<p><strong>ಮೊಳಕಾಲ್ಮುರು</strong>: ‘ಅಂತರ್ಜಲ ಹೆಚ್ಚಳ ಕಾಮಗಾರಿಗಳಿಗೆ ಆದ್ಯತೆ ಮೇರೆಗೆ ಹೆಚ್ಚಿನ ಒತ್ತು ನೀಡಲಾಗಿದ್ದು, ಚೆಕ್ ಡ್ಯಾಂ, ಬ್ಯಾರೇಜ್ ನಿರ್ಮಾಣ ಕಾರ್ಯಗಳನ್ನು ಕೈಗೆತ್ತಿಕೊಳ್ಳಲಾಗಿದೆ’ ಎಂದು ಶಾಸಕ ಎನ್.ವೈ. ಗೋಪಾಲಕೃಷ್ಣ ಹೇಳಿದರು.</p>.<p>ತಾಲ್ಲೂಕಿನ ಮಾಚೇನಹಳ್ಳಿ ಬಳಿ ಬುಧವಾರ ₹ 3 ಕೋಟಿ ವೆಚ್ಚದಲ್ಲಿ ಚಿನ್ನಹಗರಿ ಹಳ್ಳದಲ್ಲಿ ನಿರ್ಮಿಸಲಿರುವ ನೂತನ ಚೆಕ್ ಡ್ಯಾಂ ಕಾಮಗಾರಿಗೆ ಶಂಕುಸ್ಥಾಪನೆ ಮಾಡಿ ಮಾತನಾಡಿದರು.</p>.<p>‘ಚಿನ್ನಹಗರಿ ಮೂಲಕ ಮಳೆಗಾಲದಲ್ಲಿ ಸಾಕಷ್ಟು ನೀರು ಹರಿದು ಆಂಧ್ರಕ್ಕೆ ಹೋಗುತ್ತದೆ. ಇದನ್ನು ತಡೆಯಲು ಈ ಮಾರ್ಗದಲ್ಲಿ ಅನೇಕ ಚೆಕ್ ಡ್ಯಾಂಗಳನ್ನು ನಿರ್ಮಾಣ ಮಾಡಲಾಗಿದೆ. ಈಗ ಬ್ಯಾರೇಜ್ ನಿರ್ಮಿಸಿ ನೀರು ನಿಲ್ಲಿಸುವ ಮೂಲಕ ಅಂತರ್ಜಲ ಹೆಚ್ಚಳಕ್ಕೆ ಕ್ರಮ ಕೈಗೊಳ್ಳಲಾಗಿದೆ. ದೇವಸಮುದ್ರ ಹೋಬಳಿಯಲ್ಲಿ ಇತ್ತೀಚಿನ ದಿನಗಳಲ್ಲಿ ನೀರಿನ ಲಭ್ಯತೆ ಹೆಚ್ಚಳವಾಗಿದ್ದು, ರೈತರು ಸದುಪಯೋಗ ಮಾಡಿಕೊಳ್ಳಬೇಕು’ ಎಂದರು.</p>.<p>ಇದೇ ವೇಳೆ ಜಿಲ್ಲಾ ಪಂಚಾಯಿತಿಯಿಂದ ಪಕ್ಕುರ್ತಿಯಲ್ಲಿ ₹ 18.31 ಲಕ್ಷ ವೆಚ್ಚದ ಸಿಸಿ ರಸ್ತೆ ಮತ್ತು ಚರಂಡಿ ಕಾಮಗಾರಿಗೆ, ₹ 4 ಲಕ್ಷ ವೆಚ್ಚದ ಹೈಮಾಸ್ಟ್ ದೀಪಕ್ಕೆ, ದೋಸರೆಡ್ಡಿ ಗ್ರಾಮದಲ್ಲಿ ₹ 20 ಲಕ್ಷ ವೆಚ್ಚದ ಸಿಸಿ ರಸ್ತೆ, ಚರಂಡಿ ಕಾಮಗಾರಿಗೆ ಶಂಕುಸ್ಥಾಪನೆ ಮಾಡಿದರು.</p>.<p>ನಂತರ ದೇವಸಮುದ್ರ, ನಾಗಸಮುದ್ರ ಮತ್ತು ಯರ್ಜೇನಹಳ್ಳಿ ಗ್ರಾಮಗಳ ಪರಿಶಿಷ್ಟ ಜಾತಿ, ವರ್ಗದ ಕಾಲೊನಿಗಳಲ್ಲಿ ₹ 18 ಲಕ್ಷ ವೆಚ್ಚದ ಸಿಸಿ ರಸ್ತೆ, ಚರಂಡಿ ಕಾರ್ಯಗಳಿಗೆ ಭೂಮಿಪೂಜೆ ಮಾಡಲಾಯಿತು.</p>.<p>ತಾಲ್ಲೂಕು ಪಂಚಾಯಿತಿ ಇಒ ಎಂ. ಹನುಮಂತಪ್ಪ, ಜಿಲ್ಲಾ ಪಂಚಾಯಿತಿ ಎಇಇ ಎಚ್. ಲಿಂಗರಾಜ್, ಮುಖಂಡರಾದ ಜಿ. ಕುಮಾರಸ್ವಾಮಿ, ಜಿ.