<p><strong>ಮೊಳಕಾಲ್ಮುರು:</strong> ‘ಶೋಷಿತ ಸಮುದಾಯಗಳು ಉತ್ತಮ ಸಂಘಟನೆಯಿಂದ ಸರ್ಕಾರದ ಸೌಲಭ್ಯಗಳನ್ನು ಪಡೆಯುವ ಮೂಲಕ ಬದುಕು ಕಟ್ಟಿಕೊಳ್ಳಲು ಸಾಧ್ಯವಿದೆ. ಈ ನಿಟ್ಟಿನಲ್ಲಿ ಜನಾಂಗದ ಮುಖಂಡರು ಅಗತ್ಯ ಮಾರ್ಗದರ್ಶನ ನೀಡಬೇಕು’ ಎಂದು ಶಾಸಕ ಎನ್.ವೈ.ಗೋಪಾಲಕೃಷ್ಣ ಹೇಳಿದರು.</p>.<p>ಇಲ್ಲಿನ ಹಾನಗಲ್ ರಸ್ತೆಯಲ್ಲಿ ನೂತನವಾಗಿ ನಿರ್ಮಾಣವಾಗಲಿರುವ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಭವನಕ್ಕೆ ಬುಧವಾರ ಶಂಕುಸ್ಥಾಪನೆ ಮಾಡಿ ಅವರು ಮಾತನಾಡಿದರು.</p>.<p>‘ಹಲವು ವರ್ಷಗಳಿಂದ ಜನಾಂಗದವರು ಭವನ ನಿರ್ಮಾಣಕ್ಕೆ ಬೇಡಿಕೆ ಇಟ್ಟಿದ್ದರು. ಕಾರಣಾಂತರದಿಂದ ನಿರ್ಮಾಣ ಮಾಡಲು ಸಾಧ್ಯವಾಗಿರಲಿಲ್ಲ. ಈಗ ₹ 4 ಕೋಟಿಗೂ ಹೆಚ್ಚು ವೆಚ್ಚದಲ್ಲಿ ಭವನ ನಿರ್ಮಿಸಲು ಕ್ರಮ ಕೈಗೊಳ್ಳಲಾಗಿದೆ. ಇದರಲ್ಲಿ ಸಮಾಜ ಕಲ್ಯಾಣ ಇಲಾಖೆಯಿಂದ ₹ 2 ಕೋಟಿ ಅನುದಾನ ಮಂಜೂರಾಗಿದೆ. ₹ 2 ಕೋಟಿ ಹೆಚ್ಚುವರಿಯಾಗಿ ನೀಡುವುದಾಗಿ ಸಚಿವ ಎಚ್.ಸಿ. ಮಹಾದೇವಪ್ಪ ಹೇಳಿದ್ದಾರೆ. ಆಧುನಿಕವಾಗಿ ಕಟ್ಟಡ ನಿರ್ಮಿಸಲು ಕ್ರಮ ಕೈಗೊಳ್ಳಲಾಗುವುದು’ ಎಂದು ಹೇಳಿದರು.</p>.<p>‘ಈಗ ಭವನಕ್ಕೆ ಗುರುತಿಸಿರುವ ಸ್ಥಳ ಮುಖ್ಯರಸ್ತೆಯಲ್ಲಿ ಇದ್ದು, ಹೆಚ್ಚು ಬೆಲೆಬಾಳುವ ಸ್ಥಳವಾಗಿದೆ. ಇದನ್ನು ಅಂಬೇಡ್ಕರ್ ಭವನಕ್ಕೆ ನೀಡಬಾರದು ಎಂಬ ಹುನ್ನಾರ ನಡೆಯಿತು. ಮಂಜೂರು ತಡೆಯುವ ಒತ್ತಡ ಮಾಡಲಾಗಿತ್ತು. ಈ ಸಮಸ್ಯೆಯನ್ನು ನಿಭಾಯಿಸಿ ಸ್ಥಳ ಮಂಜೂರು ಮಾಡಿಸಿ ಶಂಕುಸ್ಥಾಪನೆ ಮಾಡಲಾಗುತ್ತಿದೆ. ಭವನವನ್ನು ಸದ್ಬಳಕೆ ಮಾಡಿಕೊಳ್ಳಬೇಕು’ ಎಂದರು.</p>.<p>ಪಟ್ಟಣ ಪಂಚಾಯಿತಿ ಮಾಜಿ ಅಧ್ಯಕ್ಷ ಜಿ. ಪ್ರಕಾಶ್, ದಸಂಸ ಜಿಲ್ಲಾ ಸಂಚಾಲಕ ಬಿ.ಟಿ. ನಾಗಭೂಷಣ, ಗ್ರಾಮ ಪಂಚಾಯಿತಿ ಅಧ್ಯಕ್ಷ ಮೊಗಲಹಳ್ಳಿ ಎಸ್. ಜಯಣ್ಣ, ಜಿ. ಶ್ರೀನಿವಾಸಮೂರ್ತಿ, ಡಿ.ಒ. ಕರಿಬಸಪ್ಪ ಮಾತನಾಡಿದರು.</p>.<p>ತಹಶೀಲ್ದಾರ್ ಟಿ. ಜಗದೀಶ್, ಮುಖಂಡರಾದ ಕೊಂಡಾಪುರ ಪರಮೇಶ್ವರಪ್ಪ, ಡಿ.ಒ. ಮೊರಾರ್ಜಿ, ದಡಗೂರು ಮಂಜುನಾಥ, ಕೆ.