<p>ಮೊಳಕಾಲ್ಮುರು: ರೈತರ ಜೊತೆ ದರ್ಪದಿಂದ ವರ್ತಿಸುತ್ತಿರುವ ಬೆಸ್ಕಾಂನ ಹಿರಿಯೂರು ವಿಭಾಗದ ಹಿರಿಯ ಅಧಿಕಾರಿ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಇಲ್ಲಿನ ಬೆಸ್ಕಾಂ ಕಚೇರಿ ಎದುರು ರೈತಸಂಘ ಹಾಗೂ ಹಸಿರುಸೇನೆ ನೇತೃತ್ವದಲ್ಲಿ ರೈತರು ಬುಧವಾರ ಪ್ರತಿಭಟನೆ ನಡೆಸಿದರು.</p>.<p>ಇಇ ಕಚೇರಿಯ ಉಸ್ತುವಾರಿ ಹಾಗೂ ವಿದ್ಯುತ್ ಪರಿಕರ, ಟಿಸಿ ವಿತರಣೆ ಹೊಣೆ ನಿರ್ವಹಿಸುತ್ತಿರುವ ಅಧಿಕಾರಿಯು ರೈತರಿಗೆ ಸರಿಯಾಗಿ ಸ್ಪಂದಿಸುತ್ತಿಲ್ಲ. ಈ ಬಗ್ಗೆ ಈಗಾಗಲೇ ರೈತ ಸಂಘ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದೆ. ಕೂಡಲೇ ಅವರನ್ನು ಪರಿಕರ ವಿತರಣೆ ಹೊಣೆಯಿಂದ ಮುಕ್ತಗೊಳಿಸಬೇಕು ಎಂದು ಆಗ್ರಹಿಸಿದರು.</p>.<p>ತಾಲ್ಲೂಕಿನ ನಾಗಸಮುದ್ರ, ಹಾನಗಲ್, ರಾಂಪುರ ಸೇರಿದಂತೆ ಹಲವು ವಿದ್ಯುತ್ ವಿತರಣಾ ಕೇಂದ್ರ ವ್ಯಾಪ್ತಿಯಲ್ಲಿ ಹಗಲು ವೇಳೆಯಲ್ಲಿ 7 ಗಂಟೆ ಕೃಷಿ ಪಂಪ್ಸೆಟ್ಗಳಿಗೆ ತ್ರೀಫೇಸ್ ವಿದ್ಯುತ್ ನೀಡಲಾಗುತ್ತಿದೆ. ಇದೇ ಮಾದರಿಯಲ್ಲಿ ಬಿ.ಜಿ.ಕೆರೆ, ತಳಕು ವಿದ್ಯುತ್ ಕೇಂದ್ರ ವ್ಯಾಪ್ತಿಯಲ್ಲಿಯೂ ನೀಡಬೇಕು ಎಂದು ಮನವಿ ಮಾಡಿದರು.</p>.<p>ಬೆಸ್ಕಾಂ ಸಹಾಯಕ ಇಇ ರವಿ ಅವರು ಮನವಿ ಸ್ವೀಕರಿಸಿದರು. ರೈತ ಸಂಘದ ಬೇಡರೆಡ್ಡಿಹಳ್ಳಿ ಬಸವರೆಡ್ಡಿ, ಮರ್ಲಹಳ್ಳಿ ರವಿಕುಮಾರ್, ಪಿ.ಟಿ. ಹಟ್ಟಿ ನಿಂಗಣ್ಣ, ಈರಣ್ಣ, ತಿಪ್ಪೇಸ್ವಾಮಿ ರೆಡ್ಡಿ, ತಿಪ್ಪೇಸ್ವಾಮಿ, ಶಿವಪ್ರಕಾಶ್, ಕೆ.