<p><strong>ಮೊಳಕಾಲ್ಮುರು:</strong> ವಿದ್ಯಾರ್ಥಿಗಳಿಗೆ ಪಿಯು ಅತ್ಯಂತ ಮಹತ್ವದ ಹಂತವಾಗಿದ್ದು, ಉಪನ್ಯಾಸಕರು ನಿರ್ಲಕ್ಷ್ಯ ಮಾಡದೇ ಬೋಧಿಸಬೇಕು ಎಂದು ಪಿಯು ಜಿಲ್ಲಾ ಉಪ ನಿರ್ದೇಶಕ ಕೆ. ತಿಮ್ಮಯ್ಯ ಹೇಳಿದರು.</p>.<p>ಇಲ್ಲಿನ ಸರ್ಕಾರಿ ಜ್ಯೂನಿಯರ್ ಕಾಲೇಜಿನಲ್ಲಿ ತಾಲ್ಲೂಕಿನ ಪಿಯು ಉಪನ್ಯಾಸಕರು ಮತ್ತು ಪ್ರಾಂಶುಪಾಲರಿಗೆ ಬುಧವಾರ ಹಮ್ಮಿಕೊಂಡಿದ್ದ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.</p>.<p>ಫಲಿತಾಂಶ ಸುಧಾರಣೆಗಾಗಿ ಇಲಾಖೆ ರೂಪಿಸಿರುವ ಕಾರ್ಯಕ್ರಮಗಳನ್ನು ತಪ್ಪದೆ ಕಾರ್ಯರೂಪಕ್ಕೆ ತರಬೇಕು. ನಿಗದಿತ ಅವಧಿಯೊಳಗೆ ವಿಷಯಗಳ ಬೋಧನೆ ಮಾಡಬೇಕು. ಮುಖ್ಯವಾಗಿ ಮನಃಸಾಕ್ಷಿ ಒಪ್ಪುವಂತೆ ಕೆಲಸ ಮಾಡಿದಲ್ಲಿ ಉತ್ತಮ ಫಲಿತಾಂಶ ಸಿಗಲಿದೆ ಎಂದರು.</p>.<p>ಮೊಳಕಾಲ್ಮುರು ಆಂಧ್ರ ಗಡಿಯಲ್ಲಿದ್ದು, ಕೂಲಿ ಕಾರ್ಮಿಕ, ಪರಿಶಿಷ್ಟ ಜಾತಿ, ಪಂಗಡ ವಿದ್ಯಾರ್ಥಿಗಳು ಹೆಚ್ಚಿದ್ದಾರೆ. ಪಿಯುನಲ್ಲಿ ಉತ್ತಮ ಶಿಕ್ಷಣ ದೊರೆತರೆ ಜೀವನ ಕಟ್ಟಿಕೊಳ್ಳಲು ವಿದ್ಯಾರ್ಥಿಗಳಿಗೆ ಅನುಕೂಲವಾಗುತ್ತದೆ. ಇದರಲ್ಲಿ ಉಪನ್ಯಾಸಕರ ಪಾತ್ರ ಬಹುಮುಖ್ಯವಾಗಿದೆ ಎಂದು ಸರ್ಕಾರಿ ಪಿಯು ಕಾಲೇಜಿನ ಪ್ರಾಂಶುಪಾಲ ಡಿ. ಗೋವಿಂದಪ್ಪ ಅಭಿಪ್ರಾಯಪಟ್ಟರು. </p>.<p>ಪ್ರಾಂಶುಪಾಲರಾದ ಯು. ತಿಮ್ಮಣ್ಣ, ಶಶಿಕಲಾ, ಮಂಜುನಾಥ ರೆಡ್ಡಿ, ತಿಪ್ಪೇಸ್ವಾಮಿ, ಉಪನ್ಯಾಸಕರಾದ ಬಿ.