ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿತ್ರದುರ್ಗ: ತಿಪ್ಪೇರುದ್ರಸ್ವಾಮಿ ಆಶ್ರಮದ ಸಂಪಿನಲ್ಲಿ ತಾಯಿ, ಮಗಳ ಶವ ಪತ್ತೆ

ತುರುವನೂರು ರಸ್ತೆಯ ತಿಪ್ಪೇರುದ್ರಸ್ವಾಮಿ ಆಶ್ರಮದ ಸಂಪಿನಲ್ಲಿ ತಾಯಿ ಮತ್ತು ಮಗಳ ಶವ ಪತ್ತೆಯಾಗಿದ್ದು, ಅನುಮಾನಾಸ್ಪದವಾಗಿ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ
Published 16 ಏಪ್ರಿಲ್ 2024, 18:14 IST
Last Updated 16 ಏಪ್ರಿಲ್ 2024, 18:14 IST
ಅಕ್ಷರ ಗಾತ್ರ

ಚಿತ್ರದುರ್ಗ: ತುರುವನೂರು ರಸ್ತೆಯ ತಿಪ್ಪೇರುದ್ರಸ್ವಾಮಿ ಆಶ್ರಮದ ಸಂಪಿನಲ್ಲಿ ತಾಯಿ ಮತ್ತು ಮಗಳ ಶವ ಪತ್ತೆಯಾಗಿದ್ದು, ಅನುಮಾನಾಸ್ಪದವಾಗಿ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ.

ಭದ್ರಾವತಿಯ ಗೀತಾ (40) ಹಾಗೂ ಪ್ರಿಯಾಂಕಾ (22) ಮೃತಪಟ್ಟವರು. ತಿಪ್ಪೇರುದ್ರಸ್ವಾಮಿ ದೇಗುಲದಲ್ಲಿ ಪೂಜೆ ಮಾಡಿಕೊಂಡು ಆಶ್ರಮದಲ್ಲಿ ವಾಸವಾಗಿದ್ದರು. ಮಾನಸಿಕ ಖಿನ್ನತೆಯಿಂದ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ.

ಆಶ್ರಮದಲ್ಲಿ ಗೀತಾ ಅವರು ಕುಟುಂಬ ಸಮೇತ ವಾಸವಾಗಿದ್ದರು. ಮಂಗಳವಾರ ಸಂಜೆ ಪತಿ ಮತ್ತು ಮಗ ಆಶ್ರಮದಿಂದ ಹೊರಹೋಗಿದ್ದರು. ರಾತ್ರಿ ಆಶ್ರಮಕ್ಕೆ ಮರಳಿದಾಗ ಇಬ್ಬರು ಶವವಾಗಿ ಪತ್ತೆಯಾಗಿದ್ದಾರೆ ಎಂದು ಬಡಾವಣೆ ಠಾಣೆಯ ಪೊಲೀಸರು ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT