ರಾಜ್ಯದ ಹಲವು ಜಿಲ್ಲೆಗಳಲ್ಲಿ ಗೊಲ್ಲ ಸಮುದಾಯ ಪ್ರಭಾವಿಯಾಗಿದೆ. ಮಾಜಿ ಸಚಿವ ಎ.ಕೃಷ್ಣಪ್ಪ ಅವರ ಬಳಿಕ ಸಮಾಜ ಸಂಘಟನೆಯಲ್ಲಿ ಸಕ್ರಿಯರಾಗಿದ್ದೇವೆ. ಪತ್ನಿ, ಮಾಜಿ ಶಾಸಕಿ ಕೆ.ಪೂರ್ಣಿಮಾ ಮತ್ತು ನಾನು ಬಿಜೆಪಿ ಸೇರಿದ್ದು ಹಲವು ಕ್ಷೇತ್ರಗಳಲ್ಲಿ ಅನುಕೂಲವಾಗಿತ್ತು. ಆದರೆ, ಮಾರ್ಗ ಮಧ್ಯೆ ನಮ್ಮನ್ನು ಕೈಬಿಟ್ಟ ಬಿಜೆಪಿ ದ್ರೋಹ ಎಸಗಿದೆ.