<p><strong>ಮೊಳಕಾಲ್ಮುರು:</strong> ‘ವಿದ್ಯುತ್ ಪ್ರಸರಣ ಮಾರ್ಗ ನಿರ್ಮಾಣಕ್ಕಾಗಿ ತಾಲ್ಲೂಕಿನಲ್ಲಿ ಜಮೀನು ವಶಕ್ಕೆ ಪಡೆಯುವ ಕಾರ್ಯ ಆರಂಭವಾಗಿದ್ದು, ಯಾವುದೇ ಕಾರಣಕ್ಕೂ ಇದಕ್ಕೆ ಅವಕಾಶ ಮಾಡಿಕೊಡಬಾರದು’ ಎಂದು ಆಗ್ರಹಿಸಿ ಶುಕ್ರವಾರ ರಾಜ್ಯ ರೈತಸಂಘ ಮತ್ತು ಹಸಿರುಸೇನೆ ನೇತೃತ್ವದಲ್ಲಿ ರೈತರು ಪ್ರತಿಭಟನೆ ನಡೆಸಿದರು.</p>.<p>‘ತಾಲ್ಲೂಕಿನ ಮೂಲಕ ಅನಂತಪುರ- 11 ಆರ್ಇಜಿ-1 ನೇ ಹಂತದ ಕಾಮಗಾರಿಗೆ ಸಂಬಂಧಪಟ್ಟಂತೆ ಪ್ರಸರಣ ಮಾರ್ಗಗಳ ಗೋಪುರ ಹಾಗೂ ಮೊಗಸಾಲೆಗಳ ನಿರ್ಮಾಣ ಮಾಡುತ್ತಾರೆಂಬ ಮಾಹಿತಿ ಸಿಕ್ಕಿದೆ. ಇದಕ್ಕೆ ಸಂಬಂಧಿಸಿದಂತೆ ಈಚೆಗೆ ತಾಲ್ಲೂಕು ಕಚೇರಿಯಲ್ಲಿ ಅಧಿಕಾರಿಗಳ ಸಭೆಯನ್ನೂ ನಡೆಸಲಾಗಿದೆ. ತಾಲ್ಲೂಕಿನ ತುಪ್ಪದಕ್ಕನಹಳ್ಳಿ ಮಾರ್ಗದಲ್ಲಿ ಈ ವಿದ್ಯುತ್ ಮಾರ್ಗ ಸಾಗಲಿದ್ದು, ಜಮೀನು ವಶಕ್ಕೆ ಪಡೆಯುವ ಆತಂಕ ಎದುರಾಗಿದೆ’ ಎಂದು ದೂರಿದರು.</p>.<p>‘ತಾಲ್ಲೂಕಿನಲ್ಲಿ ಪರಿಶಿಷ್ಟ ಜಾತಿ, ಪಂಗಡಕ್ಕೆ ಸೇರಿದ ಸಣ್ಣ ಹಾಗೂ ಅತೀ ಸಣ್ಣ ರೈತರು ಹೆಚ್ಚಾಗಿದ್ದು, ತುಂಡು ಭೂಮಿಗಳನ್ನು ಹೊಂದಿದ್ದಾರೆ. ಈ ಭೂಮಿಯನ್ನು ನಂಬಿಕೊಂಡು ಜೀವನ ನಡೆಸುತ್ತಿದ್ದಾರೆ. ಜತೆಗೆ ಜಾನುವಾರುಗಳನ್ನು ಸಲಹುತ್ತಿದ್ದಾರೆ. ಈಗ ವಿದ್ಯುತ್ ಮಾರ್ಗಕ್ಕಾಗಿ ಇಂತಹ ಜಮೀನು ವಶಕ್ಕೆ ಪಡೆದರೆ ರೈತರು ಬೀದಿಗೆ ಬೀಳಲಿದ್ದಾರೆ. ಗೋಪುರಗಳ ಕೆಳಗಡೆ ಯಾವ ಬೆಳೆಯನ್ನೂ ಬೆಳೆಯಲು ಬರುವುದಿಲ್ಲ’ ಎಂದು ಹೇಳಿದರು.</p>.<p>‘ಇದಕ್ಕೆ ಅಧಿಕಾರಿಗಳು ಅವಕಾಶ ನೀಡಬಾರದು, ನೀಡಿದರೆ ಪ್ರತಿಭಟನೆ ನಡೆಸಲಾಗುವುದು’ ಎಂದು ತಹಶೀಲ್ದಾರ್ ಟಿ. ಜಗದೀಶ್ ಅವರಿಗೆ ಮನವಿ ಸಲ್ಲಿಸಲಾಯಿತು.</p>.<p>ರೈತಸಂಘದ ರಾಜ್ಯ ಘಟಕದ ಕಾರ್ಯಾಧ್ಯಕ್ಷ ಬೇಡರೆಡ್ಡಿಹಳ್ಳಿ ಬಸವರೆಡ್ಡಿ, ಜಿಲ್ಲಾ ಘಟಕದ ಅಧ್ಯಕ್ಷ ಮರ್ಲಹಳ್ಳಿ ರವಿಕುಮಾರ್, ತಾಲ್ಲೂಕು ಘಟಕದ ಅಧ್ಯಕ್ಷ ಎಸ್. ರಾಜಣ್ಣ, ಎಸ್.ವಿ. ರಾಜಣ್ಣ, ರಾಮಾಂಜಿನೇಯ, ಜಿ.ಟಿ.ಶ್ರೀನಿವಾಸ್, ಜಿ.ಬಿ. ರುದ್ರಮುನಿ, ಪಿ.ಟಿ. ನಿಂಗಣ್ಣ, ಟಿ. ಶಿವಮೂರ್ತಿ, ಜಿ.ಎಲ್. ದಾಸಪ್ಪ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260509-44-1789625086</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೊಳಕಾಲ್ಮುರು:</strong> ‘ವಿದ್ಯುತ್ ಪ್ರಸರಣ ಮಾರ್ಗ ನಿರ್ಮಾಣಕ್ಕಾಗಿ ತಾಲ್ಲೂಕಿನಲ್ಲಿ ಜಮೀನು ವಶಕ್ಕೆ ಪಡೆಯುವ ಕಾರ್ಯ ಆರಂಭವಾಗಿದ್ದು, ಯಾವುದೇ ಕಾರಣಕ್ಕೂ ಇದಕ್ಕೆ ಅವಕಾಶ ಮಾಡಿಕೊಡಬಾರದು’ ಎಂದು ಆಗ್ರಹಿಸಿ ಶುಕ್ರವಾರ ರಾಜ್ಯ ರೈತಸಂಘ ಮತ್ತು ಹಸಿರುಸೇನೆ ನೇತೃತ್ವದಲ್ಲಿ ರೈತರು ಪ್ರತಿಭಟನೆ ನಡೆಸಿದರು.</p>.<p>‘ತಾಲ್ಲೂಕಿನ ಮೂಲಕ ಅನಂತಪುರ- 11 ಆರ್ಇಜಿ-1 ನೇ ಹಂತದ ಕಾಮಗಾರಿಗೆ ಸಂಬಂಧಪಟ್ಟಂತೆ ಪ್ರಸರಣ ಮಾರ್ಗಗಳ ಗೋಪುರ ಹಾಗೂ ಮೊಗಸಾಲೆಗಳ ನಿರ್ಮಾಣ ಮಾಡುತ್ತಾರೆಂಬ ಮಾಹಿತಿ ಸಿಕ್ಕಿದೆ. ಇದಕ್ಕೆ ಸಂಬಂಧಿಸಿದಂತೆ ಈಚೆಗೆ ತಾಲ್ಲೂಕು ಕಚೇರಿಯಲ್ಲಿ ಅಧಿಕಾರಿಗಳ ಸಭೆಯನ್ನೂ ನಡೆಸಲಾಗಿದೆ. ತಾಲ್ಲೂಕಿನ ತುಪ್ಪದಕ್ಕನಹಳ್ಳಿ ಮಾರ್ಗದಲ್ಲಿ ಈ ವಿದ್ಯುತ್ ಮಾರ್ಗ ಸಾಗಲಿದ್ದು, ಜಮೀನು ವಶಕ್ಕೆ ಪಡೆಯುವ ಆತಂಕ ಎದುರಾಗಿದೆ’ ಎಂದು ದೂರಿದರು.</p>.<p>‘ತಾಲ್ಲೂಕಿನಲ್ಲಿ ಪರಿಶಿಷ್ಟ ಜಾತಿ, ಪಂಗಡಕ್ಕೆ ಸೇರಿದ ಸಣ್ಣ ಹಾಗೂ ಅತೀ ಸಣ್ಣ ರೈತರು ಹೆಚ್ಚಾಗಿದ್ದು, ತುಂಡು ಭೂಮಿಗಳನ್ನು ಹೊಂದಿದ್ದಾರೆ. ಈ ಭೂಮಿಯನ್ನು ನಂಬಿಕೊಂಡು ಜೀವನ ನಡೆಸುತ್ತಿದ್ದಾರೆ. ಜತೆಗೆ ಜಾನುವಾರುಗಳನ್ನು ಸಲಹುತ್ತಿದ್ದಾರೆ. ಈಗ ವಿದ್ಯುತ್ ಮಾರ್ಗಕ್ಕಾಗಿ ಇಂತಹ ಜಮೀನು ವಶಕ್ಕೆ ಪಡೆದರೆ ರೈತರು ಬೀದಿಗೆ ಬೀಳಲಿದ್ದಾರೆ. ಗೋಪುರಗಳ ಕೆಳಗಡೆ ಯಾವ ಬೆಳೆಯನ್ನೂ ಬೆಳೆಯಲು ಬರುವುದಿಲ್ಲ’ ಎಂದು ಹೇಳಿದರು.</p>.<p>‘ಇದಕ್ಕೆ ಅಧಿಕಾರಿಗಳು ಅವಕಾಶ ನೀಡಬಾರದು, ನೀಡಿದರೆ ಪ್ರತಿಭಟನೆ ನಡೆಸಲಾಗುವುದು’ ಎಂದು ತಹಶೀಲ್ದಾರ್ ಟಿ. ಜಗದೀಶ್ ಅವರಿಗೆ ಮನವಿ ಸಲ್ಲಿಸಲಾಯಿತು.</p>.<p>ರೈತಸಂಘದ ರಾಜ್ಯ ಘಟಕದ ಕಾರ್ಯಾಧ್ಯಕ್ಷ ಬೇಡರೆಡ್ಡಿಹಳ್ಳಿ ಬಸವರೆಡ್ಡಿ, ಜಿಲ್ಲಾ ಘಟಕದ ಅಧ್ಯಕ್ಷ ಮರ್ಲಹಳ್ಳಿ ರವಿಕುಮಾರ್, ತಾಲ್ಲೂಕು ಘಟಕದ ಅಧ್ಯಕ್ಷ ಎಸ್. ರಾಜಣ್ಣ, ಎಸ್.ವಿ. ರಾಜಣ್ಣ, ರಾಮಾಂಜಿನೇಯ, ಜಿ.ಟಿ.ಶ್ರೀನಿವಾಸ್, ಜಿ.ಬಿ. ರುದ್ರಮುನಿ, ಪಿ.ಟಿ. ನಿಂಗಣ್ಣ, ಟಿ. ಶಿವಮೂರ್ತಿ, ಜಿ.ಎಲ್. ದಾಸಪ್ಪ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260509-44-1789625086</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>