<p>ಮೊಳಕಾಲ್ಮುರು: ‘ಉದ್ಯೋಗಖಾತ್ರಿ ಯೋಜನೆಯ ಕಾರ್ಮಿಕರು ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದು ಅವರ ಹಿತ ಕಾಪಾಡಲು ಸರ್ಕಾರ ಕ್ರಮ ಕೈಗೊಳ್ಳಬೇಕು’ ಎಂದು ಯೋಜನೆ ಕಾರ್ಮಿಕರು ಮನವಿ ಮಾಡಿದರು.</p>.<p>ಈಚೆಗೆ ತಾಲ್ಲೂಕಿನ ಮುತ್ತಿಗಾರಹಳ್ಳಿ ಮ್ಯಾಸರಹಟ್ಟಿಯಲ್ಲಿ ಗ್ರಾಮೀಣ ಕೂಲಿ ಕಾರ್ಮಿಕರ ಸಂಘಟನೆ ನೇತೃತ್ವದಲ್ಲಿ ನಡೆದ ಕಾರ್ಮಿಕರ ದಿನಾಚರಣೆಯಲ್ಲಿ ಅವರು ಆಗ್ರಹಿಸಿದರು.</p>.<p>ಯೋಜನೆ ಅಡಿ ಕಾರ್ಮಿಕರು ತಮಗೆ ಬೇಕಾದ ಸಮಯದಲ್ಲಿ ವಾರ್ಷಿಕ 100 ದಿನಗಳ ಕೂಲಿ ಕೆಲಸ ಪಡೆದುಕೊಳ್ಳಬಹುದಾಗಿತ್ತು, ತಿದ್ದುಪಡಿ ಕಾಯ್ದೆಯಲ್ಲಿ ಇದು ಸಾಧ್ಯವಿಲ್ಲ. ಇದರಿಂದ ಲಕ್ಷಾಂತರ ಕೂಲಿ ಕಾರ್ಮಿಕರು ಕೆಲಸವಿಲ್ಲದೇ ತೊಂದರೆಗೀಡಾಗಿದ್ದಾರೆ. ಬಾಕಿ ಕೂಲಿಯನ್ನು ಭತ್ಯೆ ಸಹಿತ ನೀಡಬೇಕು, ಈ ವರ್ಷದ ಕ್ರಿಯಾ ಯೋಜನೆಗೆ ತಕ್ಷಣವೇ ಅನುಮೋದನೆ ನೀಡಬೇಕು ಎಂದು ಮನವಿ ಮಾಡಿದರು.</p>.<p>ಬಿಸಿಲಿನ ತಾಪ ಹೆಚ್ಚಾಗಿರುವ ಕಾರಣ ಹೈದರಾಬಾದ್ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ ಶೇ 30ರಷ್ಟು ಕಡಿಮೆ ಸಮಯ ನಿಗದಿ ಮಾಡಬೇಕು. ಕೂಲಿ ಹೆಚ್ಚಳ ಮಾಡಬೇಕು, ಕಾರ್ಮಿಕರು ಮೃತಪಟ್ಟಲ್ಲಿ ₹ 10 ಲಕ್ಷ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.</p>.<p>ಗ್ರಾಮೀಣ ಕೂಲಿ ಕಾರ್ಮಿಕರ ಸಂಘಟನೆಯ ತೇಜೇಶ್ವರಿ ಕಾರ್ಮಿಕರಾದ ತಿಮ್ಮಪ್ಪ, ಸಣ್ಣಬೋಜಮ್ಮ, ನೀಲಮ್ಮ, ಸೋಮಕ್ಕ, ಉಮಕ್ಕ, ಎಲ್. ನಾಗರಾಜ್, ಕೋಶಪ್ಪ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260504-44-507913833</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮೊಳಕಾಲ್ಮುರು: ‘ಉದ್ಯೋಗಖಾತ್ರಿ ಯೋಜನೆಯ ಕಾರ್ಮಿಕರು ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದು ಅವರ ಹಿತ ಕಾಪಾಡಲು ಸರ್ಕಾರ ಕ್ರಮ ಕೈಗೊಳ್ಳಬೇಕು’ ಎಂದು ಯೋಜನೆ ಕಾರ್ಮಿಕರು ಮನವಿ ಮಾಡಿದರು.</p>.<p>ಈಚೆಗೆ ತಾಲ್ಲೂಕಿನ ಮುತ್ತಿಗಾರಹಳ್ಳಿ ಮ್ಯಾಸರಹಟ್ಟಿಯಲ್ಲಿ ಗ್ರಾಮೀಣ ಕೂಲಿ ಕಾರ್ಮಿಕರ ಸಂಘಟನೆ ನೇತೃತ್ವದಲ್ಲಿ ನಡೆದ ಕಾರ್ಮಿಕರ ದಿನಾಚರಣೆಯಲ್ಲಿ ಅವರು ಆಗ್ರಹಿಸಿದರು.</p>.<p>ಯೋಜನೆ ಅಡಿ ಕಾರ್ಮಿಕರು ತಮಗೆ ಬೇಕಾದ ಸಮಯದಲ್ಲಿ ವಾರ್ಷಿಕ 100 ದಿನಗಳ ಕೂಲಿ ಕೆಲಸ ಪಡೆದುಕೊಳ್ಳಬಹುದಾಗಿತ್ತು, ತಿದ್ದುಪಡಿ ಕಾಯ್ದೆಯಲ್ಲಿ ಇದು ಸಾಧ್ಯವಿಲ್ಲ. ಇದರಿಂದ ಲಕ್ಷಾಂತರ ಕೂಲಿ ಕಾರ್ಮಿಕರು ಕೆಲಸವಿಲ್ಲದೇ ತೊಂದರೆಗೀಡಾಗಿದ್ದಾರೆ. ಬಾಕಿ ಕೂಲಿಯನ್ನು ಭತ್ಯೆ ಸಹಿತ ನೀಡಬೇಕು, ಈ ವರ್ಷದ ಕ್ರಿಯಾ ಯೋಜನೆಗೆ ತಕ್ಷಣವೇ ಅನುಮೋದನೆ ನೀಡಬೇಕು ಎಂದು ಮನವಿ ಮಾಡಿದರು.</p>.<p>ಬಿಸಿಲಿನ ತಾಪ ಹೆಚ್ಚಾಗಿರುವ ಕಾರಣ ಹೈದರಾಬಾದ್ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ ಶೇ 30ರಷ್ಟು ಕಡಿಮೆ ಸಮಯ ನಿಗದಿ ಮಾಡಬೇಕು. ಕೂಲಿ ಹೆಚ್ಚಳ ಮಾಡಬೇಕು, ಕಾರ್ಮಿಕರು ಮೃತಪಟ್ಟಲ್ಲಿ ₹ 10 ಲಕ್ಷ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.</p>.<p>ಗ್ರಾಮೀಣ ಕೂಲಿ ಕಾರ್ಮಿಕರ ಸಂಘಟನೆಯ ತೇಜೇಶ್ವರಿ ಕಾರ್ಮಿಕರಾದ ತಿಮ್ಮಪ್ಪ, ಸಣ್ಣಬೋಜಮ್ಮ, ನೀಲಮ್ಮ, ಸೋಮಕ್ಕ, ಉಮಕ್ಕ, ಎಲ್. ನಾಗರಾಜ್, ಕೋಶಪ್ಪ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260504-44-507913833</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>