<p>ಮೊಳಕಾಲ್ಮುರು: ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ಕಾರ್ಯಕರ್ತರು ಮಂಗಳವಾರ ತಾಲ್ಲೂಕು ಪಂಚಾಯಿತಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.</p>.<p>ಗ್ರಾಮಗಳಲ್ಲಿರುವ ನೀರಿನ ಶುದ್ಧೀಕರಣ ಘಟಕಗಳು ಕಾರ್ಯ ನಿರ್ವಹಿಸದ್ದರಿಂದ ಜನ ಅಶುದ್ಧ ನೀರನ್ನೇ ಕುಡಿಯಬೇಕಿದೆ. ಇನ್ನೂ ಕೆಲವು ಕಡೆ ಘಟಕಗಳನ್ನು ದುರಸ್ತಿ ಮಾಡಿಸದಿದ್ದರೂ ನಕಲಿ ದಾಖಲೆ ನೀಡಿ ಅಪಾರ ಹಣ ಪಡೆದುಕೊಂಡಿದ್ದಾರೆ. ಈ ಬಗ್ಗೆ ತನಿಖೆ ಮಾಡಿ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು. ಪಂಚಾಯಿತಿಗಳಲ್ಲಿ ಚರಂಡಿ, ಬೀದಿದೀಪ ನಿರ್ವಹಣೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಆಗ್ರಹಿಸಿದರು.</p>.<p>‘ಗ್ರಾಮೀಣ ಭಾಗದಲ್ಲಿ ಹಗಲಿನ ವೇಳೆಯೂ ಬೀದಿದೀಪಗಳು ಉರಿಯುತ್ತಿದ್ದು, ಪ್ರತಿ ತಿಂಗಳು ಲಕ್ಷಾಂತರ ರೂಪಾಯಿ ಪೋಲಾಗುತ್ತಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>ತಾಲ್ಲೂಕಿನ ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರು ಹಾಗೂ ಸಿಬ್ಬಂದಿ ಕೊರತೆ ಕಾಡುತ್ತಿದ್ದು, ಅಗತ್ಯ ಸಿಬ್ಬಂದಿ ನೇಮಿಸಬೇಕು. ಬಿ.ಜಿ. ಕೆರೆಯಲ್ಲಿ ನೂತನವಾಗಿ ನಿರ್ಮಿಸಿರುವ ಆಸ್ಪತ್ರೆ ಕಟ್ಟಡವನ್ನು ಸಾರ್ವಜನಿಕರ ಸೇವೆಗೆ ನೀಡಬೇಕು ಎಂದು ಆಗ್ರಹಿಸಿ ಮನವಿ ಸಲ್ಲಿಸಲಾಯಿತು.</p>.<p>ಸಂಘದ ರಾಜ್ಯ ಘಟಕದ ಕಾರ್ಯಾಧ್ಯಕ್ಷ ಬೇಡರೆಡ್ಡಿಹಳ್ಳಿ ಬಸವರೆಡ್ಡಿ, ಜಿಲ್ಲಾ ಘಟಕದ ಅಧ್ಯಕ್ಷ ಮರ್ಲಹಳ್ಳಿ ರವಿಕುಮಾರ್, ಎಸ್. ರಾಜಣ್ಣ, ಟಿ.ಚಂದ್ರಣ್ಣ, ನವೀನ್, ಆಚಾರಿ, ತಿಪ್ಪೇಸ್ವಾಮಿ, ಮೀಸೆ ತಿಪ್ಪೇಸ್ವಾಮಿ, ಎದ್ಲು ತಿಪ್ಪಸ್ವಾಮಿ, ಪಿ.ಟಿ. ಈರಣ್ಣ, ಪಿ.ಟಿ. ನಿಂಗಣ್ಣ ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260521-44-1773602442</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮೊಳಕಾಲ್ಮುರು: ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ಕಾರ್ಯಕರ್ತರು ಮಂಗಳವಾರ ತಾಲ್ಲೂಕು ಪಂಚಾಯಿತಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.</p>.<p>ಗ್ರಾಮಗಳಲ್ಲಿರುವ ನೀರಿನ ಶುದ್ಧೀಕರಣ ಘಟಕಗಳು ಕಾರ್ಯ ನಿರ್ವಹಿಸದ್ದರಿಂದ ಜನ ಅಶುದ್ಧ ನೀರನ್ನೇ ಕುಡಿಯಬೇಕಿದೆ. ಇನ್ನೂ ಕೆಲವು ಕಡೆ ಘಟಕಗಳನ್ನು ದುರಸ್ತಿ ಮಾಡಿಸದಿದ್ದರೂ ನಕಲಿ ದಾಖಲೆ ನೀಡಿ ಅಪಾರ ಹಣ ಪಡೆದುಕೊಂಡಿದ್ದಾರೆ. ಈ ಬಗ್ಗೆ ತನಿಖೆ ಮಾಡಿ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು. ಪಂಚಾಯಿತಿಗಳಲ್ಲಿ ಚರಂಡಿ, ಬೀದಿದೀಪ ನಿರ್ವಹಣೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಆಗ್ರಹಿಸಿದರು.</p>.<p>‘ಗ್ರಾಮೀಣ ಭಾಗದಲ್ಲಿ ಹಗಲಿನ ವೇಳೆಯೂ ಬೀದಿದೀಪಗಳು ಉರಿಯುತ್ತಿದ್ದು, ಪ್ರತಿ ತಿಂಗಳು ಲಕ್ಷಾಂತರ ರೂಪಾಯಿ ಪೋಲಾಗುತ್ತಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>ತಾಲ್ಲೂಕಿನ ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರು ಹಾಗೂ ಸಿಬ್ಬಂದಿ ಕೊರತೆ ಕಾಡುತ್ತಿದ್ದು, ಅಗತ್ಯ ಸಿಬ್ಬಂದಿ ನೇಮಿಸಬೇಕು. ಬಿ.ಜಿ. ಕೆರೆಯಲ್ಲಿ ನೂತನವಾಗಿ ನಿರ್ಮಿಸಿರುವ ಆಸ್ಪತ್ರೆ ಕಟ್ಟಡವನ್ನು ಸಾರ್ವಜನಿಕರ ಸೇವೆಗೆ ನೀಡಬೇಕು ಎಂದು ಆಗ್ರಹಿಸಿ ಮನವಿ ಸಲ್ಲಿಸಲಾಯಿತು.</p>.<p>ಸಂಘದ ರಾಜ್ಯ ಘಟಕದ ಕಾರ್ಯಾಧ್ಯಕ್ಷ ಬೇಡರೆಡ್ಡಿಹಳ್ಳಿ ಬಸವರೆಡ್ಡಿ, ಜಿಲ್ಲಾ ಘಟಕದ ಅಧ್ಯಕ್ಷ ಮರ್ಲಹಳ್ಳಿ ರವಿಕುಮಾರ್, ಎಸ್. ರಾಜಣ್ಣ, ಟಿ.ಚಂದ್ರಣ್ಣ, ನವೀನ್, ಆಚಾರಿ, ತಿಪ್ಪೇಸ್ವಾಮಿ, ಮೀಸೆ ತಿಪ್ಪೇಸ್ವಾಮಿ, ಎದ್ಲು ತಿಪ್ಪಸ್ವಾಮಿ, ಪಿ.ಟಿ. ಈರಣ್ಣ, ಪಿ.ಟಿ. ನಿಂಗಣ್ಣ ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260521-44-1773602442</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>