<p><strong>ಮೊಳಕಾಲ್ಮುರು:</strong> ಪಟ್ಟಣದಲ್ಲಿ ಹಲವು ವರ್ಷಗಳ ಹಿಂದೆ ನಡೆದಿದ್ದ ಮನೆಗಳ ಸರಣಿ ಕಳ್ಳತನ ಪ್ರಕರಣದ ಆರೋಪಿಯನ್ನು ಸ್ಥಳೀಯ ಪೊಲೀಸರು ಪತ್ತೆ ಹಚ್ಚುವಲ್ಲಿ ಕೊನೆಗೂ ಯಶಸ್ವಿಯಾಗಿದ್ದಾರೆ.</p>.<p>ಇಲ್ಲಿನ ತಿಲಕ್ ನಗರದ ನಿವಾಸಿ ಮಾರುತಿ ಬಂಧಿತ ಆರೋಪಿ. ಈತ 27 ವರ್ಷಗಳ ಹಿಂದೆ ಬೆಲೆಬಾಳುವ ರೇಷ್ಮೆಸೀರೆ, ಬೆಳ್ಳಿ ವಸ್ತುಗಳು, ನಗದು ಕಳವು ಮಾಡಿದ್ದು, ಇದು ಪೊಲೀಸರಿಗೆ ಗೊತ್ತಾಗಿದೆ ಎಂಬುದು ಗಮನಕ್ಕೆ ಬಂದ ತಕ್ಷಣ ಊರು ಬಿಟ್ಟು ಹೋಗಿದ್ದ.</p>.<p>ಊರು ಬಿಟ್ಟ ನಂತರ ಮೊಳಕಾಲ್ಮುರಿಗೆ ಬಂದಿರಲಿಲ್ಲ. ಸಂಬಂಧಿಕರು, ಸ್ನೇಹಿತರನ್ನೂ ಸಂಪರ್ಕಿಸಿರಲಿಲ್ಲ. ಆದಕಾರಣ ಆರೋಪಿ ಮಾರುತಿ ಬಂಧನ ಪೊಲೀಸರಿಗೆ ತಲೆನೋವಾಗಿ ಪರಿಣಮಿಸಿತ್ತು. ಆದರೆ, ನ್ಯಾಯಾಲಯವು ಆರೋಪಿಯನ್ನು ಪತ್ತೆ ಮಾಡುವಂತೆ ಪೊಲೀಸರಿಗೆ ಸೂಚಿಸಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸರು ಪತ್ತೆ ಕಾರ್ಯಾಚರಣೆ ಕೈಗೊಂಡಿದ್ದರು.</p>.<p>ಸಾಮಾಜಿಕ ಜಾಲತಾಣದಲ್ಲಿ ಆರೋಪಿ ಪತ್ನಿ ಇರುವ ಮಾಹಿತಿ ಪಡೆದ ಪೊಲೀಸರು ವಿವರ ಕಲೆ ಹಾಕಿ ಮಡಿಕೇರಿಗೆ ಹೋಗಿ ಆರೋಪಿಯನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಇಷ್ಟೊಂದು ಸುಧೀರ್ಷ ಅವಧಿಯ ಆರೋಪಿಯನ್ನು ಬಂಧಿಸಿರುವುದು ಇಲ್ಲಿನ ಪೊಲೀಸ್ ಠಾಣೆ ಇತಿಹಾಸದಲ್ಲಿ ಇದು ಪ್ರಥಮ ಎನ್ನಲಾಗಿದೆ.</p>.<p>ಇಲ್ಲಿಂದ ನೆರೆಯ ಬಳ್ಳಾರಿಗೆ ಹೋಗಿ, ಅಲ್ಲಿಂದ ಬೆಂಗಳೂರಿಗೆ ಹೋಗಿ ಕಟ್ಟಡ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ. ನಂತರ ಮಡಿಕೇರಿಗೆ ಹೋಗಿ ಹಲವು ವರ್ಷಗಳಿಂದ ಚಾಲಕ ವೃತ್ತಿ ಮಾಡಿಕೊಂಡು ವಾಸವಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಡಿವೈಎಸ್ಪಿ ರಾಜಣ್ಣ, ಸಿಪಿಐ ವಸಂತ್ ವಿ., ಆಸೋದೆ ನೇತೃತ್ವದಲ್ಲಿ ಪಿಎಸ್ಐಗಳಾದ ಈರೇಶ್, ಪಾಂಡುರಂಗಪ್ಪ ಅವರ ತಂಡ ಕಾರ್ಯಾಚರಣೆ ನಡೆಸಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು ಸಿಬ್ಬಂದಿ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೊಳಕಾಲ್ಮುರು:</strong> ಪಟ್ಟಣದಲ್ಲಿ ಹಲವು ವರ್ಷಗಳ ಹಿಂದೆ ನಡೆದಿದ್ದ ಮನೆಗಳ ಸರಣಿ ಕಳ್ಳತನ ಪ್ರಕರಣದ ಆರೋಪಿಯನ್ನು ಸ್ಥಳೀಯ ಪೊಲೀಸರು ಪತ್ತೆ ಹಚ್ಚುವಲ್ಲಿ ಕೊನೆಗೂ ಯಶಸ್ವಿಯಾಗಿದ್ದಾರೆ.