<p><strong>ಚಿತ್ರದುರ್ಗ: ‘</strong>ನರೇಂದ್ರ ಮೋದಿ ಅವರು ದೇಶದ ಪ್ರಧಾನಮಂತ್ರಿಯಾಗಿ ಉಳಿದಿಲ್ಲ, ಅವರೊಬ್ಬ ಪ್ರಚಾರಮಂತ್ರಿ’ ಎಂದು ಸಮಾಜವಾದಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಖಿಲೇಶ್ ಯಾದವ್ ವ್ಯಂಗ್ಯವಾಡಿದರು.</p>.<p>‘ಪ್ರಧಾನಿ ಮೋದಿ ಸೇರಿದಂತೆ ಕೇಂದ್ರ ಮಂತ್ರಿಮಂಡಲ ಚುನಾವಣೆ ನಡೆಯುವ ರಾಜ್ಯದಲ್ಲಿ ಬೀಡುಬಿಡುತ್ತದೆ. ಕೆಲಸ ಮಾಡುವುದನ್ನು ಬಿಟ್ಟು ಚುನಾವಣಾ ಪ್ರಚಾರದಲ್ಲಿ ತೊಡಗುತ್ತದೆ. ಕರ್ನಾಟಕದ ಜನರು ಇದನ್ನು ಗಮನಿಸುತ್ತಿದ್ದಾರೆ. ಉತ್ತರಪ್ರದೇಶದಲ್ಲಿ ಈ ಪ್ರಚಾರದ ಅಬ್ಬರ ಇನ್ನೂ ಜೋರಾಗಿತ್ತು’ ಎಂದು ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದರು.</p>.<p>‘ಉಗ್ರರ ಸರಣಿ ದಾಳಿಗೆ ಕಾಶ್ಮೀರ ತತ್ತರಿಸಿದೆ. ಮಣಿಪುರದಲ್ಲಿ ಹಿಂಸಾಚಾರ ಭುಗಿಲೆದ್ದಿದೆ. ಛತೀಸ್ಗಡದಲ್ಲಿ ನಕ್ಸಲರು ಅಟ್ಟಹಾಸ ಮೆರೆಯುತ್ತಿದ್ದಾರೆ. ದೇಶದ ಎಲ್ಲೆಡೆ ಆತಂಕದ ವಾತಾವರಣ ಸೃಷ್ಟಿಯಾಗಿದೆ. ದೇಶ ಸುರಕ್ಷಿತವಾಗಿಲ್ಲ ಎಂಬುದಕ್ಕೆ ಇವು ನಿದರ್ಶನಗಳಾಗಿವೆ. ಪ್ರಧಾನಿ ಮೋದಿ ಅವರು ಚುನಾವಣಾ ಪ್ರಚಾರದಲ್ಲಿ ಮಗ್ನರಾಗಿದ್ದಾರೆ’ ಎಂದು ಕುಟುಕಿದರು.</p>.<p>ಬಜರಂಗ ದಳ ನಿಷೇಧ ಪ್ರಸ್ತಾವಕ್ಕೆ ಬೆಂಬಲ (ಲಖನೌ ವರದಿ): ಬಜರಂಗ ದಳವನ್ನು ನಿಷೇಧಿಸುವುದಾಗಿ ಕಾಂಗ್ರೆಸ್ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಹೇಳಿರುವುದನ್ನು ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಬೆಂಬಲಿಸಿದ್ದಾರೆ.</p>.<p>ಸುದ್ದಿಗಾರರೊಂದಿಗೆ ಇಲ್ಲಿ ಮಾತನಾಡಿದ ಅವರು, ‘ದ್ವೇಷ ಹರಡುವ ಮತ್ತು ಕೋಮು ಸೌಹಾರ್ದವನ್ನು ಕದಡುವ ಸಂಘಟನೆಗಳು ನಿಷೇಧವಾಗಬೇಕು. ಅಂಥ ಸಂಘಟನೆಗಳಿಗೆ ದೇಶದಲ್ಲಿ ಜಾಗ ಇಲ್ಲ’ ಎಂದು ಬಜರಂಗ ದಳದ ಹೆಸರನ್ನು ಉಲ್ಲೇಖಿಸದೆ ಹೇಳಿದರು.</p>.<p>ವಲ್ಲಭ ಭಾಯಿ ಪಟೇಲ್ ಅವರು ಗೃಹ ಸಚಿವರಾಗಿದ್ದಾಗ ರಾಷ್ಟ್ರೀಯ ಸ್ವಯಂ ಸೇವಕ ಸಂಘವನ್ನು (ಆರ್ಎಸ್ಎಸ್) ನಿಷೇಧಿಸಿದ್ದರು ಎಂಬುದನ್ನು ನೆನಪಿಸಿಕೊಂಡರು.</p>.<div><blockquote>ದೇಶದಲ್ಲಿ ಬಿಜೆಪಿ ನಾಯಕರಿಗೆ ಭಾರಿ ಭದ್ರತೆ ಸಿಗುತ್ತಿದೆ. ಉಳಿದ ಪಕ್ಷದ ನಾಯಕರನ್ನು ಕಡೆಗಣಿಸಲಾಗುತ್ತಿದೆ. ಭದ್ರತೆ ವಿಚಾರದಲ್ಲಿನ ಈ ತಾರತಮ್ಯ ಸರಿಯಲ್ಲ. ಮಲ್ಲಿಕಾರ್ಜುನ್ ಖರ್ಗೆ ಅವರಿಗೆ ಸೂಕ್ತ ಭದ್ರತೆ ಕಲ್ಪಿಸಬೇಕು. </blockquote><span class="attribution">ಅಖಿಲೇಶ್ ಯಾದವ್ ಸಮಾಜವಾದಿ ಪಕ್ಷದ ಅಧ್ಯಕ್ಷ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿತ್ರದುರ್ಗ: ‘</strong>ನರೇಂದ್ರ ಮೋದಿ ಅವರು ದೇಶದ ಪ್ರಧಾನಮಂತ್ರಿಯಾಗಿ ಉಳಿದಿಲ್ಲ, ಅವರೊಬ್ಬ ಪ್ರಚಾರಮಂತ್ರಿ’ ಎಂದು ಸಮಾಜವಾದಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಖಿಲೇಶ್ ಯಾದವ್ ವ್ಯಂಗ್ಯವಾಡಿದರು.</p>.<p>‘ಪ್ರಧಾನಿ ಮೋದಿ ಸೇರಿದಂತೆ ಕೇಂದ್ರ ಮಂತ್ರಿಮಂಡಲ ಚುನಾವಣೆ ನಡೆಯುವ ರಾಜ್ಯದಲ್ಲಿ ಬೀಡುಬಿಡುತ್ತದೆ. ಕೆಲಸ ಮಾಡುವುದನ್ನು ಬಿಟ್ಟು ಚುನಾವಣಾ ಪ್ರಚಾರದಲ್ಲಿ ತೊಡಗುತ್ತದೆ. ಕರ್ನಾಟಕದ ಜನರು ಇದನ್ನು ಗಮನಿಸುತ್ತಿದ್ದಾರೆ. ಉತ್ತರಪ್ರದೇಶದಲ್ಲಿ ಈ ಪ್ರಚಾರದ ಅಬ್ಬರ ಇನ್ನೂ ಜೋರಾಗಿತ್ತು’ ಎಂದು ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದರು.</p>.