<p><strong>ಭರಮಸಾಗರ: </strong>ಗ್ರಾಮದಲ್ಲಿ ಭಾನುವಾರ ನಡೆದ ಮದುವೆ ಸಮಾರಂಭವೊಂದರಲ್ಲಿ ಊಟ ಮಾಡಿದ ವಧು– ವರ ಸೇರಿ 60ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿದ್ದಾರೆ.</p>.<p>ಇಲ್ಲಿನ ಹೆಗ್ಗೆರೆ ರಸ್ತೆಯಲ್ಲಿರುವ ಕಲ್ಯಾಣ ಮಂಟಪದಲ್ಲಿ ವಿವಾಹ ಮಹೋತ್ಸವ ನೆರವೇರಿತ್ತು. ಮಧ್ಯಾಹ್ನ ಊಟ ಮಾಡಿದ್ದ ಭರಮಸಾಗರ, ಕೋಗುಂಡೆ ಗ್ರಾಮದ ಕೆಲವರಲ್ಲಿ ಸಂಜೆ ಹೊತ್ತಿಗೆ ವಾಂತಿ, ಭೇದಿಕಾಣಿಸಿಕೊಂಡಿತು. ತಕ್ಷಣ ಅವರನ್ನು ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಯಿತು.</p>.<p>ಜಿಲ್ಲಾ ಆರೋಗ್ಯ ಅಧಿಕಾರಿ ಆರ್. ರಂಗನಾಥ್ ಭೇಟಿ ನೀಡಿ ವೈದ್ಯರಿಂದ ಮಾಹಿತಿ ಪಡೆದರು. ಬಹುತೇಕರಲ್ಲಿ ವಾಂತಿ, ಭೇದಿ, ತಲೆ<br />ನೋವಿನಂತ ಸಾಮಾನ್ಯ ಲಕ್ಷಣಗಳು ಕಾಣಿಸಿಕೊಂಡಿವೆ. ಎಲ್ಲರಿಗೂ ಚಿಕಿತ್ಸೆ ನೀಡಲಾಗಿದೆ.ಗಂಭೀರ ಪ್ರಕರಣಗಳಿಲ್ಲ. ಬಿ.ಪಿ ಮತ್ತು ಇತರೆ ತೊಂದರೆಯಿಂದ ಬಳಲುತ್ತಿದ್ದ ಏಳು ಜನರನ್ನು ಮುಂಜಾಗ್ರತಾ ಕ್ರಮವಾಗಿ ದಾವಣಗೆರೆ ಜಿಲ್ಲಾ ಆಸ್ಪತ್ರೆಗೆ ಕಳುಹಿಸಲಾಗಿದೆ. ಅಸ್ವಸ್ಥರ<br />ವಾಂತಿ ಮಾದರಿ ಹಾಗೂ ಆಹಾರವನ್ನು ಜಿಲ್ಲಾ ಪ್ರಯೋಗಾಲಯಕ್ಕೆ ಕಳಿಸಿಕೊಡಲಾಗುವುದು ಎಂದರು.</p>.<p>ಶಾಸಕ ಎಂ. ಚಂದ್ರಪ್ಪ ರಾತ್ರಿ ಆಸ್ಪತ್ರೆಗೆ ಭೇಟಿ ನೀಡಿ ರೋಗಿಗಳ ಆರೋಗ್ಯ ವಿಚಾರಿಸಿ ವೈದ್ಯರಿಂದ ಮಾಹಿತಿ ಪಡೆದರು.</p>.<p>ಕೋಗುಂಡೆ, ಕಾಲ್ಗೆರೆ, ಭರಮಸಾಗರ ಆಸ್ಪತ್ರೆಗಳಲ್ಲಿ ವೈದ್ಯರು ಮತ್ತು ಸಿಬ್ಬಂದಿ ಕೊರತೆ ಇದೆ. ಹೆಚ್ಚಿನ ಸೌಕರ್ಯ ಕಲ್ಪಿಸಿ ಎಂದು ಸಾರ್ವಜನಿಕರು ಮನವಿ ಮಾಡಿದರು.</p>.<p>₹ 10 ಕೋಟಿ ವೆಚ್ಚದಲ್ಲಿ ಸಿರಿಗೆರೆ, ಭರಮಸಾಗರ ಸಮುದಾಯ ಆರೋಗ್ಯ ಕೇಂದ್ರಗಳನ್ನು ಅಭಿವೃದ್ಧಿಪಡಿಸುವುದಾಗಿ ಶಾಸಕ ಚಂದ್ರಪ್ಪ ತಿಳಿಸಿದರು.</p>.<p>ತಾಲ್ಲೂಕು ಆರೋಗ್ಯಾಧಿಕಾರಿ ಬಿ.ವಿ.ಗಿರೀಶ್,ತಹಶೀಲ್ದಾರ್ ಜಿ.ಎಚ್. ಸತ್ಯನಾರಾಯಣ, ಇನ್ಸ್ಪೆಕ್ಟರ್ ಮಧು, ಕಂದಾಯ ಇಲಾಖೆ ಆರ್ಐ ಪರಶುರಾಮ್, ಡಾ. ವಿನಯ್ರಾಜ್, ಶ್ರೀಧರ್, ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಕಲ್ಲೇಶ್, ಗ್ರಾಮ ಪಂಚಾಯಿತಿ ಸದಸ್ಯ ಕಿರಣ್ ಕುಮಾರ್, ರುದ್ರೇಶ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಭರಮಸಾಗರ: </strong>ಗ್ರಾಮದಲ್ಲಿ ಭಾನುವಾರ ನಡೆದ ಮದುವೆ ಸಮಾರಂಭವೊಂದರಲ್ಲಿ ಊಟ ಮಾಡಿದ ವಧು– ವರ ಸೇರಿ 60ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿದ್ದಾರೆ.