ನಗರಸಭೆ ಅಧಿಕಾರಿಗಳು ಸಮೀಕ್ಷೆ ನಡೆಸಿ ಕಟ್ಟಡಗಳು ಒತ್ತುವರಿ ಮಾಡಿಕೊಂಡ ಭಾಗವನ್ನು ಗುರುತು ಮಾಡಿದ್ದಾರೆ. ಇದನ್ನು ಪ್ರಶ್ನಿಸಿ ಅನೇಕರು ನ್ಯಾಯಾಲಯದ ಮೆಟ್ಟಿಲೇರಿದ್ದಾರೆ. ಇದು ಉದ್ದೇಶಿತ ಕಾಮಗಾರಿಯನ್ನು ಪೂರ್ಣಗೊಳಿಸಲು ಅಡ್ಡಿಯಾಗಿದೆ. ಹೀಗಾಗಿ, ಶಾಸಕರು ರಸ್ತೆಯಲ್ಲಿ ಹೆಜ್ಜೆಹಾಕಿ ಒತ್ತುವರಿ ಮಾಡಿಕೊಂಡು ನಿರ್ಮಿಸಿದ ಕಟ್ಟಡಗಳ ಮಾಲೀಕರ ಮನವೊಲಿಸುವ ಪ್ರಯತ್ನ ನಡೆಸಿದರು. ಸ್ವಯಂ ಪ್ರೇರಿತವಾಗಿ ತೆರವುಗೊಳಿಸಿ ಅಭಿವೃದ್ಧಿ ಕಾಮಗಾರಿಗೆ ಸಹಕರಿಸುವಂತೆ ಕೋರಿಕೊಂಡರು.