ಈ ಮಧ್ಯೆ ರೈತನ ಹಿರಿಯ ಮಗ ಹೃದಯಾಘಾತದಿಂದ ಸಾವನ್ನಪ್ಪಿದ್ದರು. ನೋವಿನಲ್ಲಿದ್ದ ರೈತ ಕುಟುಂಬಕ್ಕೆ ದಿಕ್ಕು ತೋಚದಂತಾಗಿತ್ತು. ಇದರಿಂದ ಮನನೊಂದು ದಂಪತಿ ಆತ್ಮಹತ್ಯೆಗೆ ನಿರ್ಧರಿಸಿದ್ದರು. ತಮ್ಮ ದುಖಃವನ್ನು ಗ್ರಾಮದ ಹಿತೈಷಿಗಳ ಬಳಿ ಹೇಳಿಕೊಂಡಾಗ ಅವರು ಶಾಸಕ ಗೂಳಿಹಟ್ಟಿ ಡಿ.ಶೇಖರ್ ಅವರನ್ನು ಭೇಟಿ ಮಾಡಿ ಪರಿಸ್ಥಿತಿಯನ್ನು ವಿವರಿಸಿದ್ದರು.