<p><strong>ಮೊಳಕಾಲ್ಮುರು:</strong> ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ರಾಜ್ಯದಲ್ಲಿ ನಡೆಯುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪ್ರಗತಿಯಲ್ಲಿ ಮೊಳಕಾಲ್ಮುರು ತಾಲ್ಲೂಕು ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿದೆ.</p><p>‘ತಾಲ್ಲೂಕಿನಲ್ಲಿ ಒಟ್ಟು 33,898 ಮನೆಗಳ ಸಮೀಕ್ಷೆ ಮಾಡುವ ಗುರಿ ಹೊಂದಲಾಗಿದ್ದು, 28,606 ಮನೆಗಳ ಸಮೀಕ್ಷೆ ಪೂರ್ಣಗೊಳಿಸುವ ಮೂಲಕ ಶೇ 84.4ರಷ್ಟು ಸಾಧನೆ ಮಾಡಲಾಗಿದೆ. ಇನ್ನೂ 4 ದಿನ ಬಾಕಿ ಇದ್ದು, ಉಳಿಕೆ ಮನೆಗಳ ಸಮೀಕ್ಷೆ ನಡೆಸಿ ಪೂರ್ಣಗೊಳಿಬೇಕು’ ಎಂದು ಕಾರ್ಯಕ್ರಮದ ನೋಡೆಲ್ ಅಧಿಕಾರಿ ಹಾಗೂ ರೈಲ್ವೆ ಮಾರ್ಗ ವಿಶೇಷ ಭೂ ಸ್ವಾಧೀನ ಅಧಿಕಾರಿ ವೆಂಕಟೇಶ್ ನಾಯಕ್ ಹೇಳಿದರು.</p><p>‘ಬಿಟ್ಟು ಹೋಗಿರುವ ಮನೆಗಳನ್ನು ಗುರುತಿಸಿ ಸಮೀಕ್ಷೆ ಮಾಡಬೇಕು. ಮೊಳಕಾಲ್ಮುರು ತಾಲ್ಲೂಕಿನಲ್ಲಿ ಇಂತಹ 5,018 ಮನೆಗಳನ್ನು ಗುರುತಿಸಲಾಗಿದೆ. ಯಾವುದೇ ಕಾರಣಕ್ಕೂ ನಿರ್ಲಕ್ಷ್ಯ ಮಾಡದೇ ಈ ಮನೆಗಳ ಸಮೀಕ್ಷೆ ಮಾಡಿ ವರದಿ ಸಲ್ಲಿಸಬೇಕು. ಏನಾದರೂ ಅನುಮಾನವಿದ್ದಲ್ಲಿ ಹಿರಿಯ ಅಧಿಕಾರಿಗಳ ಸಲಹೆ ಪಡೆದು ಮುಂದುವರಿಸಬೇಕು’ ಎಂದು ಸೂಚಿಸಿದರು.</p><p>‘ಕೆಲವೆಡೆ ಹೊರ ರಾಜ್ಯದ ಕಾರ್ಮಿಕರು ವಾಸವಿದ್ದಾರೆ. ಅವರಿಗೆ ಕನ್ನಡವೇ ಸರಿಯಾಗಿ ಬರುವುದಿಲ್ಲ. ಅವರನ್ನು ಸಮೀಕ್ಷೆಗೆ ಒಳಪಡಿಸಬೇಕೇ ಬೇಡವೇ’ ಎಂದು ಕೆಲ ಅಧಿಕಾರಿಗಳು ಪ್ರಶ್ನೆ ಮಾಡಿದರು.</p><p>ತಹಶೀಲ್ದಾರ್ ಟಿ. ಜಗದೀಶ್, ಉಪ ತಹಶೀಲ್ದಾರ್ ಮಹಾಂತೇಶ್, ಅಧಿಕಾರಿಗಳಾದ ರಂಗಪ್ಪ, ಬಿಇಒ ನಿರ್ಮಲಾದೇವಿ, ಸಿಡಿಪಿಒ ನವೀನ್ ಕುಮಾರ್, ಬಿಆರ್ಸಿ ಕೆ. ತಿಪ್ಪೇಸ್ವಾಮಿ, ಅರಣ್ಯಾಧಿಕಾರಿ ಶ್ರೀಹರ್ಷಾ ಇದ್ದರು.</p>.