<p><strong>ಮೊಳಕಾಲ್ಮುರು</strong>: ಚಿಕ್ಕಮಗಳೂರಿನಲ್ಲಿ ವಕೀಲ ಪ್ರೀತಮ್ ಮೇಲೆ ಪೊಲೀಸರು ಹಲ್ಲೆ ನಡೆಸಿರುವುದನ್ನು ಖಂಡಿಸಿ ತಾಲ್ಲೂಕು ವಕೀಲರ ಸಂಘ ಬುಧವಾರ ಪ್ರತಿಭಟನೆ ನಡೆಸಿತು.</p>.<p>‘ದ್ವಿಚಕ್ರ ವಾಹನ ಚಲಾಯಿಸುವಾಗ ಹೆಲ್ಮೆಟ್ ಧರಿಸಿಲ್ಲ ಎಂಬ ಕಾರಣಕ್ಕೆ ಪ್ರೀತಮ್ ಅವರನ್ನು ಠಾಣೆಗೆ ಕರೆದೊಯ್ದು ಕಿರುಕುಳ ನೀಡಲಾಗಿದೆ. ಕಿರುಕುಳ ನೀಡಿರುವ ಪೊಲೀಸರು ವಕೀಲರ ವಿರುದ್ಧವೇ ಸುಳ್ಳು ಮೊಕದ್ದಮೆ ದಾಖಲಿಸಿದ್ದಾರೆ. ತಪ್ಪಿತಸ್ಥ ಪೊಲೀಸ್ ಸಿಬ್ಬಂದಿ ವಿರುದ್ಧ ಸರ್ಕಾರ ಕ್ರಮ ಕೈಗೊಂಡು, ಪ್ರೀಮ್ ಮೇಲೆ ದಾಖಲಿಸಿರುವ ಕೇಸ್ ವಾಪಸ್ ಪಡೆಯಬೇಕು ಮತ್ತು ಸೂಕ್ತ ಪರಿಹಾರ ನೀಡಬೇಕು’ ಎಂದು ಸಂಘದ ಅಧ್ಯಕ್ಷ ಆರ್. ಆನಂದ್ ಆಗ್ರಹಿಸಿದರು.</p>.<p>ತಹಶೀಲ್ದಾರ್ ಎಂ.ವಿ. ರೂಪಾ ಅವರಿಗೆ ಮನವಿ ಸಲ್ಲಿಸಲಾಯಿತು.</p>.<p>ವಕೀಲರಾದ ಕುಮಾರಪ್ಪ, ಜಿ.ಎಚ್. ಸುರೇಶ್, ಚಾಣಕ್ಯ, ಕೆ.ಎಂ. ರಾಮಾಂಜಿನೇಯ, ವಿ.ಜಿ. ಪರಮೇಶ್ವರಪ್ಪ, ವಿ. ರಾಘವೇಂದ್ರ, ಮಲ್ಲಿಕಾರ್ಜುನ್, ಬಸವರಾಜ್, ವೀರೇಶ್ ಸಿದ್ದಪ್ಪ ಇತರರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೊಳಕಾಲ್ಮುರು</strong>: ಚಿಕ್ಕಮಗಳೂರಿನಲ್ಲಿ ವಕೀಲ ಪ್ರೀತಮ್ ಮೇಲೆ ಪೊಲೀಸರು ಹಲ್ಲೆ ನಡೆಸಿರುವುದನ್ನು ಖಂಡಿಸಿ ತಾಲ್ಲೂಕು ವಕೀಲರ ಸಂಘ ಬುಧವಾರ ಪ್ರತಿಭಟನೆ ನಡೆಸಿತು.</p>.<p>‘ದ್ವಿಚಕ್ರ ವಾಹನ ಚಲಾಯಿಸುವಾಗ ಹೆಲ್ಮೆಟ್ ಧರಿಸಿಲ್ಲ ಎಂಬ ಕಾರಣಕ್ಕೆ ಪ್ರೀತಮ್ ಅವರನ್ನು ಠಾಣೆಗೆ ಕರೆದೊಯ್ದು ಕಿರುಕುಳ ನೀಡಲಾಗಿದೆ. ಕಿರುಕುಳ ನೀಡಿರುವ ಪೊಲೀಸರು ವಕೀಲರ ವಿರುದ್ಧವೇ ಸುಳ್ಳು ಮೊಕದ್ದಮೆ ದಾಖಲಿಸಿದ್ದಾರೆ. ತಪ್ಪಿತಸ್ಥ ಪೊಲೀಸ್ ಸಿಬ್ಬಂದಿ ವಿರುದ್ಧ ಸರ್ಕಾರ ಕ್ರಮ ಕೈಗೊಂಡು, ಪ್ರೀಮ್ ಮೇಲೆ ದಾಖಲಿಸಿರುವ ಕೇಸ್ ವಾಪಸ್ ಪಡೆಯಬೇಕು ಮತ್ತು ಸೂಕ್ತ ಪರಿಹಾರ ನೀಡಬೇಕು’ ಎಂದು ಸಂಘದ ಅಧ್ಯಕ್ಷ ಆರ್. ಆನಂದ್ ಆಗ್ರಹಿಸಿದರು.</p>.<p>ತಹಶೀಲ್ದಾರ್ ಎಂ.ವಿ. ರೂಪಾ ಅವರಿಗೆ ಮನವಿ ಸಲ್ಲಿಸಲಾಯಿತು.</p>.<p>ವಕೀಲರಾದ ಕುಮಾರಪ್ಪ, ಜಿ.ಎಚ್. ಸುರೇಶ್, ಚಾಣಕ್ಯ, ಕೆ.ಎಂ. ರಾಮಾಂಜಿನೇಯ, ವಿ.ಜಿ. ಪರಮೇಶ್ವರಪ್ಪ, ವಿ. ರಾಘವೇಂದ್ರ, ಮಲ್ಲಿಕಾರ್ಜುನ್, ಬಸವರಾಜ್, ವೀರೇಶ್ ಸಿದ್ದಪ್ಪ ಇತರರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>