ಟಿ. ನಾಗೇಶ್, ಮಹೇಶ್, ರಾಮಾಂಜಿನೇಯ ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260326-44-1756422056</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮೊಳಕಾಲ್ಮುರು: ರೈತರ ಜೊತೆ ದರ್ಪದಿಂದ ವರ್ತಿಸುತ್ತಿರುವ ಬೆಸ್ಕಾಂನ ಹಿರಿಯೂರು ವಿಭಾಗದ ಹಿರಿಯ ಅಧಿಕಾರಿ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಇಲ್ಲಿನ ಬೆಸ್ಕಾಂ ಕಚೇರಿ ಎದುರು ರೈತಸಂಘ ಹಾಗೂ ಹಸಿರುಸೇನೆ ನೇತೃತ್ವದಲ್ಲಿ ರೈತರು ಬುಧವಾರ ಪ್ರತಿಭಟನೆ ನಡೆಸಿದರು.</p>.<p>ಇಇ ಕಚೇರಿಯ ಉಸ್ತುವಾರಿ ಹಾಗೂ ವಿದ್ಯುತ್ ಪರಿಕರ, ಟಿಸಿ ವಿತರಣೆ ಹೊಣೆ ನಿರ್ವಹಿಸುತ್ತಿರುವ ಅಧಿಕಾರಿಯು ರೈತರಿಗೆ ಸರಿಯಾಗಿ ಸ್ಪಂದಿಸುತ್ತಿಲ್ಲ. ಈ ಬಗ್ಗೆ ಈಗಾಗಲೇ ರೈತ ಸಂಘ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದೆ. ಕೂಡಲೇ ಅವರನ್ನು ಪರಿಕರ ವಿತರಣೆ ಹೊಣೆಯಿಂದ ಮುಕ್ತಗೊಳಿಸಬೇಕು ಎಂದು ಆಗ್ರಹಿಸಿದರು.</p>.<p>ತಾಲ್ಲೂಕಿನ ನಾಗಸಮುದ್ರ, ಹಾನಗಲ್, ರಾಂಪುರ ಸೇರಿದಂತೆ ಹಲವು ವಿದ್ಯುತ್ ವಿತರಣಾ ಕೇಂದ್ರ ವ್ಯಾಪ್ತಿಯಲ್ಲಿ ಹಗಲು ವೇಳೆಯಲ್ಲಿ 7 ಗಂಟೆ ಕೃಷಿ ಪಂಪ್ಸೆಟ್ಗಳಿಗೆ ತ್ರೀಫೇಸ್ ವಿದ್ಯುತ್ ನೀಡಲಾಗುತ್ತಿದೆ. ಇದೇ ಮಾದರಿಯಲ್ಲಿ ಬಿ.ಜಿ.ಕೆರೆ, ತಳಕು ವಿದ್ಯುತ್ ಕೇಂದ್ರ ವ್ಯಾಪ್ತಿಯಲ್ಲಿಯೂ ನೀಡಬೇಕು ಎಂದು ಮನವಿ ಮಾಡಿದರು.</p>.<p>ಬೆಸ್ಕಾಂ ಸಹಾಯಕ ಇಇ ರವಿ ಅವರು ಮನವಿ ಸ್ವೀಕರಿಸಿದರು. ರೈತ ಸಂಘದ ಬೇಡರೆಡ್ಡಿಹಳ್ಳಿ ಬಸವರೆಡ್ಡಿ, ಮರ್ಲಹಳ್ಳಿ ರವಿಕುಮಾರ್, ಪಿ.ಟಿ. ಹಟ್ಟಿ ನಿಂಗಣ್ಣ, ಈರಣ್ಣ, ತಿಪ್ಪೇಸ್ವಾಮಿ ರೆಡ್ಡಿ, ತಿಪ್ಪೇಸ್ವಾಮಿ, ಶಿವಪ್ರಕಾಶ್, ಕೆ.ಟಿ. ನಾಗೇಶ್, ಮಹೇಶ್, ರಾಮಾಂಜಿನೇಯ ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260326-44-1756422056</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>