<p><strong>ಮೊಳಕಾಲ್ಮುರು:</strong> ‘ಸಾಮಾಜಿಕವಾಗಿ, ಶೈಕ್ಷಣಿಕವಾಗಿ ತೀರಾ ಹಿಂದುಳಿದಿರುವ ಯಾದವ ಸಮಾಜವು ಮುಖ್ಯವಾಹಿನಿಗೆ ಬರಲು ಹೆಚ್ಚು ಶ್ರಮ ವಹಿಸಬೇಕಿದೆ’ ಎಂದು ಯಾದವ ಸಮಾಜದ ಮುಖಂಡ ಜಿ.ಸಿ. ನಾಗರಾಜ್ ಹೇಳಿದರು.</p>.<p>ತಾಲ್ಲೂಕು ಯಾದವ ಸಮಾಜ ಶನಿವಾರ ಇಲ್ಲಿ ಹಮ್ಮಿಕೊಂಡಿದ್ದ ಶ್ರೀಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>‘ಸಮಾಜವು ಸಂಘಟನೆಗೆ ಆದ್ಯತೆ ಕೊಡಬೇಕು, ಇಲ್ಲವಾದಲ್ಲಿ ಪೈಪೋಟಿ ಯುಗದಲ್ಲಿ ಸರ್ಕಾರದ ಸೌಲಭ್ಯಗಳು ಸಿಗುವುದಿಲ್ಲ. ಜನಾಂಗದಲ್ಲಿ ಅಭಿವೃದ್ಧಿ ಹೊಂದಿರುವ ವ್ಯಕ್ತಿಗಳು ಸಮಾಜವನ್ನು ಕಟ್ಟಿ ಮುನ್ನಡೆಸಲು ಕೈಜೋಡಿಸಬೇಕು. ಪಾಲಕರು ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸುವ ಜತೆಗೆ ಮೂಢನಂಬಿಕೆಗಳನ್ನು ಕೈಬಿಡಬೇಕು’ ಎಂದರು.</p>.<p>ರೈತ ಸಂಘದ ಜಿಲ್ಲಾ ಘಟಕದ ಕಾರ್ಯದರ್ಶಿ ಮರ್ಲಹಳ್ಳಿ ರವಿಕುಮಾರ್, ಮುಖಂಡರಾದ ಜಿ.ಎ. ಜಯಣ್ಣ, ಜಿ.ಟಿ. ತಿಮ್ಮಯ್ಯ, ಬಿ.ಬಲರಾಮ್, ಪಿ.ಟಿ. ಹಟ್ಟಿ ಈರಣ್ಣ, ನಿಂಗಣ್ಣ, ಲಕ್ಷ್ಮೀಪತಿ, ಡಿ.ಜೆ. ದಿನೇಶ್ ಕುಮಾರ್, ಡಿ.ಜೆ. ಪ್ರವೀಣ್ ಕುಮಾರ್, ಪಾಪಣ್ಣ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೊಳಕಾಲ್ಮುರು:</strong> ‘ಸಾಮಾಜಿಕವಾಗಿ, ಶೈಕ್ಷಣಿಕವಾಗಿ ತೀರಾ ಹಿಂದುಳಿದಿರುವ ಯಾದವ ಸಮಾಜವು ಮುಖ್ಯವಾಹಿನಿಗೆ ಬರಲು ಹೆಚ್ಚು ಶ್ರಮ ವಹಿಸಬೇಕಿದೆ’ ಎಂದು ಯಾದವ ಸಮಾಜದ ಮುಖಂಡ ಜಿ.ಸಿ. ನಾಗರಾಜ್ ಹೇಳಿದರು.</p>.<p>ತಾಲ್ಲೂಕು ಯಾದವ ಸಮಾಜ ಶನಿವಾರ ಇಲ್ಲಿ ಹಮ್ಮಿಕೊಂಡಿದ್ದ ಶ್ರೀಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>‘ಸಮಾಜವು ಸಂಘಟನೆಗೆ ಆದ್ಯತೆ ಕೊಡಬೇಕು, ಇಲ್ಲವಾದಲ್ಲಿ ಪೈಪೋಟಿ ಯುಗದಲ್ಲಿ ಸರ್ಕಾರದ ಸೌಲಭ್ಯಗಳು ಸಿಗುವುದಿಲ್ಲ. ಜನಾಂಗದಲ್ಲಿ ಅಭಿವೃದ್ಧಿ ಹೊಂದಿರುವ ವ್ಯಕ್ತಿಗಳು ಸಮಾಜವನ್ನು ಕಟ್ಟಿ ಮುನ್ನಡೆಸಲು ಕೈಜೋಡಿಸಬೇಕು. ಪಾಲಕರು ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸುವ ಜತೆಗೆ ಮೂಢನಂಬಿಕೆಗಳನ್ನು ಕೈಬಿಡಬೇಕು’ ಎಂದರು.</p>.<p>ರೈತ ಸಂಘದ ಜಿಲ್ಲಾ ಘಟಕದ ಕಾರ್ಯದರ್ಶಿ ಮರ್ಲಹಳ್ಳಿ ರವಿಕುಮಾರ್, ಮುಖಂಡರಾದ ಜಿ.ಎ. ಜಯಣ್ಣ, ಜಿ.ಟಿ. ತಿಮ್ಮಯ್ಯ, ಬಿ.ಬಲರಾಮ್, ಪಿ.ಟಿ. ಹಟ್ಟಿ ಈರಣ್ಣ, ನಿಂಗಣ್ಣ, ಲಕ್ಷ್ಮೀಪತಿ, ಡಿ.ಜೆ. ದಿನೇಶ್ ಕುಮಾರ್, ಡಿ.ಜೆ. ಪ್ರವೀಣ್ ಕುಮಾರ್, ಪಾಪಣ್ಣ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>