<p>ಮೊಳಕಾಲ್ಮುರು: ತಾಲ್ಲೂಕಿನ ರಾಂಪುರದಲ್ಲಿ ಅಳವಡಿಸಿರುವ ಡಿವೈಡರ್ ವಿದ್ಯುತ್ ದೀಪಕ್ಕೆ ಈಚೆಗೆ ಚಾಲನೆ ನೀಡಲಾಯಿತು.</p>.<p>ಗ್ರಾಮ ಪಂಚಾಯಿತಿ ಮುಂಭಾಗದಲ್ಲಿ ಹಾದು ಹೋಗಿರುವ ಬೆಂಗಳೂರು- ಬಳ್ಳಾರಿ ಮುಖ್ಯರಸ್ತೆಯ ಡಿವೈಡರ್ಗೆ ಈ ಹಿಂದೆ ವಿದ್ಯುತ್ ದೀಪ ಅಳವಡಿಸಲಾಗಿತ್ತು. ಈಗ ಓಬಳಾಪುರ ಮುಖ್ಯರಸ್ತೆಯಲ್ಲಿ ಇದಕ್ಕೆ ಚಾಲನೆ ನೀಡಲಾಗಿದೆ.</p>.<p>2025-26ನೇ ಸಾಲಿನ ಮುಖ್ಯಮಂತ್ರಿಗಳ ಮೂಲಸೌಕರ್ಯ ಅಭಿವೃದ್ಧಿ ಯೋಜನೆ ಅಡಿಯಲ್ಲಿ ₹95 ಲಕ್ಷ ವೆಚ್ಚದಲ್ಲಿ ಈ ಕಾಮಗಾರಿ ಕೈಗೊಳ್ಳಲಾಗಿದೆ ಎಂದು ಕಾಮಗಾರಿ ಉದ್ಘಾಟಿಸಿದ ಶಾಸಕ ಎನ್.ವೈ. ಗೋಪಾಲಕೃಷ್ಣ ಹೇಳಿದರು.</p>.<p>ರಾಂಪುರ ಗ್ರಾಮವು ತಾಲ್ಲೂಕಿನಲ್ಲಿ ಹಲವು ರಂಗಗಳಲ್ಲಿ ವೇಗವಾಗಿ ಬೆಳೆಯುತ್ತಿದ್ದು ಭವಿಷ್ಯದ ದೃಷ್ಟಿಯಿಂದ ಹಲವು ಸೌಕರ್ಯಗಳ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗಿದೆ. ಕುಡಿಯುವ ನೀರು, ಬೀದಿದೀಪ, ಸ್ವಚ್ಛತೆ ವಿಷಯಗಳಲ್ಲಿ ಸಾರ್ವಜನಿಕರು ಗ್ರಾಮ ಪಂಚಾಯಿತಿಗೆ ಸಹಕಾರ ನೀಡುವ ಮೂಲಕ ಅಭಿವೃದ್ಧಿಗೆ ಕೈಜೋಡಿಸಬೇಕು ಎಂದು ಮನವಿ ಮಾಡಿದರು.</p>.<p>ಮುಖಂಡರಾದ ಸಿದ್ದಬಸಪ್ಪ, ಜಿ. ವಿಜಯಕುಮಾರ್, ಜಗದೀಶ್, ವಿಜಯಕುಮಾರ್, ಗುತ್ತಿಗೆದಾರ ಎಸ್. ಖಾದರ್, ಪಿಡಿಒ ಗುಂಡಪ್ಪ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260405-44-1911663919</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮೊಳಕಾಲ್ಮುರು: ತಾಲ್ಲೂಕಿನ ರಾಂಪುರದಲ್ಲಿ ಅಳವಡಿಸಿರುವ ಡಿವೈಡರ್ ವಿದ್ಯುತ್ ದೀಪಕ್ಕೆ ಈಚೆಗೆ ಚಾಲನೆ ನೀಡಲಾಯಿತು.</p>.<p>ಗ್ರಾಮ ಪಂಚಾಯಿತಿ ಮುಂಭಾಗದಲ್ಲಿ ಹಾದು ಹೋಗಿರುವ ಬೆಂಗಳೂರು- ಬಳ್ಳಾರಿ ಮುಖ್ಯರಸ್ತೆಯ ಡಿವೈಡರ್ಗೆ ಈ ಹಿಂದೆ ವಿದ್ಯುತ್ ದೀಪ ಅಳವಡಿಸಲಾಗಿತ್ತು. ಈಗ ಓಬಳಾಪುರ ಮುಖ್ಯರಸ್ತೆಯಲ್ಲಿ ಇದಕ್ಕೆ ಚಾಲನೆ ನೀಡಲಾಗಿದೆ.</p>.<p>2025-26ನೇ ಸಾಲಿನ ಮುಖ್ಯಮಂತ್ರಿಗಳ ಮೂಲಸೌಕರ್ಯ ಅಭಿವೃದ್ಧಿ ಯೋಜನೆ ಅಡಿಯಲ್ಲಿ ₹95 ಲಕ್ಷ ವೆಚ್ಚದಲ್ಲಿ ಈ ಕಾಮಗಾರಿ ಕೈಗೊಳ್ಳಲಾಗಿದೆ ಎಂದು ಕಾಮಗಾರಿ ಉದ್ಘಾಟಿಸಿದ ಶಾಸಕ ಎನ್.ವೈ. ಗೋಪಾಲಕೃಷ್ಣ ಹೇಳಿದರು.</p>.<p>ರಾಂಪುರ ಗ್ರಾಮವು ತಾಲ್ಲೂಕಿನಲ್ಲಿ ಹಲವು ರಂಗಗಳಲ್ಲಿ ವೇಗವಾಗಿ ಬೆಳೆಯುತ್ತಿದ್ದು ಭವಿಷ್ಯದ ದೃಷ್ಟಿಯಿಂದ ಹಲವು ಸೌಕರ್ಯಗಳ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗಿದೆ. ಕುಡಿಯುವ ನೀರು, ಬೀದಿದೀಪ, ಸ್ವಚ್ಛತೆ ವಿಷಯಗಳಲ್ಲಿ ಸಾರ್ವಜನಿಕರು ಗ್ರಾಮ ಪಂಚಾಯಿತಿಗೆ ಸಹಕಾರ ನೀಡುವ ಮೂಲಕ ಅಭಿವೃದ್ಧಿಗೆ ಕೈಜೋಡಿಸಬೇಕು ಎಂದು ಮನವಿ ಮಾಡಿದರು.</p>.<p>ಮುಖಂಡರಾದ ಸಿದ್ದಬಸಪ್ಪ, ಜಿ. ವಿಜಯಕುಮಾರ್, ಜಗದೀಶ್, ವಿಜಯಕುಮಾರ್, ಗುತ್ತಿಗೆದಾರ ಎಸ್. ಖಾದರ್, ಪಿಡಿಒ ಗುಂಡಪ್ಪ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260405-44-1911663919</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>