<p><strong>ಮೊಳಕಾಲ್ಮುರು:</strong> ತಾಲ್ಲೂಕು ಆಂಧ್ರಪ್ರದೇಶ ಗಡಿಯಲ್ಲಿದ್ದು, ನಿತ್ಯ ಎರಡೂ ರಾಜ್ಯಗಳ ಜನರ ಮಧ್ಯೆ ವ್ಯಾಪಾರ ವಹಿವಾಟು ನಡೆಯುತ್ತಿರುತ್ತವೆ. ಆದ್ದರಿಂದ ಆಂಧ್ರ ಸಂಪರ್ಕ ರಸ್ತೆಗಳ ಅಭಿವೃದ್ಧಿಗೆ ಆದ್ಯತೆ ನೀಡಲಾಗಿದೆ ಎಂದು ಶಾಸಕ ಎನ್.ವೈ. ಗೋಪಾಲಕೃಷ್ಣ ಹೇಳಿದರು.</p>.<p>ತಾಲ್ಲೂಕಿನ ಕೆರೆಕೊಂಡಾಪುರದಲ್ಲಿ ಈಚೆಗೆ ₹ 2 ಕೋಟಿ ವೆಚ್ಚದಲ್ಲಿ ಆಂಧ್ರ ಗಡಿ ಸಂಪರ್ಕ ರಸ್ತೆಗೆ ಶಂಕುಸ್ಥಾಪನೆ ಮಾಡಿ ಅವರು ಮಾತನಾಡಿದರು.</p>.<p>‘ಬಳ್ಳಾರಿ ಜಿಲ್ಲೆ ಗಡಿಯಿಂದ ರಾಷ್ಟ್ರೀಯ ಹೆದ್ದಾರಿ 150 ‘ಎ’ನಲ್ಲಿರುವ ವಡೇರಹಳ್ಳಿ, ಪೆನ್ನಮ್ಮನಹಳ್ಳಿ, ವೆಂಕಟಾಪುರ ಮಾರ್ಗವಾಗಿ ಆಂಧ್ರಪ್ರದೇಶವನ್ನು ಈ ರಸ್ತೆ ಸಂಪರ್ಕಿಸುತ್ತದೆ. ಈ ಮಾರ್ಗದಲ್ಲಿ ನಿತ್ಯ ಕೃಷಿ ಉತ್ಪನ್ನಗಳ ಸಾಗಣೆ ಹೆಚ್ಚಾಗಿ ಮಾಡಲಾಗುತ್ತಿದೆ. ರಸ್ತೆ ನಿರ್ಮಿಸಿದಲ್ಲಿ ರೈತರಿಗೆ, ಹಾಲು ಉತ್ಪಾದಕರಿಗೆ ಹೆಚ್ಚಿನ ಅನುಕೂಲವಾಗಲಿದೆ’ ಎಂದು ಹೇಳಿದರು.</p>.<p>ಲೋಕೋಪಯೋಗಿ ಎಇಇ ಲಕ್ಷ್ಮೀನಾರಾಯಣ್, ಮುಖಂಡರಾದ ಎಂ.ಡಿ. ಚನ್ನಾರೆಡ್ಡಿ, ಡಿ.ಪೆನ್ನಯ್ಯ, ಪರಮೇಶ್ವರಪ್ಪ ಮತ್ತು ಪಿಡಿಒ ಗುಂಡಪ್ಪ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೊಳಕಾಲ್ಮುರು:</strong> ತಾಲ್ಲೂಕು ಆಂಧ್ರಪ್ರದೇಶ ಗಡಿಯಲ್ಲಿದ್ದು, ನಿತ್ಯ ಎರಡೂ ರಾಜ್ಯಗಳ ಜನರ ಮಧ್ಯೆ ವ್ಯಾಪಾರ ವಹಿವಾಟು ನಡೆಯುತ್ತಿರುತ್ತವೆ. ಆದ್ದರಿಂದ ಆಂಧ್ರ ಸಂಪರ್ಕ ರಸ್ತೆಗಳ ಅಭಿವೃದ್ಧಿಗೆ ಆದ್ಯತೆ ನೀಡಲಾಗಿದೆ ಎಂದು ಶಾಸಕ ಎನ್.ವೈ. ಗೋಪಾಲಕೃಷ್ಣ ಹೇಳಿದರು.</p>.<p>ತಾಲ್ಲೂಕಿನ ಕೆರೆಕೊಂಡಾಪುರದಲ್ಲಿ ಈಚೆಗೆ ₹ 2 ಕೋಟಿ ವೆಚ್ಚದಲ್ಲಿ ಆಂಧ್ರ ಗಡಿ ಸಂಪರ್ಕ ರಸ್ತೆಗೆ ಶಂಕುಸ್ಥಾಪನೆ ಮಾಡಿ ಅವರು ಮಾತನಾಡಿದರು.</p>.<p>‘ಬಳ್ಳಾರಿ ಜಿಲ್ಲೆ ಗಡಿಯಿಂದ ರಾಷ್ಟ್ರೀಯ ಹೆದ್ದಾರಿ 150 ‘ಎ’ನಲ್ಲಿರುವ ವಡೇರಹಳ್ಳಿ, ಪೆನ್ನಮ್ಮನಹಳ್ಳಿ, ವೆಂಕಟಾಪುರ ಮಾರ್ಗವಾಗಿ ಆಂಧ್ರಪ್ರದೇಶವನ್ನು ಈ ರಸ್ತೆ ಸಂಪರ್ಕಿಸುತ್ತದೆ. ಈ ಮಾರ್ಗದಲ್ಲಿ ನಿತ್ಯ ಕೃಷಿ ಉತ್ಪನ್ನಗಳ ಸಾಗಣೆ ಹೆಚ್ಚಾಗಿ ಮಾಡಲಾಗುತ್ತಿದೆ. ರಸ್ತೆ ನಿರ್ಮಿಸಿದಲ್ಲಿ ರೈತರಿಗೆ, ಹಾಲು ಉತ್ಪಾದಕರಿಗೆ ಹೆಚ್ಚಿನ ಅನುಕೂಲವಾಗಲಿದೆ’ ಎಂದು ಹೇಳಿದರು.</p>.<p>ಲೋಕೋಪಯೋಗಿ ಎಇಇ ಲಕ್ಷ್ಮೀನಾರಾಯಣ್, ಮುಖಂಡರಾದ ಎಂ.ಡಿ. ಚನ್ನಾರೆಡ್ಡಿ, ಡಿ.ಪೆನ್ನಯ್ಯ, ಪರಮೇಶ್ವರಪ್ಪ ಮತ್ತು ಪಿಡಿಒ ಗುಂಡಪ್ಪ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>