‘ಬಿಜೆಪಿಯ ದುರಾಡಳಿತ, ಬೆಲೆ ಏರಿಕೆ ನೀತಿ, ಲೋಕಸಭೆ–ವಿಧಾನಸಭೆ ಚುನಾವಣೆಗೂ ಮುನ್ನ ಅಭಿವೃದ್ಧಿ ವಿಚಾರದಲ್ಲಿ ಘೋಷಿಸಿರುವುದನ್ನು ಅನುಷ್ಠಾನಗೊಳಿಸುವಿಲ್ಲಿ ವಿಫಲ ಆಗಿರುವುದನ್ನು ಮನಗಂಡ ಮತದಾರರು ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಆಶೀರ್ವದಿಸಿದ್ದಾರೆ’ ಎಂದು ಕೆಪಿಸಿಸಿ ಮಾಧ್ಯಮ ವಿಶ್ಲೇಷಕ ಬಾಲಕೃಷ್ಣಸ್ವಾಮಿ ಯಾದವ್ ತಿಳಿಸಿದ್ದಾರೆ.