<p><strong>ಬಿಟ್ಟು ಹೋಗಿರುವ ಮನೆಗಳನ್ನು ಗುರುತಿಸಿ ಸಮೀಕ್ಷೆ ಮಾಡಲು ಸೂಚನೆ</strong></p><p><strong>ಅನುಮಾನಗಳಿದ್ದಲ್ಲಿ ಹಿರಿಯ ಅಧಿಕಾರಿಗಳ ಸಲಹೆ ಪಡೆಯಿರಿ</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೊಳಕಾಲ್ಮುರು:</strong> ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ರಾಜ್ಯದಲ್ಲಿ ನಡೆಯುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪ್ರಗತಿಯಲ್ಲಿ ಮೊಳಕಾಲ್ಮುರು ತಾಲ್ಲೂಕು ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿದೆ.</p><p>‘ತಾಲ್ಲೂಕಿನಲ್ಲಿ ಒಟ್ಟು 33,898 ಮನೆಗಳ ಸಮೀಕ್ಷೆ ಮಾಡುವ ಗುರಿ ಹೊಂದಲಾಗಿದ್ದು, 28,606 ಮನೆಗಳ ಸಮೀಕ್ಷೆ ಪೂರ್ಣಗೊಳಿಸುವ ಮೂಲಕ ಶೇ 84.4ರಷ್ಟು ಸಾಧನೆ ಮಾಡಲಾಗಿದೆ. ಇನ್ನೂ 4 ದಿನ ಬಾಕಿ ಇದ್ದು, ಉಳಿಕೆ ಮನೆಗಳ ಸಮೀಕ್ಷೆ ನಡೆಸಿ ಪೂರ್ಣಗೊಳಿಬೇಕು’ ಎಂದು ಕಾರ್ಯಕ್ರಮದ ನೋಡೆಲ್ ಅಧಿಕಾರಿ ಹಾಗೂ ರೈಲ್ವೆ ಮಾರ್ಗ ವಿಶೇಷ ಭೂ ಸ್ವಾಧೀನ ಅಧಿಕಾರಿ ವೆಂಕಟೇಶ್ ನಾಯಕ್ ಹೇಳಿದರು.</p><p>‘ಬಿಟ್ಟು ಹೋಗಿರುವ ಮನೆಗಳನ್ನು ಗುರುತಿಸಿ ಸಮೀಕ್ಷೆ ಮಾಡಬೇಕು. ಮೊಳಕಾಲ್ಮುರು ತಾಲ್ಲೂಕಿನಲ್ಲಿ ಇಂತಹ 5,018 ಮನೆಗಳನ್ನು ಗುರುತಿಸಲಾಗಿದೆ. ಯಾವುದೇ ಕಾರಣಕ್ಕೂ ನಿರ್ಲಕ್ಷ್ಯ ಮಾಡದೇ ಈ ಮನೆಗಳ ಸಮೀಕ್ಷೆ ಮಾಡಿ ವರದಿ ಸಲ್ಲಿಸಬೇಕು. ಏನಾದರೂ ಅನುಮಾನವಿದ್ದಲ್ಲಿ ಹಿರಿಯ ಅಧಿಕಾರಿಗಳ ಸಲಹೆ ಪಡೆದು ಮುಂದುವರಿಸಬೇಕು’ ಎಂದು ಸೂಚಿಸಿದರು.</p><p>‘ಕೆಲವೆಡೆ ಹೊರ ರಾಜ್ಯದ ಕಾರ್ಮಿಕರು ವಾಸವಿದ್ದಾರೆ. ಅವರಿಗೆ ಕನ್ನಡವೇ ಸರಿಯಾಗಿ ಬರುವುದಿಲ್ಲ. ಅವರನ್ನು ಸಮೀಕ್ಷೆಗೆ ಒಳಪಡಿಸಬೇಕೇ ಬೇಡವೇ’ ಎಂದು ಕೆಲ ಅಧಿಕಾರಿಗಳು ಪ್ರಶ್ನೆ ಮಾಡಿದರು.</p><p>ತಹಶೀಲ್ದಾರ್ ಟಿ. ಜಗದೀಶ್, ಉಪ ತಹಶೀಲ್ದಾರ್ ಮಹಾಂತೇಶ್, ಅಧಿಕಾರಿಗಳಾದ ರಂಗಪ್ಪ, ಬಿಇಒ ನಿರ್ಮಲಾದೇವಿ, ಸಿಡಿಪಿಒ ನವೀನ್ ಕುಮಾರ್, ಬಿಆರ್ಸಿ ಕೆ. ತಿಪ್ಪೇಸ್ವಾಮಿ, ಅರಣ್ಯಾಧಿಕಾರಿ ಶ್ರೀಹರ್ಷಾ ಇದ್ದರು.</p>.<p><strong>ಬಿಟ್ಟು ಹೋಗಿರುವ ಮನೆಗಳನ್ನು ಗುರುತಿಸಿ ಸಮೀಕ್ಷೆ ಮಾಡಲು ಸೂಚನೆ</strong></p><p><strong>ಅನುಮಾನಗಳಿದ್ದಲ್ಲಿ ಹಿರಿಯ ಅಧಿಕಾರಿಗಳ ಸಲಹೆ ಪಡೆಯಿರಿ</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>