<p><strong>ಮೊಳಕಾಲ್ಮುರು</strong>: ಸರ್ಕಾರಿ ಆಸ್ಪತ್ರೆಗಳಲ್ಲಿ ರೋಗಿಗಳ ಸಂಖ್ಯೆ ಹೆಚ್ಚಳದ ಒತ್ತಡವನ್ನು ತಡೆಯಲು ನಮ್ಮ ಕ್ಲಿನಿಕ್ಗಳನ್ನು ತೆರೆಯಲಾಗಿದ್ದು, ಸ್ಥಳೀಯರು ಅವುಗಳ ಸದುಪಯೋಗ ಮಾಡಿಕೊಳ್ಳಬೇಕು ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಮಧುಕುಮಾರ್ ಮನವಿ ಮಾಡಿದರು.</p>.<p>ಪಟ್ಟಣದ ಭಾಗ್ಯಜ್ಯೋತಿ ನಗರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ನಮ್ಮ ಕ್ಲಿನಿಕ್ ಆರಂಭವಾಗಿ ಒಂದು ವರ್ಷ ಪೂರೈಸಿರುವ ಕಾರಣ ಶುಕ್ರವಾರ ಆರೋಗ್ಯ ಇಲಾಖೆ ಆಯೋಜಿಸಿದ್ದ ಆರೋಗ್ಯ ಮೇಳದಲ್ಲಿ ಅವರು<br> ಮಾತನಾಡಿದರು.</p>.<p>‘ನಮ್ಮ ಕ್ಲಿನಿಕ್ನಲ್ಲಿ ರಕ್ತಪರೀಕ್ಷೆ, ಆರೋಗ್ಯ ತಪಾಸಣೆ, ಮಧುಮೇಹ ಪರೀಕ್ಷೆ ಸೇರಿ ಸಾಕಷ್ಟು ವ್ಯವಸ್ಥೆ ಮಾಡಲಾಗಿದೆ. ಸ್ಥಳೀಯವಾಗಿ ತುರ್ತು ಚಿಕಿತ್ಸೆ ಸಿಗಲಿ ಎನ್ನುವುದು ಇದರ ಮೂಲ ಉದ್ದೇಶವಾಗಿದೆ. ಈ ಬಗ್ಗೆ ಸ್ಥಳೀಯ ಸಂಸ್ಥೆಗಳು ಪ್ರಚುರಪಡಿಸುವ ಮೂಲಕ ಹೆಚ್ಚು ಜನರಿಗೆ ಸೌಲಭ್ಯ ಸಿಗುವಂತೆ ಮಾಡಬೇಕು’ ಎಂದು ಹೇಳಿದರು.</p>.<p>ಕಾರ್ಯಕ್ರಮವನ್ನು ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಲೀಲಾವತಿ ಸಿದ್ದಣ್ಣ ಉದ್ಘಾಟಿಸಿದರು. ಆಡಳಿತಾಧಿಕಾರಿ ಡಾ.ಮಂಜುನಾಥ್, ತಜ್ಞ ವೈದ್ಯರಾದ ಡಾ.ಸುಧೀಂದ್ರಬಾಬು, ಡಾ.ಗಿರೀಶ್, ಡಾ.ಗೀತಾ, ಡಾ.ಅಬ್ದುಲ್ಲಾ, ಹಿರಿಯ ಆರೋಗ್ಯ ಸಹಾಯಕಿ ಮಾರುತಮ್ಮ, ಆಶಾ ಮೆಂಟರ್ ರಾಧಮ್ಮ, ಸಿಎಚ್ಒ ಕುಮಾರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೊಳಕಾಲ್ಮುರು</strong>: ಸರ್ಕಾರಿ ಆಸ್ಪತ್ರೆಗಳಲ್ಲಿ ರೋಗಿಗಳ ಸಂಖ್ಯೆ ಹೆಚ್ಚಳದ ಒತ್ತಡವನ್ನು ತಡೆಯಲು ನಮ್ಮ ಕ್ಲಿನಿಕ್ಗಳನ್ನು ತೆರೆಯಲಾಗಿದ್ದು, ಸ್ಥಳೀಯರು ಅವುಗಳ ಸದುಪಯೋಗ ಮಾಡಿಕೊಳ್ಳಬೇಕು ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಮಧುಕುಮಾರ್ ಮನವಿ ಮಾಡಿದರು.</p>.<p>ಪಟ್ಟಣದ ಭಾಗ್ಯಜ್ಯೋತಿ ನಗರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ನಮ್ಮ ಕ್ಲಿನಿಕ್ ಆರಂಭವಾಗಿ ಒಂದು ವರ್ಷ ಪೂರೈಸಿರುವ ಕಾರಣ ಶುಕ್ರವಾರ ಆರೋಗ್ಯ ಇಲಾಖೆ ಆಯೋಜಿಸಿದ್ದ ಆರೋಗ್ಯ ಮೇಳದಲ್ಲಿ ಅವರು<br> ಮಾತನಾಡಿದರು.</p>.<p>‘ನಮ್ಮ ಕ್ಲಿನಿಕ್ನಲ್ಲಿ ರಕ್ತಪರೀಕ್ಷೆ, ಆರೋಗ್ಯ ತಪಾಸಣೆ, ಮಧುಮೇಹ ಪರೀಕ್ಷೆ ಸೇರಿ ಸಾಕಷ್ಟು ವ್ಯವಸ್ಥೆ ಮಾಡಲಾಗಿದೆ. ಸ್ಥಳೀಯವಾಗಿ ತುರ್ತು ಚಿಕಿತ್ಸೆ ಸಿಗಲಿ ಎನ್ನುವುದು ಇದರ ಮೂಲ ಉದ್ದೇಶವಾಗಿದೆ. ಈ ಬಗ್ಗೆ ಸ್ಥಳೀಯ ಸಂಸ್ಥೆಗಳು ಪ್ರಚುರಪಡಿಸುವ ಮೂಲಕ ಹೆಚ್ಚು ಜನರಿಗೆ ಸೌಲಭ್ಯ ಸಿಗುವಂತೆ ಮಾಡಬೇಕು’ ಎಂದು ಹೇಳಿದರು.</p>.<p>ಕಾರ್ಯಕ್ರಮವನ್ನು ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಲೀಲಾವತಿ ಸಿದ್ದಣ್ಣ ಉದ್ಘಾಟಿಸಿದರು. ಆಡಳಿತಾಧಿಕಾರಿ ಡಾ.ಮಂಜುನಾಥ್, ತಜ್ಞ ವೈದ್ಯರಾದ ಡಾ.ಸುಧೀಂದ್ರಬಾಬು, ಡಾ.ಗಿರೀಶ್, ಡಾ.ಗೀತಾ, ಡಾ.ಅಬ್ದುಲ್ಲಾ, ಹಿರಿಯ ಆರೋಗ್ಯ ಸಹಾಯಕಿ ಮಾರುತಮ್ಮ, ಆಶಾ ಮೆಂಟರ್ ರಾಧಮ್ಮ, ಸಿಎಚ್ಒ ಕುಮಾರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>