<p><strong>ಮೊಳಕಾಲ್ಮುರು</strong>: ರಾಜಕೀಯ ಮತ್ತು ಸಾಮಾಜಿಕ ಜೀವನದಲ್ಲಿ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು ಅಜಾತಶತ್ರು ಎನಿಸಿದ್ದು, ಇಂದಿನ ರಾಜಕಾರಣಿಗಳಿಗೆ ಮಾದರಿಯಾಗಿದ್ದಾರೆ ಎಂದು ಬಿಜೆಪಿ ಮಂಡಲಾಧ್ಯಕ್ಷ ಡಾ.ಪಿ.ಎಂ. ಮಂಜುನಾಥ್ ಹೇಳಿದರು.</p>.<p>ಪಕ್ಷದ ಕಚೇರಿಯಲ್ಲಿ ಗುರುವಾರ ಹಮ್ಮಿಕೊಂಡಿದ್ದ ವಾಜಪೇಯಿ ಜನ್ಮ ಶತಮಾನೋತ್ಸವದಲ್ಲಿ ಅವರು ಮಾತನಾಡಿದರು.</p>.<p>ಆಧುನಿಕ ಸ್ಪರ್ಶದ ರಸ್ತೆಗಳು, ಚತುಷ್ಪಥ ರಾಷ್ಟ್ರೀಯ ಹೆದ್ದಾರಿಗಳ ನಿರ್ಮಾಣ, ಸರ್ವಶಿಕ್ಷಾ ಅಭಿಯಾನ, ಗ್ರಾಮ ಸಡಕ್ ಯೋಜನೆ, ಪೋಖರಣ್ನಲ್ಲಿ ಪರಮಾಣು ಪರೀಕ್ಷೆ ಸೇರಿದಂತೆ ಹಲವು ಯೋಜನೆಗಳ ಮೂಲಕ ದೇಶದ ಶಕ್ತಿಯನ್ನು ವಿಶ್ಚಮಟ್ಟಕ್ಕೆ ಪರಿಚಯಿಸಿದರು. ಅವರ ಆದರ್ಶಗಳನ್ನು ಯುವಸಮೂಹ ಮೈಗೂಸಿಕೊಳ್ಳಬೇಕಿದೆ ಎಂದು ಸಲಹೆ ನೀಡಿದರು. </p>.<p>ಪಟ್ಟಣ ಪಂಚಾಯಿತಿ ಸದಸ್ಯರಾದ ಟಿ.ಟಿ. ರವಿಕುಮಾರ್, ಮಂಜಣ್ಣ, ಪ್ರಧಾನ ಕಾರ್ಯದರ್ಶಿ ಪ್ರಭಾಕರ್, ಎಸ್ಸಿ ಘಟಕದ ಅಧ್ಯಕ್ಷ ಮೊಗಲಹಳ್ಳಿ ಸಿದ್ಧಾರ್ಥ್, ಮುಖಂಡರಾದ ಹಣ್ಣಿನ ಸಿದ್ದಣ್ಣ, ಪೃಥಿರಾಜ್, ಅರ್ಜುನ್, ರಾಮಾಂಜಿನೇಯ, ಭೀಮಣ್ಣ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೊಳಕಾಲ್ಮುರು</strong>: ರಾಜಕೀಯ ಮತ್ತು ಸಾಮಾಜಿಕ ಜೀವನದಲ್ಲಿ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು ಅಜಾತಶತ್ರು ಎನಿಸಿದ್ದು, ಇಂದಿನ ರಾಜಕಾರಣಿಗಳಿಗೆ ಮಾದರಿಯಾಗಿದ್ದಾರೆ ಎಂದು ಬಿಜೆಪಿ ಮಂಡಲಾಧ್ಯಕ್ಷ ಡಾ.ಪಿ.ಎಂ. ಮಂಜುನಾಥ್ ಹೇಳಿದರು.</p>.<p>ಪಕ್ಷದ ಕಚೇರಿಯಲ್ಲಿ ಗುರುವಾರ ಹಮ್ಮಿಕೊಂಡಿದ್ದ ವಾಜಪೇಯಿ ಜನ್ಮ ಶತಮಾನೋತ್ಸವದಲ್ಲಿ ಅವರು ಮಾತನಾಡಿದರು.</p>.<p>ಆಧುನಿಕ ಸ್ಪರ್ಶದ ರಸ್ತೆಗಳು, ಚತುಷ್ಪಥ ರಾಷ್ಟ್ರೀಯ ಹೆದ್ದಾರಿಗಳ ನಿರ್ಮಾಣ, ಸರ್ವಶಿಕ್ಷಾ ಅಭಿಯಾನ, ಗ್ರಾಮ ಸಡಕ್ ಯೋಜನೆ, ಪೋಖರಣ್ನಲ್ಲಿ ಪರಮಾಣು ಪರೀಕ್ಷೆ ಸೇರಿದಂತೆ ಹಲವು ಯೋಜನೆಗಳ ಮೂಲಕ ದೇಶದ ಶಕ್ತಿಯನ್ನು ವಿಶ್ಚಮಟ್ಟಕ್ಕೆ ಪರಿಚಯಿಸಿದರು. ಅವರ ಆದರ್ಶಗಳನ್ನು ಯುವಸಮೂಹ ಮೈಗೂಸಿಕೊಳ್ಳಬೇಕಿದೆ ಎಂದು ಸಲಹೆ ನೀಡಿದರು. </p>.<p>ಪಟ್ಟಣ ಪಂಚಾಯಿತಿ ಸದಸ್ಯರಾದ ಟಿ.ಟಿ. ರವಿಕುಮಾರ್, ಮಂಜಣ್ಣ, ಪ್ರಧಾನ ಕಾರ್ಯದರ್ಶಿ ಪ್ರಭಾಕರ್, ಎಸ್ಸಿ ಘಟಕದ ಅಧ್ಯಕ್ಷ ಮೊಗಲಹಳ್ಳಿ ಸಿದ್ಧಾರ್ಥ್, ಮುಖಂಡರಾದ ಹಣ್ಣಿನ ಸಿದ್ದಣ್ಣ, ಪೃಥಿರಾಜ್, ಅರ್ಜುನ್, ರಾಮಾಂಜಿನೇಯ, ಭೀಮಣ್ಣ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>