<p><strong>ಮೊಳಕಾಲ್ಮುರು:</strong> ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿ ಚುನಾವಣೆಗಳಲ್ಲಿ ಸಮಾಜವಾದಿ ಪಕ್ಷ (ಎಸ್ಪಿ) ತಾಲ್ಲೂಕಿನ ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡಲಿದೆ ಎಂದು ಪಕ್ಷದ ತಾಲ್ಲೂಕು ಘಟಕದ ಅಧ್ಯಕ್ಷ ಜಿ.ಎ. ಜಯಣ್ಣ ಹೇಳಿದರು.</p>.<p>ಶನಿವಾರ ಪಕ್ಷದ ಕಚೇರಿ ಆವರಣದಲ್ಲಿ ನಡೆದ ಮಾಜಿ ಮುಖ್ಯಮಂತ್ರಿ ಮುಲಾಯಂ ಸಿಂಗ್ ಯಾದವ್ ಜನ್ಮದಿನಾಚರಣೆಯಲ್ಲಿ ಮಾತನಾಡಿದರು.</p>.<p>ಮೊಳಕಾಲ್ಮುರು ಪಟ್ಟಣ ಪಂಚಾಯಿತಿ ಚುನಾವಣೆಯಲ್ಲಿಯೂ ಪಕ್ಷ ಸ್ಪರ್ಧಿಸುವ ನಿರ್ಧಾರ ಮಾಡಿದ್ದು, ಮೀಸಲಾತಿ ಘೋಷಣೆಯಾದ ನಂತರ ಅಭ್ಯರ್ಥಿಗಳ ಹೆಸರುಗಳನ್ನು ಘೋಷಣೆ ಮಾಡಲಾಗುವುದು. ಈ ಭಾಗದಲ್ಲಿ ಪರಿಶಿಷ್ಟ ಜಾತಿ, ಪಂಗಡದ ಜನ ಹೆಚ್ಚಿದ್ದು, ಇವರಿಗೆ ಸಾಮಾಜಿಕ ನ್ಯಾಯ ಒದಗಿಸಲು ಪಕ್ಷ ಬದ್ಧವಾಗಿದೆ ಎಂದರು.</p>.<p>ಉಪಾಧ್ಯಕ್ಷ ಬಿ. ತಿಪ್ಪೇಸ್ವಾಮಿ, ಬಿ. ಬಾಲರಾಜ್, ಮುಖಂಡರಾದ ಜಿ.ಸಿ. ನಾಗರಾಜ್ ರಾಂಪುರ, ಪಿ.ಟಿ. ಹಟ್ಟಿ ತಮ್ಮಣ್ಣ, ಪಾಪಣ್ಣ, ಪಾಲಣ್ಣ, ಬೋರಯ್ಯ, ಸೂರಯ್ಯ, ದಡ್ಡಯ್ಯ, ಶ್ರೀನಿವಾಸ್ ಇದ್ದರು.</p>
<p><strong>ಮೊಳಕಾಲ್ಮುರು:</strong> ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿ ಚುನಾವಣೆಗಳಲ್ಲಿ ಸಮಾಜವಾದಿ ಪಕ್ಷ (ಎಸ್ಪಿ) ತಾಲ್ಲೂಕಿನ ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡಲಿದೆ ಎಂದು ಪಕ್ಷದ ತಾಲ್ಲೂಕು ಘಟಕದ ಅಧ್ಯಕ್ಷ ಜಿ.ಎ. ಜಯಣ್ಣ ಹೇಳಿದರು.</p>.<p>ಶನಿವಾರ ಪಕ್ಷದ ಕಚೇರಿ ಆವರಣದಲ್ಲಿ ನಡೆದ ಮಾಜಿ ಮುಖ್ಯಮಂತ್ರಿ ಮುಲಾಯಂ ಸಿಂಗ್ ಯಾದವ್ ಜನ್ಮದಿನಾಚರಣೆಯಲ್ಲಿ ಮಾತನಾಡಿದರು.</p>.<p>ಮೊಳಕಾಲ್ಮುರು ಪಟ್ಟಣ ಪಂಚಾಯಿತಿ ಚುನಾವಣೆಯಲ್ಲಿಯೂ ಪಕ್ಷ ಸ್ಪರ್ಧಿಸುವ ನಿರ್ಧಾರ ಮಾಡಿದ್ದು, ಮೀಸಲಾತಿ ಘೋಷಣೆಯಾದ ನಂತರ ಅಭ್ಯರ್ಥಿಗಳ ಹೆಸರುಗಳನ್ನು ಘೋಷಣೆ ಮಾಡಲಾಗುವುದು. ಈ ಭಾಗದಲ್ಲಿ ಪರಿಶಿಷ್ಟ ಜಾತಿ, ಪಂಗಡದ ಜನ ಹೆಚ್ಚಿದ್ದು, ಇವರಿಗೆ ಸಾಮಾಜಿಕ ನ್ಯಾಯ ಒದಗಿಸಲು ಪಕ್ಷ ಬದ್ಧವಾಗಿದೆ ಎಂದರು.</p>.<p>ಉಪಾಧ್ಯಕ್ಷ ಬಿ. ತಿಪ್ಪೇಸ್ವಾಮಿ, ಬಿ. ಬಾಲರಾಜ್, ಮುಖಂಡರಾದ ಜಿ.ಸಿ. ನಾಗರಾಜ್ ರಾಂಪುರ, ಪಿ.ಟಿ. ಹಟ್ಟಿ ತಮ್ಮಣ್ಣ, ಪಾಪಣ್ಣ, ಪಾಲಣ್ಣ, ಬೋರಯ್ಯ, ಸೂರಯ್ಯ, ದಡ್ಡಯ್ಯ, ಶ್ರೀನಿವಾಸ್ ಇದ್ದರು.</p>