<p><strong>ಮೊಳಕಾಲ್ಮುರು</strong>: ತಾಲ್ಲೂಕಿನಾದ್ಯಂತ ಮಂಗಳವಾರ ದಿನವಿಡೀ ಸೋನೆ ಮಳೆ ಸುರಿದಿದೆ.</p>.<p>ಸೋಮವಾರ ತಡರಾತ್ರಿ ಆರಂಭವಾದ ಮಳೆ ಎಡೆಬಿಡದೇ ಸುರಿಯಿತು. ಮಂಗಳವಾರ ಬೆಳಿಗ್ಗೆಯಿಂದ ಮೋಡ ಮುಸುಕಿದ ವಾತಾವರಣ ಇದ್ದು ಆಗಾಗ್ಗೆ ಜಟಿ ಜಟಿ ಮಳೆ ಬಿದ್ದಿತು. ಮೊಳಕಾಲ್ಮುರು ಪಟ್ಟಣದಲ್ಲಿ ಬೆಳಿಗ್ಗೆ 8 ಗಂಟೆ ಸುಮಾರಿಗೆ ಆರಂಭವಾದ ಮಳೆ ಒಂದು ಗಂಟೆಗೂ ಹೆಚ್ಚು ಕಾಲ ಬಿರುಸಾಗಿ ಸುರಿಯತು. ಈ ವಾರದಲ್ಲಿ ಇದು ಎರಡನೇ ದೊಡ್ಡ ಮಳೆಯಾಗಿದೆ.</p>.<p>ಬೆಟ್ಟದ ಮೇಲಿನಿಂದ ನೀರು ಹರಿದು ಬರುತ್ತಿದ್ದು, ತಪ್ಪಲಿನಲ್ಲಿ ಮಳೆ ನೀರು ಜಿನುಗಲು ಆರಂಭವಾಗಿದೆ. ಸ್ಥಳೀಯ ನಿವಾಸಿಗಳಿಗೆ ಆತಂಕ ಉಂಟಾಗಿದೆ.</p>.<p>ಬಿ.ಜಿ.ಕೆರೆ, ಮೊಗಲಹಳ್ಳಿ, ಕೋನಸಾಗರ, ನೇರ್ಲಹಳ್ಳಿ, ರಾಯಾಪುರ, ಹಾನಗಲ್, ನಾಗಸಮುದ್ರ, ರಾಂಪುರ ಸುತ್ತಮುತ್ತ ಉತ್ತಮ ಮಳೆಯಾಗಿದೆ.</p>.<p>ಇಲ್ಲಿನ ಪ್ರಮುಖ ಮುಂಗಾರು ಹಂಗಾಮಿನ ಬೆಳೆಯಾದ ಶೇಂಗಾ ಬಿತ್ತನೆಗೆ ಹೊಲ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ದೇವಸಮುದ್ರ ಹೋಬಳಿಯಲ್ಲಿ ಹತ್ತಿ ಬಿತ್ತನೆ ಕಾರ್ಯಕ್ಕೆ ಸಿದ್ಧತೆ ಆರಂಭವಾಗಿದೆ ಎಂದು ಕೃಷಿ ಇಲಾಖೆ ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೊಳಕಾಲ್ಮುರು</strong>: ತಾಲ್ಲೂಕಿನಾದ್ಯಂತ ಮಂಗಳವಾರ ದಿನವಿಡೀ ಸೋನೆ ಮಳೆ ಸುರಿದಿದೆ.</p>.<p>ಸೋಮವಾರ ತಡರಾತ್ರಿ ಆರಂಭವಾದ ಮಳೆ ಎಡೆಬಿಡದೇ ಸುರಿಯಿತು. ಮಂಗಳವಾರ ಬೆಳಿಗ್ಗೆಯಿಂದ ಮೋಡ ಮುಸುಕಿದ ವಾತಾವರಣ ಇದ್ದು ಆಗಾಗ್ಗೆ ಜಟಿ ಜಟಿ ಮಳೆ ಬಿದ್ದಿತು. ಮೊಳಕಾಲ್ಮುರು ಪಟ್ಟಣದಲ್ಲಿ ಬೆಳಿಗ್ಗೆ 8 ಗಂಟೆ ಸುಮಾರಿಗೆ ಆರಂಭವಾದ ಮಳೆ ಒಂದು ಗಂಟೆಗೂ ಹೆಚ್ಚು ಕಾಲ ಬಿರುಸಾಗಿ ಸುರಿಯತು. ಈ ವಾರದಲ್ಲಿ ಇದು ಎರಡನೇ ದೊಡ್ಡ ಮಳೆಯಾಗಿದೆ.</p>.<p>ಬೆಟ್ಟದ ಮೇಲಿನಿಂದ ನೀರು ಹರಿದು ಬರುತ್ತಿದ್ದು, ತಪ್ಪಲಿನಲ್ಲಿ ಮಳೆ ನೀರು ಜಿನುಗಲು ಆರಂಭವಾಗಿದೆ. ಸ್ಥಳೀಯ ನಿವಾಸಿಗಳಿಗೆ ಆತಂಕ ಉಂಟಾಗಿದೆ.</p>.<p>ಬಿ.ಜಿ.ಕೆರೆ, ಮೊಗಲಹಳ್ಳಿ, ಕೋನಸಾಗರ, ನೇರ್ಲಹಳ್ಳಿ, ರಾಯಾಪುರ, ಹಾನಗಲ್, ನಾಗಸಮುದ್ರ, ರಾಂಪುರ ಸುತ್ತಮುತ್ತ ಉತ್ತಮ ಮಳೆಯಾಗಿದೆ.</p>.<p>ಇಲ್ಲಿನ ಪ್ರಮುಖ ಮುಂಗಾರು ಹಂಗಾಮಿನ ಬೆಳೆಯಾದ ಶೇಂಗಾ ಬಿತ್ತನೆಗೆ ಹೊಲ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ದೇವಸಮುದ್ರ ಹೋಬಳಿಯಲ್ಲಿ ಹತ್ತಿ ಬಿತ್ತನೆ ಕಾರ್ಯಕ್ಕೆ ಸಿದ್ಧತೆ ಆರಂಭವಾಗಿದೆ ಎಂದು ಕೃಷಿ ಇಲಾಖೆ ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>