</p>.<p>ಇಲ್ಲಿನ ತಿಲಕ್ ನಗರದ ನಿವಾಸಿ ಮಾರುತಿ ಬಂಧಿತ ಆರೋಪಿ. ಈತ 27 ವರ್ಷಗಳ ಹಿಂದೆ ಬೆಲೆಬಾಳುವ ರೇಷ್ಮೆಸೀರೆ, ಬೆಳ್ಳಿ ವಸ್ತುಗಳು, ನಗದು ಕಳವು ಮಾಡಿದ್ದು, ಇದು ಪೊಲೀಸರಿಗೆ ಗೊತ್ತಾಗಿದೆ ಎಂಬುದು ಗಮನಕ್ಕೆ ಬಂದ ತಕ್ಷಣ ಊರು ಬಿಟ್ಟು ಹೋಗಿದ್ದ.</p>.<p>ಊರು ಬಿಟ್ಟ ನಂತರ ಮೊಳಕಾಲ್ಮುರಿಗೆ ಬಂದಿರಲಿಲ್ಲ. ಸಂಬಂಧಿಕರು, ಸ್ನೇಹಿತರನ್ನೂ ಸಂಪರ್ಕಿಸಿರಲಿಲ್ಲ. ಆದಕಾರಣ ಆರೋಪಿ ಮಾರುತಿ ಬಂಧನ ಪೊಲೀಸರಿಗೆ ತಲೆನೋವಾಗಿ ಪರಿಣಮಿಸಿತ್ತು. ಆದರೆ, ನ್ಯಾಯಾಲಯವು ಆರೋಪಿಯನ್ನು ಪತ್ತೆ ಮಾಡುವಂತೆ ಪೊಲೀಸರಿಗೆ ಸೂಚಿಸಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸರು ಪತ್ತೆ ಕಾರ್ಯಾಚರಣೆ ಕೈಗೊಂಡಿದ್ದರು.</p>.<p>ಸಾಮಾಜಿಕ ಜಾಲತಾಣದಲ್ಲಿ ಆರೋಪಿ ಪತ್ನಿ ಇರುವ ಮಾಹಿತಿ ಪಡೆದ ಪೊಲೀಸರು ವಿವರ ಕಲೆ ಹಾಕಿ ಮಡಿಕೇರಿಗೆ ಹೋಗಿ ಆರೋಪಿಯನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಇಷ್ಟೊಂದು ಸುಧೀರ್ಷ ಅವಧಿಯ ಆರೋಪಿಯನ್ನು ಬಂಧಿಸಿರುವುದು ಇಲ್ಲಿನ ಪೊಲೀಸ್ ಠಾಣೆ ಇತಿಹಾಸದಲ್ಲಿ ಇದು ಪ್ರಥಮ ಎನ್ನಲಾಗಿದೆ.</p>.<p>ಇಲ್ಲಿಂದ ನೆರೆಯ ಬಳ್ಳಾರಿಗೆ ಹೋಗಿ, ಅಲ್ಲಿಂದ ಬೆಂಗಳೂರಿಗೆ ಹೋಗಿ ಕಟ್ಟಡ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ. ನಂತರ ಮಡಿಕೇರಿಗೆ ಹೋಗಿ ಹಲವು ವರ್ಷಗಳಿಂದ ಚಾಲಕ ವೃತ್ತಿ ಮಾಡಿಕೊಂಡು ವಾಸವಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಡಿವೈಎಸ್ಪಿ ರಾಜಣ್ಣ, ಸಿಪಿಐ ವಸಂತ್ ವಿ., ಆಸೋದೆ ನೇತೃತ್ವದಲ್ಲಿ ಪಿಎಸ್ಐಗಳಾದ ಈರೇಶ್, ಪಾಂಡುರಂಗಪ್ಪ ಅವರ ತಂಡ ಕಾರ್ಯಾಚರಣೆ ನಡೆಸಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು ಸಿಬ್ಬಂದಿ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>