತರ ಪ್ರದೇಶದ ಅತ್ಯಾಚಾರ ಪ್ರಕರಣದ ಬಗ್ಗೆಒಬ್ಬ ಮಹಿಳೆಯಾಗಿ ಶೋಭಾ ಕರಂದ್ಲಾಜೆ ಮಾತನಾಡಿಲ್ಲ. ಆದರೆ, ಬೇರೆಯವರ ಮೇಲೆ ಆರೋಪ ಮಾಡುತ್ತಾರೆ. ಶೋಭಾ ಕರಂದ್ಲಾಜೆ, ಸಿ.ಟಿ.ರವಿ, ಅನಂತಕುಮಾರ ಹೆಗಡೆ ಮಾತಿಗೆ ಕಿಮ್ಮತ್ತಿಲ್ಲ. ಎಲ್ಲಾ ಪಕ್ಷದವರನ್ನು‌ ಸೇರಿಸಿಕೊಂಡು ಬಿಜೆಪಿ ಕಲಸುಮಲೋಗರ ಆಗಿದೆ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT