<p>ಮೊಳಕಾಲ್ಮುರು: ‘ಲಭ್ಯ ಅನುದಾನದಲ್ಲಿ ಆದ್ಯತೆ ಮೇರೆಗೆ ಯಾರಿಗೂ ಅನ್ಯಾಯವಾ ಗದ ರೀತಿಯಲ್ಲಿ ಅಭಿವೃದ್ಧಿ ಕಾಮಗಾರಿ ಗಳನ್ನು ಕೈಗೆತ್ತಿಕೊಳ್ಳಲಾಗುತ್ತಿದೆ’ ಎಂದು ಶಾಸಕ ಎನ್.ವೈ. ಗೋಪಾಲಕೃಷ್ಣ ಹೇಳಿದರು.</p>.<p>ತಾಲ್ಲೂಕಿನ ಜೆ.ಬಿ.ಹಳ್ಳಿಯಲ್ಲಿ ಶನಿ ವಾರ ರಸ್ತೆ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು.</p>.<p>‘ಮುಖ್ಯಮಂತ್ರಿ ಮೂಲಸೌಕರ್ಯಗಳ ಅಭಿವೃದ್ಧಿ ಯೋಜನೆ ಅನುದಾನದಲ್ಲಿ ₹ 1 ಕೋಟಿ ವೆಚ್ಚದಲ್ಲಿ ಜೆ.ಬಿ.ಹಳ್ಳಿ ಗ್ರಾಮದ ಪರಿಶಿಷ್ಟ ಪಂಗಡ ಕಾಲೊನಿಯಲ್ಲಿ ಬಾಕ್ಸ್ ಚರಂಡಿ ಮತ್ತು ರಸ್ತೆ ನಿರ್ಮಾಣ, ಜೆ.ಬಿ.ಹಳ್ಳಿಯಿಂದ ಆಂಧ್ರ ಗಡಿಭಾಗವನ್ನು ಸಂಪರ್ಕಿಸುವ 5 ಕಿ.ಮೀ ಸಂಪರ್ಕ ರಸ್ತೆ ಅಭಿವೃದ್ಧಿಗೆ ₹ 2.50 ಕೋಟಿ, ಕಸಬಾ ಹೋಬಳಿಯ ಓದೋಬಯ್ಯನಹಟ್ಟಿ ಸಂಪರ್ಕ ರಸ್ತೆಯನ್ನು ₹ 1.50 ಕೋಟಿ ವೆಚ್ಚದಲ್ಲಿ, ತುಮಕೂರ್ಲಹಳ್ಳಿ ಸಂಪರ್ಕ ರಸ್ತೆ ಕಾಮಗಾರಿಯನ್ನು ₹ 1.50 ಕೋಟಿ ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗಿದೆ’ ಎಂದು ಮಾಹಿತಿ ನೀಡಿದರು.</p>.<p>ಲೋಕೋಪಯೋಗಿ ಎಇಇ ಲಕ್ಷ್ಮೀನಾರಾಯಣ್, ಗುತ್ತಿಗೆದಾರರ ಸಂಘದ ಅಧ್ಯಕ್ಷ ನಾಗಸಮುದ್ರ ಗೋವಿಂದಪ್ಪ, ಗೌರವಾಧ್ಯಕ್ಷ ಎಸ್. ಖಾದರ್, ಮುಖಂಡರಾದ ದಡಗೂರು ಮಂಜುನಾಥ್, ಮಹೇಶ್, ಅಶೋಕ ಜೆ.ಬಿ.ಹಳ್ಳಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260413-44-883832075</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮೊಳಕಾಲ್ಮುರು: ‘ಲಭ್ಯ ಅನುದಾನದಲ್ಲಿ ಆದ್ಯತೆ ಮೇರೆಗೆ ಯಾರಿಗೂ ಅನ್ಯಾಯವಾ ಗದ ರೀತಿಯಲ್ಲಿ ಅಭಿವೃದ್ಧಿ ಕಾಮಗಾರಿ ಗಳನ್ನು ಕೈಗೆತ್ತಿಕೊಳ್ಳಲಾಗುತ್ತಿದೆ’ ಎಂದು ಶಾಸಕ ಎನ್.ವೈ. ಗೋಪಾಲಕೃಷ್ಣ ಹೇಳಿದರು.</p>.<p>ತಾಲ್ಲೂಕಿನ ಜೆ.ಬಿ.ಹಳ್ಳಿಯಲ್ಲಿ ಶನಿ ವಾರ ರಸ್ತೆ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು.</p>.<p>‘ಮುಖ್ಯಮಂತ್ರಿ ಮೂಲಸೌಕರ್ಯಗಳ ಅಭಿವೃದ್ಧಿ ಯೋಜನೆ ಅನುದಾನದಲ್ಲಿ ₹ 1 ಕೋಟಿ ವೆಚ್ಚದಲ್ಲಿ ಜೆ.ಬಿ.ಹಳ್ಳಿ ಗ್ರಾಮದ ಪರಿಶಿಷ್ಟ ಪಂಗಡ ಕಾಲೊನಿಯಲ್ಲಿ ಬಾಕ್ಸ್ ಚರಂಡಿ ಮತ್ತು ರಸ್ತೆ ನಿರ್ಮಾಣ, ಜೆ.ಬಿ.ಹಳ್ಳಿಯಿಂದ ಆಂಧ್ರ ಗಡಿಭಾಗವನ್ನು ಸಂಪರ್ಕಿಸುವ 5 ಕಿ.ಮೀ ಸಂಪರ್ಕ ರಸ್ತೆ ಅಭಿವೃದ್ಧಿಗೆ ₹ 2.50 ಕೋಟಿ, ಕಸಬಾ ಹೋಬಳಿಯ ಓದೋಬಯ್ಯನಹಟ್ಟಿ ಸಂಪರ್ಕ ರಸ್ತೆಯನ್ನು ₹ 1.50 ಕೋಟಿ ವೆಚ್ಚದಲ್ಲಿ, ತುಮಕೂರ್ಲಹಳ್ಳಿ ಸಂಪರ್ಕ ರಸ್ತೆ ಕಾಮಗಾರಿಯನ್ನು ₹ 1.50 ಕೋಟಿ ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗಿದೆ’ ಎಂದು ಮಾಹಿತಿ ನೀಡಿದರು.</p>.<p>ಲೋಕೋಪಯೋಗಿ ಎಇಇ ಲಕ್ಷ್ಮೀನಾರಾಯಣ್, ಗುತ್ತಿಗೆದಾರರ ಸಂಘದ ಅಧ್ಯಕ್ಷ ನಾಗಸಮುದ್ರ ಗೋವಿಂದಪ್ಪ, ಗೌರವಾಧ್ಯಕ್ಷ ಎಸ್. ಖಾದರ್, ಮುಖಂಡರಾದ ದಡಗೂರು ಮಂಜುನಾಥ್, ಮಹೇಶ್, ಅಶೋಕ ಜೆ.ಬಿ.ಹಳ್ಳಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260413-44-883832075</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>