‘ಗ್ರಾಮೀಣ ಪ್ರದೇಶದ ಜನರ ಸಮಸ್ಯೆಗಳನ್ನು ಪರಿಹರಿಸುವ ಉದ್ದೇಶದಿಂದ ಕಾರ್ಯಾಲಯವನ್ನು ಜಿಲ್ಲಾ ಪಂಚಾಯಿತಿ ಆವರಣದಲ್ಲಿ ತೆರೆಯಲಾಗಿದೆ. ತರಬೇತಿ ಕಾರ್ಯಗಾರ, ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸುವ ಕೆಲಸ ಮಾಡಲಾಗುವುದು. ದಿನದ 24 ಗಂಟೆ ಕಚೇರಿ ಕಾರ್ಯನಿರ್ವಹಿಸಲು ಸಹಾಯವಾಣಿ ಆರಂಭಿಸಲಾಗುವುದು. ದಾವಣಗೆರೆ ಹಾಗೂ ಬೆಂಗಳೂರಿನಲ್ಲಿಯೂ ಪ್ರತ್ಯೇಕ ಕಾರ್ಯಾಲಯಗಳಿವೆ’ ಎಂದು ಹೇಳಿದರು.