<p><strong>ಮೊಳಕಾಲ್ಮುರು:</strong> ಪಟ್ಟಣದ ಸ್ವಚ್ಛತೆ ಕಾಪಾಡುವ ಮೂಲಕ ಜನರ ಆರೋಗ್ಯಕ್ಕೆ ತೊಂದರೆಯಾಗದಂತೆ ನೋಡಿಕೊಳ್ಳುವಲ್ಲಿ ಪೌರ ಕಾರ್ಮಿಕರ ಪಾತ್ರ ಬಹುಮುಖ್ಯವಾಗಿದ್ದು, ಅವರ ಸೇವೆಯನ್ನು ಯಾರೂ ಕಡೆಗಣಿಸಬಾರದು ಎಂದು ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಲೀಲಾವತಿ ಸಿದ್ದಣ್ಣ ಹೇಳಿದರು.</p>.<p>ಪಟ್ಟಣ ಪಂಚಾಯಿತಿ ಆವರಣದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಪೌರ ಕಾರ್ಮಿಕರ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಒಂದು ದಿನ ಅವರು ಕೆಲಸ ಮಾಡಲಿಲ್ಲ ಎಂದಲ್ಲಿ ಪಟ್ಟಣದ ನೈರ್ಮಲ್ಯವನ್ನು ಊಹಿಸುವುದೂ ಕಷ್ಟ. ಅವರ ಜತೆಗೆ ನಾಗರಿಕರೂ ಸಮರ್ಪಕವಾಗಿ ಕಸ ವಿಲೇವಾರಿ ಮಾಡಿ ಸಹಕಾರ ನೀಡಬೇಕಿದೆ ಎಂದರು.</p>.<p>ಸರ್ಕಾರ ಅವರ ನ್ಯಾಯಯುತ ಬೇಡಿಕೆಗಳಿಗೆ ಮನ್ನಣೆ ನೀಡುವ ಮೂಲಕ ನೆರವಿಗೆ ಬರಬೇಕು ಎಂದು ಸದಸ್ಯ ಜಿ. ಪ್ರಕಾಶ್ ಹೇಳಿದರು. ಪಟ್ಟಣ ಪಂಚಾಯಿತಿ ಉಪಾಧ್ಯಕ್ಷ ತಿಪ್ಪೇಸ್ವಾಮಿ, ಮುಖ್ಯಾಧಿಕಾರಿ ಪಾಲಯ್ಯ ಮಾತನಾಡಿದರು.</p>.<p>ಸದಸ್ಯರಾದ ಟಿ.ಟಿ. ರವಿಕುಮಾರ್, ಶುಭಾ ಪೃಥ್ವರಾಜ್, ಅಬ್ದುಲ್ಲಾ, ರೂಪಾ ವಿನಯಕುಮಾರ್, ಮಂಜಣ್ಣ, ದೇವದಾಸ್, ಒಬೇದುಲ್ಲಾ ಹಾಗೂ ಸಿಬ್ಬಂದಿ ಇದ್ದರು. ಇದೇ ವೇಳೆ ಪೌರ ಕಾರ್ಮಿಕರನ್ನು ಸನ್ಮಾನಿಸಲಾಯಿತು. ಕ್ರೀಡಾಕೂಟದ ವಿಜೇತರಿಗೆ ಬಹುಮಾನ ವಿತರಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೊಳಕಾಲ್ಮುರು:</strong> ಪಟ್ಟಣದ ಸ್ವಚ್ಛತೆ ಕಾಪಾಡುವ ಮೂಲಕ ಜನರ ಆರೋಗ್ಯಕ್ಕೆ ತೊಂದರೆಯಾಗದಂತೆ ನೋಡಿಕೊಳ್ಳುವಲ್ಲಿ ಪೌರ ಕಾರ್ಮಿಕರ ಪಾತ್ರ ಬಹುಮುಖ್ಯವಾಗಿದ್ದು, ಅವರ ಸೇವೆಯನ್ನು ಯಾರೂ ಕಡೆಗಣಿಸಬಾರದು ಎಂದು ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಲೀಲಾವತಿ ಸಿದ್ದಣ್ಣ ಹೇಳಿದರು.</p>.<p>ಪಟ್ಟಣ ಪಂಚಾಯಿತಿ ಆವರಣದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಪೌರ ಕಾರ್ಮಿಕರ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಒಂದು ದಿನ ಅವರು ಕೆಲಸ ಮಾಡಲಿಲ್ಲ ಎಂದಲ್ಲಿ ಪಟ್ಟಣದ ನೈರ್ಮಲ್ಯವನ್ನು ಊಹಿಸುವುದೂ ಕಷ್ಟ. ಅವರ ಜತೆಗೆ ನಾಗರಿಕರೂ ಸಮರ್ಪಕವಾಗಿ ಕಸ ವಿಲೇವಾರಿ ಮಾಡಿ ಸಹಕಾರ ನೀಡಬೇಕಿದೆ ಎಂದರು.</p>.<p>ಸರ್ಕಾರ ಅವರ ನ್ಯಾಯಯುತ ಬೇಡಿಕೆಗಳಿಗೆ ಮನ್ನಣೆ ನೀಡುವ ಮೂಲಕ ನೆರವಿಗೆ ಬರಬೇಕು ಎಂದು ಸದಸ್ಯ ಜಿ. ಪ್ರಕಾಶ್ ಹೇಳಿದರು. ಪಟ್ಟಣ ಪಂಚಾಯಿತಿ ಉಪಾಧ್ಯಕ್ಷ ತಿಪ್ಪೇಸ್ವಾಮಿ, ಮುಖ್ಯಾಧಿಕಾರಿ ಪಾಲಯ್ಯ ಮಾತನಾಡಿದರು.</p>.<p>ಸದಸ್ಯರಾದ ಟಿ.ಟಿ. ರವಿಕುಮಾರ್, ಶುಭಾ ಪೃಥ್ವರಾಜ್, ಅಬ್ದುಲ್ಲಾ, ರೂಪಾ ವಿನಯಕುಮಾರ್, ಮಂಜಣ್ಣ, ದೇವದಾಸ್, ಒಬೇದುಲ್ಲಾ ಹಾಗೂ ಸಿಬ್ಬಂದಿ ಇದ್ದರು. ಇದೇ ವೇಳೆ ಪೌರ ಕಾರ್ಮಿಕರನ್ನು ಸನ್ಮಾನಿಸಲಾಯಿತು. ಕ್ರೀಡಾಕೂಟದ ವಿಜೇತರಿಗೆ ಬಹುಮಾನ ವಿತರಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>