<p><strong>ಮೊಳಕಾಲ್ಮುರು</strong>: ‘ತಾಲ್ಲೂಕಿನ ಚಿಕ್ಕೋಬನಹಳ್ಳಿಯಲ್ಲಿ ಕೆಲ ದಿನಗಳಿಂದ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿದೆ’ ಎಂದು ಆರೋಪಿಸಿ ಗ್ರಾಮಸ್ಥರು ಸೋಮವಾರ ತಾಲ್ಲೂಕು ಕಚೇರಿ ಎದುರು ಸಾಂಕೇತಿಕವಾಗಿ ಪ್ರತಿಭಟನೆ ನಡೆಸಿದರು.</p>.<p>‘ತುಮಕೂರ್ಲಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಸೇರಿರುವ ಗ್ರಾಮದಲ್ಲಿ 3 ಸಾವಿರಕ್ಕೂ ಹೆಚ್ಚು ಜನಸಂಖ್ಯೆ ಇದೆ. ಪರಿಶಿಷ್ಟ ಜಾತಿ, ಪಂಗಡದ ಕೂಲಿ ಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿ ಇದ್ದು, ನೀರಿನ ಕೊರತೆಯಿಂದಾಗಿ ಕೂಲಿ ಕೆಲಸಕ್ಕೆ ಹೋಗುವುದನ್ನು ಬಿಟ್ಟು ನೀರು ತರುವುದು ಹಾಗೂ ನೀರಿಗಾಗಿ ಕಾಯುವುದೇ ಕೆಲಸವಾಗಿದೆ’ ಎಂದು ಪ್ರತಿಭಟನಕಾರರು ದೂರಿದರು.</p>.<p>‘ಸಮಸ್ಯೆ ಬಗ್ಗೆ ಗ್ರಾಮ ಪಂಚಾಯಿತಿ ಅಧಿಕಾರಿಗಳು ಹಾಗೂ ತಾಲ್ಲೂಕು ಪಂಚಾಯಿತಿ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಸಮಸ್ಯೆ ಇನ್ನಷ್ಟು ಹೆಚ್ಚುತ್ತಿರುವ ಕಾರಣ ಕ್ರಮಕ್ಕೆ ಆಗ್ರಹಿಸಿ ತಾಲ್ಲೂಕು ಕಚೇರಿ ಎದುರು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ’ ಎಂದರು.</p>.<p>ಉಪ ತಹಶೀಲ್ದಾರ್ ಟಿ. ಮಹಾಂತೇಶ್ ಮನವಿ ಸ್ವೀಕರಿಸಿದರು. ಮಹಾನಂದಿ, ಮಂಜುನಾಥ್, ನಿರ್ಮಲಾ, ಖಲಂದರ್, ಭಟ್ರಹಳ್ಳಿ ಧನಂಜಯ ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260519-44-2023082627</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೊಳಕಾಲ್ಮುರು</strong>: ‘ತಾಲ್ಲೂಕಿನ ಚಿಕ್ಕೋಬನಹಳ್ಳಿಯಲ್ಲಿ ಕೆಲ ದಿನಗಳಿಂದ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿದೆ’ ಎಂದು ಆರೋಪಿಸಿ ಗ್ರಾಮಸ್ಥರು ಸೋಮವಾರ ತಾಲ್ಲೂಕು ಕಚೇರಿ ಎದುರು ಸಾಂಕೇತಿಕವಾಗಿ ಪ್ರತಿಭಟನೆ ನಡೆಸಿದರು.</p>.<p>‘ತುಮಕೂರ್ಲಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಸೇರಿರುವ ಗ್ರಾಮದಲ್ಲಿ 3 ಸಾವಿರಕ್ಕೂ ಹೆಚ್ಚು ಜನಸಂಖ್ಯೆ ಇದೆ. ಪರಿಶಿಷ್ಟ ಜಾತಿ, ಪಂಗಡದ ಕೂಲಿ ಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿ ಇದ್ದು, ನೀರಿನ ಕೊರತೆಯಿಂದಾಗಿ ಕೂಲಿ ಕೆಲಸಕ್ಕೆ ಹೋಗುವುದನ್ನು ಬಿಟ್ಟು ನೀರು ತರುವುದು ಹಾಗೂ ನೀರಿಗಾಗಿ ಕಾಯುವುದೇ ಕೆಲಸವಾಗಿದೆ’ ಎಂದು ಪ್ರತಿಭಟನಕಾರರು ದೂರಿದರು.</p>.<p>‘ಸಮಸ್ಯೆ ಬಗ್ಗೆ ಗ್ರಾಮ ಪಂಚಾಯಿತಿ ಅಧಿಕಾರಿಗಳು ಹಾಗೂ ತಾಲ್ಲೂಕು ಪಂಚಾಯಿತಿ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಸಮಸ್ಯೆ ಇನ್ನಷ್ಟು ಹೆಚ್ಚುತ್ತಿರುವ ಕಾರಣ ಕ್ರಮಕ್ಕೆ ಆಗ್ರಹಿಸಿ ತಾಲ್ಲೂಕು ಕಚೇರಿ ಎದುರು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ’ ಎಂದರು.</p>.<p>ಉಪ ತಹಶೀಲ್ದಾರ್ ಟಿ. ಮಹಾಂತೇಶ್ ಮನವಿ ಸ್ವೀಕರಿಸಿದರು. ಮಹಾನಂದಿ, ಮಂಜುನಾಥ್, ನಿರ್ಮಲಾ, ಖಲಂದರ್, ಭಟ್ರಹಳ್ಳಿ ಧನಂಜಯ ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260519-44-2023082627</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>