</p>.<p>ಇಲ್ಲಿನ ಹೆಗ್ಗೆರೆ ರಸ್ತೆಯಲ್ಲಿರುವ ಕಲ್ಯಾಣ ಮಂಟಪದಲ್ಲಿ ವಿವಾಹ ಮಹೋತ್ಸವ ನೆರವೇರಿತ್ತು. ಮಧ್ಯಾಹ್ನ ಊಟ ಮಾಡಿದ್ದ ಭರಮಸಾಗರ, ಕೋಗುಂಡೆ ಗ್ರಾಮದ ಕೆಲವರಲ್ಲಿ ಸಂಜೆ ಹೊತ್ತಿಗೆ ವಾಂತಿ, ಭೇದಿಕಾಣಿಸಿಕೊಂಡಿತು. ತಕ್ಷಣ ಅವರನ್ನು ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಯಿತು.</p>.<p>ಜಿಲ್ಲಾ ಆರೋಗ್ಯ ಅಧಿಕಾರಿ ಆರ್. ರಂಗನಾಥ್ ಭೇಟಿ ನೀಡಿ ವೈದ್ಯರಿಂದ ಮಾಹಿತಿ ಪಡೆದರು. ಬಹುತೇಕರಲ್ಲಿ ವಾಂತಿ, ಭೇದಿ, ತಲೆ<br />ನೋವಿನಂತ ಸಾಮಾನ್ಯ ಲಕ್ಷಣಗಳು ಕಾಣಿಸಿಕೊಂಡಿವೆ. ಎಲ್ಲರಿಗೂ ಚಿಕಿತ್ಸೆ ನೀಡಲಾಗಿದೆ.ಗಂಭೀರ ಪ್ರಕರಣಗಳಿಲ್ಲ. ಬಿ.ಪಿ ಮತ್ತು ಇತರೆ ತೊಂದರೆಯಿಂದ ಬಳಲುತ್ತಿದ್ದ ಏಳು ಜನರನ್ನು ಮುಂಜಾಗ್ರತಾ ಕ್ರಮವಾಗಿ ದಾವಣಗೆರೆ ಜಿಲ್ಲಾ ಆಸ್ಪತ್ರೆಗೆ ಕಳುಹಿಸಲಾಗಿದೆ. ಅಸ್ವಸ್ಥರ<br />ವಾಂತಿ ಮಾದರಿ ಹಾಗೂ ಆಹಾರವನ್ನು ಜಿಲ್ಲಾ ಪ್ರಯೋಗಾಲಯಕ್ಕೆ ಕಳಿಸಿಕೊಡಲಾಗುವುದು ಎಂದರು.</p>.<p>ಶಾಸಕ ಎಂ. ಚಂದ್ರಪ್ಪ ರಾತ್ರಿ ಆಸ್ಪತ್ರೆಗೆ ಭೇಟಿ ನೀಡಿ ರೋಗಿಗಳ ಆರೋಗ್ಯ ವಿಚಾರಿಸಿ ವೈದ್ಯರಿಂದ ಮಾಹಿತಿ ಪಡೆದರು.</p>.<p>ಕೋಗುಂಡೆ, ಕಾಲ್ಗೆರೆ, ಭರಮಸಾಗರ ಆಸ್ಪತ್ರೆಗಳಲ್ಲಿ ವೈದ್ಯರು ಮತ್ತು ಸಿಬ್ಬಂದಿ ಕೊರತೆ ಇದೆ. ಹೆಚ್ಚಿನ ಸೌಕರ್ಯ ಕಲ್ಪಿಸಿ ಎಂದು ಸಾರ್ವಜನಿಕರು ಮನವಿ ಮಾಡಿದರು.</p>.<p>₹ 10 ಕೋಟಿ ವೆಚ್ಚದಲ್ಲಿ ಸಿರಿಗೆರೆ, ಭರಮಸಾಗರ ಸಮುದಾಯ ಆರೋಗ್ಯ ಕೇಂದ್ರಗಳನ್ನು ಅಭಿವೃದ್ಧಿಪಡಿಸುವುದಾಗಿ ಶಾಸಕ ಚಂದ್ರಪ್ಪ ತಿಳಿಸಿದರು.</p>.<p>ತಾಲ್ಲೂಕು ಆರೋಗ್ಯಾಧಿಕಾರಿ ಬಿ.ವಿ.ಗಿರೀಶ್,ತಹಶೀಲ್ದಾರ್ ಜಿ.ಎಚ್. ಸತ್ಯನಾರಾಯಣ, ಇನ್ಸ್ಪೆಕ್ಟರ್ ಮಧು, ಕಂದಾಯ ಇಲಾಖೆ ಆರ್ಐ ಪರಶುರಾಮ್, ಡಾ. ವಿನಯ್ರಾಜ್, ಶ್ರೀಧರ್, ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಕಲ್ಲೇಶ್, ಗ್ರಾಮ ಪಂಚಾಯಿತಿ ಸದಸ್ಯ ಕಿರಣ್ ಕುಮಾರ್, ರುದ್ರೇಶ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>