<p><strong>ಚಿತ್ರದುರ್ಗ:</strong> ರಾಜ್ಯ ಸಚಿವ ಸಂಪುಟದಲ್ಲಿ ಅರ್ಧಕ್ಕಿಂತ ಹೆಚ್ಚು ಸಚಿವರು ಬೆಂಗಳೂರು, ಬೆಳಗಾವಿ ಜಿಲ್ಲೆಗೆ ಸೇರಿದ್ದಾರೆ. ಎರಡೇ ಜಾತಿಯ ಸಚಿವರು ಸಂಪುಟದಲ್ಲಿ ತುಂಬಿಕೊಂಡಿದ್ದಾರೆ. ಸಂಪುಟದಲ್ಲಿ ಸಮಾನತೆ ಕಾಣದೇ ನಗೆಪಾಟಲಿಗೆ ಈಡಾಗಿದ್ದೇವೆ ಎಂದು ಶಾಸಕ ಜಿ.ಎಚ್.ತಿಪ್ಪಾರೆಡ್ಡಿ ಅಸಮಾಧಾನ ಹೊರಹಾಕಿದರು.</p>.<p>ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಚುನಾವಣೆಯಲ್ಲಿ ಸೋಲು ಕಂಡಿದ್ದ ಸಿ.ಪಿ.ಯೋಗೇಶ್ವರ್ ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳುತ್ತಿರುವುದು ಅಚ್ಚರಿ ಮೂಡಿಸಿದೆ. ಪಕ್ಷ ಅಧಿಕಾರಕ್ಕೆ ಬರಲು ಅವರು ಮಾಡಿದ ಸಹಾಯವೇನು ತಿಳಿಯದು. ಚುನಾವಣೆ ಸಂದರ್ಭದಲ್ಲಿ ಪಕ್ಷ ವಿರೋಧಿ ಚಟುವಟಿಕೆ ಮಾಡಿದವರಿಗೂ ಮಣೆ ಹಾಕಲಾಗಿದೆ’ ಎಂದು ಕಿಡಿಕಾರಿದರು.</p>.<p>‘51 ವರ್ಷದಿಂದ ರಾಜಕೀಯದಲ್ಲಿದ್ದೇನೆ. ಐದು ಬಾರಿ ಶಾಸಕನಾಗಿ ಕೆಲಸ ಮಾಡಿದ್ದೇನೆ. ನನ್ನ ಇಡೀ ತಲೆಮಾರನ್ನು ರಾಜಕೀಯಕ್ಕೆ ಸವೆಸಿದ್ದೇನೆ. ರಾಜ್ಯದಲ್ಲಿ ಬಿಜೆಪಿ ಮೂರು ಬಾರಿ ಅಧಿಕಾರಕ್ಕೆ ಬಂದರೂ ಸಚಿವ ಸ್ಥಾನ ಸಿಗದಿರುವುದಕ್ಕೆ ಬೇಸರವಾಗಿದೆ. ಚಿತ್ರದುರ್ಗ ಜಿಲ್ಲೆಗೆ ಹಾಗೂ ಮಧ್ಯ ಕರ್ನಾಟಕಕ್ಕೆ ಅನ್ಯಾಯವಾಗಿದೆ’ ಎಂದು ಆರೋಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿತ್ರದುರ್ಗ:</strong> ರಾಜ್ಯ ಸಚಿವ ಸಂಪುಟದಲ್ಲಿ ಅರ್ಧಕ್ಕಿಂತ ಹೆಚ್ಚು ಸಚಿವರು ಬೆಂಗಳೂರು, ಬೆಳಗಾವಿ ಜಿಲ್ಲೆಗೆ ಸೇರಿದ್ದಾರೆ. ಎರಡೇ ಜಾತಿಯ ಸಚಿವರು ಸಂಪುಟದಲ್ಲಿ ತುಂಬಿಕೊಂಡಿದ್ದಾರೆ. ಸಂಪುಟದಲ್ಲಿ ಸಮಾನತೆ ಕಾಣದೇ ನಗೆಪಾಟಲಿಗೆ ಈಡಾಗಿದ್ದೇವೆ ಎಂದು ಶಾಸಕ ಜಿ.ಎಚ್.ತಿಪ್ಪಾರೆಡ್ಡಿ ಅಸಮಾಧಾನ ಹೊರಹಾಕಿದರು.</p>.<p>ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಚುನಾವಣೆಯಲ್ಲಿ ಸೋಲು ಕಂಡಿದ್ದ ಸಿ.ಪಿ.ಯೋಗೇಶ್ವರ್ ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳುತ್ತಿರುವುದು ಅಚ್ಚರಿ ಮೂಡಿಸಿದೆ. ಪಕ್ಷ ಅಧಿಕಾರಕ್ಕೆ ಬರಲು ಅವರು ಮಾಡಿದ ಸಹಾಯವೇನು ತಿಳಿಯದು. ಚುನಾವಣೆ ಸಂದರ್ಭದಲ್ಲಿ ಪಕ್ಷ ವಿರೋಧಿ ಚಟುವಟಿಕೆ ಮಾಡಿದವರಿಗೂ ಮಣೆ ಹಾಕಲಾಗಿದೆ’ ಎಂದು ಕಿಡಿಕಾರಿದರು.</p>.<p>‘51 ವರ್ಷದಿಂದ ರಾಜಕೀಯದಲ್ಲಿದ್ದೇನೆ. ಐದು ಬಾರಿ ಶಾಸಕನಾಗಿ ಕೆಲಸ ಮಾಡಿದ್ದೇನೆ. ನನ್ನ ಇಡೀ ತಲೆಮಾರನ್ನು ರಾಜಕೀಯಕ್ಕೆ ಸವೆಸಿದ್ದೇನೆ. ರಾಜ್ಯದಲ್ಲಿ ಬಿಜೆಪಿ ಮೂರು ಬಾರಿ ಅಧಿಕಾರಕ್ಕೆ ಬಂದರೂ ಸಚಿವ ಸ್ಥಾನ ಸಿಗದಿರುವುದಕ್ಕೆ ಬೇಸರವಾಗಿದೆ. ಚಿತ್ರದುರ್ಗ ಜಿಲ್ಲೆಗೆ ಹಾಗೂ ಮಧ್ಯ ಕರ್ನಾಟಕಕ್ಕೆ ಅನ್ಯಾಯವಾಗಿದೆ’ ಎಂದು ಆರೋಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>