<p><strong>ಮೊಳಕಾಲ್ಮುರು</strong>: ಸಮುದಾಯಕ್ಕೆ ಅನುಕೂಲವಾಗುವ ನಿಟ್ಟಿನಲ್ಲಿ ಸಾರ್ವಜನಿಕರು ನೀಡುವ ಎಲ್ಲಾ ಸಲಹೆಗಳನ್ನು ಪಾಲಿಸಲು ಪೊಲೀಸ್ ಇಲಾಖೆ ಬದ್ಧವಾಗಿದೆ ಎಂದು ಸರ್ಕಲ್ ಇನ್ಸ್ಪೆಕ್ಟರ್ ಆರ್. ನಾಗರಾಜ್ ಹೇಳಿದರು.</p>.<p>ಭಾನುವಾರ ಪೊಲೀಸ್ ಇಲಾಖೆ ಹಮ್ಮಿಕೊಂಡಿದ್ದ ಜನಸಂಪರ್ಕ ಸಭೆಯಲ್ಲಿ ಮಾತನಾಡಿದರು.</p>.<p>ಪೊಲೀಸ್ ಇಲಾಖೆ ಮತ್ತು ಸಾರ್ವಜನಿಕರು ಪರಸ್ಪರ ಸಹಭಾಗಿತ್ವ ಹೊಂದಿದ್ದಾಗ ಮಾತ್ರ ಅಪರಾಧ ಪ್ರಕರಣಗಳನ್ನು ಕಡಿಮೆ ಮಾಡಲು ಸಾಧ್ಯವಿದೆ. ಈ ನಿಟ್ಟಿನಲ್ಲಿ ಇಲಾಖೆ ಅನೇಕ ಕಾರ್ಯಕ್ರಮಗಳನ್ನು ಹಾಕಿಕೊಂಡು ಜನರ ಬಳಿಗೆ ಹೋಗುತ್ತಿದ್ದೇವೆ. ಸಾರ್ವಜನಿಕ ಸ್ಥಳಗಳಲ್ಲಿ, ಶಾಲಾ–ಕಾಲೇಜುಗಳಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ ಎಂದರು.</p>.<p>ಇತ್ತೀಚೆಗೆ ಮೊಳಕಾಲ್ಮುರು ಪೊಲೀಸ್ ಠಾಣೆಯಲ್ಲಿ ಮೊಬೈಲ್ ಕಳ್ಳತನದ ಬಗ್ಗೆ ಹಲವು ದೂರುಗಳು ದಾಖಲಾಗಿದ್ದು, ಈ ಪೈಕಿ 26 ಮೊಬೈಲ್ಗಳನ್ನು ಪತ್ತೆ ಮಾಡಿದ್ದೇವೆ. ಮಾಲೀಕರಿಗೆ ಹಸ್ತಾಂತರ ಮಾಡಲಾಗುತ್ತಿದೆ ಎಂದು ಪಿಎಸ್ಐ ಮಹೇಶ್ ಹೊಸಪೇಟೆ ತಿಳಿಸಿದರು.</p>.<p>ಮುಖಂಡರಾದ ಚಂದ್ರಶೇಖರ ಗೌಡ, ಶ್ರೀನಿವಾಸಮೂರ್ತಿ ಹಾಗೂ ಪೊಲೀಸ್ ಸಿಬ್ಬಂದಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೊಳಕಾಲ್ಮುರು</strong>: ಸಮುದಾಯಕ್ಕೆ ಅನುಕೂಲವಾಗುವ ನಿಟ್ಟಿನಲ್ಲಿ ಸಾರ್ವಜನಿಕರು ನೀಡುವ ಎಲ್ಲಾ ಸಲಹೆಗಳನ್ನು ಪಾಲಿಸಲು ಪೊಲೀಸ್ ಇಲಾಖೆ ಬದ್ಧವಾಗಿದೆ ಎಂದು ಸರ್ಕಲ್ ಇನ್ಸ್ಪೆಕ್ಟರ್ ಆರ್. ನಾಗರಾಜ್ ಹೇಳಿದರು.</p>.<p>ಭಾನುವಾರ ಪೊಲೀಸ್ ಇಲಾಖೆ ಹಮ್ಮಿಕೊಂಡಿದ್ದ ಜನಸಂಪರ್ಕ ಸಭೆಯಲ್ಲಿ ಮಾತನಾಡಿದರು.</p>.<p>ಪೊಲೀಸ್ ಇಲಾಖೆ ಮತ್ತು ಸಾರ್ವಜನಿಕರು ಪರಸ್ಪರ ಸಹಭಾಗಿತ್ವ ಹೊಂದಿದ್ದಾಗ ಮಾತ್ರ ಅಪರಾಧ ಪ್ರಕರಣಗಳನ್ನು ಕಡಿಮೆ ಮಾಡಲು ಸಾಧ್ಯವಿದೆ. ಈ ನಿಟ್ಟಿನಲ್ಲಿ ಇಲಾಖೆ ಅನೇಕ ಕಾರ್ಯಕ್ರಮಗಳನ್ನು ಹಾಕಿಕೊಂಡು ಜನರ ಬಳಿಗೆ ಹೋಗುತ್ತಿದ್ದೇವೆ. ಸಾರ್ವಜನಿಕ ಸ್ಥಳಗಳಲ್ಲಿ, ಶಾಲಾ–ಕಾಲೇಜುಗಳಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ ಎಂದರು.</p>.<p>ಇತ್ತೀಚೆಗೆ ಮೊಳಕಾಲ್ಮುರು ಪೊಲೀಸ್ ಠಾಣೆಯಲ್ಲಿ ಮೊಬೈಲ್ ಕಳ್ಳತನದ ಬಗ್ಗೆ ಹಲವು ದೂರುಗಳು ದಾಖಲಾಗಿದ್ದು, ಈ ಪೈಕಿ 26 ಮೊಬೈಲ್ಗಳನ್ನು ಪತ್ತೆ ಮಾಡಿದ್ದೇವೆ. ಮಾಲೀಕರಿಗೆ ಹಸ್ತಾಂತರ ಮಾಡಲಾಗುತ್ತಿದೆ ಎಂದು ಪಿಎಸ್ಐ ಮಹೇಶ್ ಹೊಸಪೇಟೆ ತಿಳಿಸಿದರು.</p>.<p>ಮುಖಂಡರಾದ ಚಂದ್ರಶೇಖರ ಗೌಡ, ಶ್ರೀನಿವಾಸಮೂರ್ತಿ ಹಾಗೂ ಪೊಲೀಸ್ ಸಿಬ್ಬಂದಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>