ಎನ್. ಗೋವಿಂದಪ್ಪ, ಭರತ್ ಕುಮಾರ್, ದಡಗೂರು ಮಂಜುನಾಥ್, ಉಜ್ಜಿನಪ್ಪ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೊಳಕಾಲ್ಮುರು</strong>: ‘ಅಂತರ್ಜಲ ಹೆಚ್ಚಳ ಕಾಮಗಾರಿಗಳಿಗೆ ಆದ್ಯತೆ ಮೇರೆಗೆ ಹೆಚ್ಚಿನ ಒತ್ತು ನೀಡಲಾಗಿದ್ದು, ಚೆಕ್ ಡ್ಯಾಂ, ಬ್ಯಾರೇಜ್ ನಿರ್ಮಾಣ ಕಾರ್ಯಗಳನ್ನು ಕೈಗೆತ್ತಿಕೊಳ್ಳಲಾಗಿದೆ’ ಎಂದು ಶಾಸಕ ಎನ್.ವೈ. ಗೋಪಾಲಕೃಷ್ಣ ಹೇಳಿದರು.</p>.<p>ತಾಲ್ಲೂಕಿನ ಮಾಚೇನಹಳ್ಳಿ ಬಳಿ ಬುಧವಾರ ₹ 3 ಕೋಟಿ ವೆಚ್ಚದಲ್ಲಿ ಚಿನ್ನಹಗರಿ ಹಳ್ಳದಲ್ಲಿ ನಿರ್ಮಿಸಲಿರುವ ನೂತನ ಚೆಕ್ ಡ್ಯಾಂ ಕಾಮಗಾರಿಗೆ ಶಂಕುಸ್ಥಾಪನೆ ಮಾಡಿ ಮಾತನಾಡಿದರು.</p>.<p>‘ಚಿನ್ನಹಗರಿ ಮೂಲಕ ಮಳೆಗಾಲದಲ್ಲಿ ಸಾಕಷ್ಟು ನೀರು ಹರಿದು ಆಂಧ್ರಕ್ಕೆ ಹೋಗುತ್ತದೆ. ಇದನ್ನು ತಡೆಯಲು ಈ ಮಾರ್ಗದಲ್ಲಿ ಅನೇಕ ಚೆಕ್ ಡ್ಯಾಂಗಳನ್ನು ನಿರ್ಮಾಣ ಮಾಡಲಾಗಿದೆ. ಈಗ ಬ್ಯಾರೇಜ್ ನಿರ್ಮಿಸಿ ನೀರು ನಿಲ್ಲಿಸುವ ಮೂಲಕ ಅಂತರ್ಜಲ ಹೆಚ್ಚಳಕ್ಕೆ ಕ್ರಮ ಕೈಗೊಳ್ಳಲಾಗಿದೆ. ದೇವಸಮುದ್ರ ಹೋಬಳಿಯಲ್ಲಿ ಇತ್ತೀಚಿನ ದಿನಗಳಲ್ಲಿ ನೀರಿನ ಲಭ್ಯತೆ ಹೆಚ್ಚಳವಾಗಿದ್ದು, ರೈತರು ಸದುಪಯೋಗ ಮಾಡಿಕೊಳ್ಳಬೇಕು’ ಎಂದರು.</p>.<p>ಇದೇ ವೇಳೆ ಜಿಲ್ಲಾ ಪಂಚಾಯಿತಿಯಿಂದ ಪಕ್ಕುರ್ತಿಯಲ್ಲಿ ₹ 18.31 ಲಕ್ಷ ವೆಚ್ಚದ ಸಿಸಿ ರಸ್ತೆ ಮತ್ತು ಚರಂಡಿ ಕಾಮಗಾರಿಗೆ, ₹ 4 ಲಕ್ಷ ವೆಚ್ಚದ ಹೈಮಾಸ್ಟ್ ದೀಪಕ್ಕೆ, ದೋಸರೆಡ್ಡಿ ಗ್ರಾಮದಲ್ಲಿ ₹ 20 ಲಕ್ಷ ವೆಚ್ಚದ ಸಿಸಿ ರಸ್ತೆ, ಚರಂಡಿ ಕಾಮಗಾರಿಗೆ ಶಂಕುಸ್ಥಾಪನೆ ಮಾಡಿದರು.</p>.<p>ನಂತರ ದೇವಸಮುದ್ರ, ನಾಗಸಮುದ್ರ ಮತ್ತು ಯರ್ಜೇನಹಳ್ಳಿ ಗ್ರಾಮಗಳ ಪರಿಶಿಷ್ಟ ಜಾತಿ, ವರ್ಗದ ಕಾಲೊನಿಗಳಲ್ಲಿ ₹ 18 ಲಕ್ಷ ವೆಚ್ಚದ ಸಿಸಿ ರಸ್ತೆ, ಚರಂಡಿ ಕಾರ್ಯಗಳಿಗೆ ಭೂಮಿಪೂಜೆ ಮಾಡಲಾಯಿತು.</p>.<p>ತಾಲ್ಲೂಕು ಪಂಚಾಯಿತಿ ಇಒ ಎಂ. ಹನುಮಂತಪ್ಪ, ಜಿಲ್ಲಾ ಪಂಚಾಯಿತಿ ಎಇಇ ಎಚ್. ಲಿಂಗರಾಜ್, ಮುಖಂಡರಾದ ಜಿ. ಕುಮಾರಸ್ವಾಮಿ, ಜಿ.ಎನ್. ಗೋವಿಂದಪ್ಪ, ಭರತ್ ಕುಮಾರ್, ದಡಗೂರು ಮಂಜುನಾಥ್, ಉಜ್ಜಿನಪ್ಪ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>