ಎಸ್. ಸಣ್ಣಯಲ್ಲಪ್ಪ, ಬಡೋಬನಾಯಕ, ಎಸ್. ಪರಮೇಶ್, ಯರ್ಜೇನಹಳ್ಳಿ ನಾಗರಾಜ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೊಳಕಾಲ್ಮುರು:</strong> ‘ಶೋಷಿತ ಸಮುದಾಯಗಳು ಉತ್ತಮ ಸಂಘಟನೆಯಿಂದ ಸರ್ಕಾರದ ಸೌಲಭ್ಯಗಳನ್ನು ಪಡೆಯುವ ಮೂಲಕ ಬದುಕು ಕಟ್ಟಿಕೊಳ್ಳಲು ಸಾಧ್ಯವಿದೆ. ಈ ನಿಟ್ಟಿನಲ್ಲಿ ಜನಾಂಗದ ಮುಖಂಡರು ಅಗತ್ಯ ಮಾರ್ಗದರ್ಶನ ನೀಡಬೇಕು’ ಎಂದು ಶಾಸಕ ಎನ್.ವೈ.ಗೋಪಾಲಕೃಷ್ಣ ಹೇಳಿದರು.</p>.<p>ಇಲ್ಲಿನ ಹಾನಗಲ್ ರಸ್ತೆಯಲ್ಲಿ ನೂತನವಾಗಿ ನಿರ್ಮಾಣವಾಗಲಿರುವ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಭವನಕ್ಕೆ ಬುಧವಾರ ಶಂಕುಸ್ಥಾಪನೆ ಮಾಡಿ ಅವರು ಮಾತನಾಡಿದರು.</p>.<p>‘ಹಲವು ವರ್ಷಗಳಿಂದ ಜನಾಂಗದವರು ಭವನ ನಿರ್ಮಾಣಕ್ಕೆ ಬೇಡಿಕೆ ಇಟ್ಟಿದ್ದರು. ಕಾರಣಾಂತರದಿಂದ ನಿರ್ಮಾಣ ಮಾಡಲು ಸಾಧ್ಯವಾಗಿರಲಿಲ್ಲ. ಈಗ ₹ 4 ಕೋಟಿಗೂ ಹೆಚ್ಚು ವೆಚ್ಚದಲ್ಲಿ ಭವನ ನಿರ್ಮಿಸಲು ಕ್ರಮ ಕೈಗೊಳ್ಳಲಾಗಿದೆ. ಇದರಲ್ಲಿ ಸಮಾಜ ಕಲ್ಯಾಣ ಇಲಾಖೆಯಿಂದ ₹ 2 ಕೋಟಿ ಅನುದಾನ ಮಂಜೂರಾಗಿದೆ. ₹ 2 ಕೋಟಿ ಹೆಚ್ಚುವರಿಯಾಗಿ ನೀಡುವುದಾಗಿ ಸಚಿವ ಎಚ್.ಸಿ. ಮಹಾದೇವಪ್ಪ ಹೇಳಿದ್ದಾರೆ. ಆಧುನಿಕವಾಗಿ ಕಟ್ಟಡ ನಿರ್ಮಿಸಲು ಕ್ರಮ ಕೈಗೊಳ್ಳಲಾಗುವುದು’ ಎಂದು ಹೇಳಿದರು.</p>.<p>‘ಈಗ ಭವನಕ್ಕೆ ಗುರುತಿಸಿರುವ ಸ್ಥಳ ಮುಖ್ಯರಸ್ತೆಯಲ್ಲಿ ಇದ್ದು, ಹೆಚ್ಚು ಬೆಲೆಬಾಳುವ ಸ್ಥಳವಾಗಿದೆ. ಇದನ್ನು ಅಂಬೇಡ್ಕರ್ ಭವನಕ್ಕೆ ನೀಡಬಾರದು ಎಂಬ ಹುನ್ನಾರ ನಡೆಯಿತು. ಮಂಜೂರು ತಡೆಯುವ ಒತ್ತಡ ಮಾಡಲಾಗಿತ್ತು. ಈ ಸಮಸ್ಯೆಯನ್ನು ನಿಭಾಯಿಸಿ ಸ್ಥಳ ಮಂಜೂರು ಮಾಡಿಸಿ ಶಂಕುಸ್ಥಾಪನೆ ಮಾಡಲಾಗುತ್ತಿದೆ. ಭವನವನ್ನು ಸದ್ಬಳಕೆ ಮಾಡಿಕೊಳ್ಳಬೇಕು’ ಎಂದರು.</p>.<p>ಪಟ್ಟಣ ಪಂಚಾಯಿತಿ ಮಾಜಿ ಅಧ್ಯಕ್ಷ ಜಿ. ಪ್ರಕಾಶ್, ದಸಂಸ ಜಿಲ್ಲಾ ಸಂಚಾಲಕ ಬಿ.ಟಿ. ನಾಗಭೂಷಣ, ಗ್ರಾಮ ಪಂಚಾಯಿತಿ ಅಧ್ಯಕ್ಷ ಮೊಗಲಹಳ್ಳಿ ಎಸ್. ಜಯಣ್ಣ, ಜಿ. ಶ್ರೀನಿವಾಸಮೂರ್ತಿ, ಡಿ.ಒ. ಕರಿಬಸಪ್ಪ ಮಾತನಾಡಿದರು.</p>.<p>ತಹಶೀಲ್ದಾರ್ ಟಿ. ಜಗದೀಶ್, ಮುಖಂಡರಾದ ಕೊಂಡಾಪುರ ಪರಮೇಶ್ವರಪ್ಪ, ಡಿ.ಒ. ಮೊರಾರ್ಜಿ, ದಡಗೂರು ಮಂಜುನಾಥ, ಕೆ.ಎಸ್. ಸಣ್ಣಯಲ್ಲಪ್ಪ, ಬಡೋಬನಾಯಕ, ಎಸ್. ಪರಮೇಶ್, ಯರ್ಜೇನಹಳ್ಳಿ ನಾಗರಾಜ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>