<p>‘ಉಗ್ರರ ಸರಣಿ ದಾಳಿಗೆ ಕಾಶ್ಮೀರ ತತ್ತರಿಸಿದೆ. ಮಣಿಪುರದಲ್ಲಿ ಹಿಂಸಾಚಾರ ಭುಗಿಲೆದ್ದಿದೆ. ಛತೀಸ್ಗಡದಲ್ಲಿ ನಕ್ಸಲರು ಅಟ್ಟಹಾಸ ಮೆರೆಯುತ್ತಿದ್ದಾರೆ. ದೇಶದ ಎಲ್ಲೆಡೆ ಆತಂಕದ ವಾತಾವರಣ ಸೃಷ್ಟಿಯಾಗಿದೆ. ದೇಶ ಸುರಕ್ಷಿತವಾಗಿಲ್ಲ ಎಂಬುದಕ್ಕೆ ಇವು ನಿದರ್ಶನಗಳಾಗಿವೆ. ಪ್ರಧಾನಿ ಮೋದಿ ಅವರು ಚುನಾವಣಾ ಪ್ರಚಾರದಲ್ಲಿ ಮಗ್ನರಾಗಿದ್ದಾರೆ’ ಎಂದು ಕುಟುಕಿದರು.</p>.<p>ಬಜರಂಗ ದಳ ನಿಷೇಧ ಪ್ರಸ್ತಾವಕ್ಕೆ ಬೆಂಬಲ (ಲಖನೌ ವರದಿ): ಬಜರಂಗ ದಳವನ್ನು ನಿಷೇಧಿಸುವುದಾಗಿ ಕಾಂಗ್ರೆಸ್ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಹೇಳಿರುವುದನ್ನು ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಬೆಂಬಲಿಸಿದ್ದಾರೆ.</p>.<p>ಸುದ್ದಿಗಾರರೊಂದಿಗೆ ಇಲ್ಲಿ ಮಾತನಾಡಿದ ಅವರು, ‘ದ್ವೇಷ ಹರಡುವ ಮತ್ತು ಕೋಮು ಸೌಹಾರ್ದವನ್ನು ಕದಡುವ ಸಂಘಟನೆಗಳು ನಿಷೇಧವಾಗಬೇಕು. ಅಂಥ ಸಂಘಟನೆಗಳಿಗೆ ದೇಶದಲ್ಲಿ ಜಾಗ ಇಲ್ಲ’ ಎಂದು ಬಜರಂಗ ದಳದ ಹೆಸರನ್ನು ಉಲ್ಲೇಖಿಸದೆ ಹೇಳಿದರು.</p>.<p>ವಲ್ಲಭ ಭಾಯಿ ಪಟೇಲ್ ಅವರು ಗೃಹ ಸಚಿವರಾಗಿದ್ದಾಗ ರಾಷ್ಟ್ರೀಯ ಸ್ವಯಂ ಸೇವಕ ಸಂಘವನ್ನು (ಆರ್ಎಸ್ಎಸ್) ನಿಷೇಧಿಸಿದ್ದರು ಎಂಬುದನ್ನು ನೆನಪಿಸಿಕೊಂಡರು.</p>.<div><blockquote>ದೇಶದಲ್ಲಿ ಬಿಜೆಪಿ ನಾಯಕರಿಗೆ ಭಾರಿ ಭದ್ರತೆ ಸಿಗುತ್ತಿದೆ. ಉಳಿದ ಪಕ್ಷದ ನಾಯಕರನ್ನು ಕಡೆಗಣಿಸಲಾಗುತ್ತಿದೆ. ಭದ್ರತೆ ವಿಚಾರದಲ್ಲಿನ ಈ ತಾರತಮ್ಯ ಸರಿಯಲ್ಲ. ಮಲ್ಲಿಕಾರ್ಜುನ್ ಖರ್ಗೆ ಅವರಿಗೆ ಸೂಕ್ತ ಭದ್ರತೆ ಕಲ್ಪಿಸಬೇಕು. </blockquote><span class="attribution">ಅಖಿಲೇಶ್ ಯಾದವ್ ಸಮಾಜವಾದಿ ಪಕ್ಷದ ಅಧ್ಯಕ್ಷ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>