ಎನ್. ತಿಪ್ಪೇಸ್ವಾಮಿ, ರವಿಕುಮಾರ್ ಹಾಗೂ ಉಪನ್ಯಾಸಕರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೊಳಕಾಲ್ಮುರು:</strong> ವಿದ್ಯಾರ್ಥಿಗಳಿಗೆ ಪಿಯು ಅತ್ಯಂತ ಮಹತ್ವದ ಹಂತವಾಗಿದ್ದು, ಉಪನ್ಯಾಸಕರು ನಿರ್ಲಕ್ಷ್ಯ ಮಾಡದೇ ಬೋಧಿಸಬೇಕು ಎಂದು ಪಿಯು ಜಿಲ್ಲಾ ಉಪ ನಿರ್ದೇಶಕ ಕೆ. ತಿಮ್ಮಯ್ಯ ಹೇಳಿದರು.</p>.<p>ಇಲ್ಲಿನ ಸರ್ಕಾರಿ ಜ್ಯೂನಿಯರ್ ಕಾಲೇಜಿನಲ್ಲಿ ತಾಲ್ಲೂಕಿನ ಪಿಯು ಉಪನ್ಯಾಸಕರು ಮತ್ತು ಪ್ರಾಂಶುಪಾಲರಿಗೆ ಬುಧವಾರ ಹಮ್ಮಿಕೊಂಡಿದ್ದ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.</p>.<p>ಫಲಿತಾಂಶ ಸುಧಾರಣೆಗಾಗಿ ಇಲಾಖೆ ರೂಪಿಸಿರುವ ಕಾರ್ಯಕ್ರಮಗಳನ್ನು ತಪ್ಪದೆ ಕಾರ್ಯರೂಪಕ್ಕೆ ತರಬೇಕು. ನಿಗದಿತ ಅವಧಿಯೊಳಗೆ ವಿಷಯಗಳ ಬೋಧನೆ ಮಾಡಬೇಕು. ಮುಖ್ಯವಾಗಿ ಮನಃಸಾಕ್ಷಿ ಒಪ್ಪುವಂತೆ ಕೆಲಸ ಮಾಡಿದಲ್ಲಿ ಉತ್ತಮ ಫಲಿತಾಂಶ ಸಿಗಲಿದೆ ಎಂದರು.</p>.<p>ಮೊಳಕಾಲ್ಮುರು ಆಂಧ್ರ ಗಡಿಯಲ್ಲಿದ್ದು, ಕೂಲಿ ಕಾರ್ಮಿಕ, ಪರಿಶಿಷ್ಟ ಜಾತಿ, ಪಂಗಡ ವಿದ್ಯಾರ್ಥಿಗಳು ಹೆಚ್ಚಿದ್ದಾರೆ. ಪಿಯುನಲ್ಲಿ ಉತ್ತಮ ಶಿಕ್ಷಣ ದೊರೆತರೆ ಜೀವನ ಕಟ್ಟಿಕೊಳ್ಳಲು ವಿದ್ಯಾರ್ಥಿಗಳಿಗೆ ಅನುಕೂಲವಾಗುತ್ತದೆ. ಇದರಲ್ಲಿ ಉಪನ್ಯಾಸಕರ ಪಾತ್ರ ಬಹುಮುಖ್ಯವಾಗಿದೆ ಎಂದು ಸರ್ಕಾರಿ ಪಿಯು ಕಾಲೇಜಿನ ಪ್ರಾಂಶುಪಾಲ ಡಿ. ಗೋವಿಂದಪ್ಪ ಅಭಿಪ್ರಾಯಪಟ್ಟರು. </p>.<p>ಪ್ರಾಂಶುಪಾಲರಾದ ಯು. ತಿಮ್ಮಣ್ಣ, ಶಶಿಕಲಾ, ಮಂಜುನಾಥ ರೆಡ್ಡಿ, ತಿಪ್ಪೇಸ್ವಾಮಿ, ಉಪನ್ಯಾಸಕರಾದ ಬಿ.ಎನ್. ತಿಪ್ಪೇಸ್ವಾಮಿ, ರವಿಕುಮಾರ್ ಹಾಗೂ ಉಪನ್ಯಾಸಕರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>