<p><strong>ಚಿತ್ರದುರ್ಗ: </strong>ಸಂಸದೀಯ ಪ್ರಜಾಪ್ರಭುತ್ವವನ್ನು ಗಟ್ಟಿಗೊಳಿಸಲು ಜನಚಳವಳಿಯ ಅಗತ್ಯವಿದೆ ಎಂದು ಸಾಮಾಜಿಕ ಸಂಘರ್ಷ ಸಮಿತಿ ಅಧ್ಯಕ್ಷ ಪ್ರೊ.ಸಿ.ಕೆ.ಮಹೇಶ್ ಅಭಿಪ್ರಾಯಪಟ್ಟರು.</p>.<p>ಇಲ್ಲಿನ ಪತ್ರಿಕಾಭವನದಲ್ಲಿ ನವಯಾನ ಬುದ್ಧಿಸಂ, ಸಾಮಾಜಿಕ ಸಂಘರ್ಷ ಸಮಿತಿ, ರಾಜ್ಯ ಕಾನೂನು ವಿದ್ಯಾರ್ಥಿಗಳ, ಪದವೀಧರರ ಸಂಘ ಶನಿವಾರ ಏರ್ಪಡಿಸಿದ್ದ ಸಂವಿಧಾನ ಸಮರ್ಪಣಾ ದಿನಾಚರಣೆಯಲ್ಲಿ ಅವರು ಮಾತನಾಡಿದರು.</p>.<p>‘ಸಂಸದೀಯ ಪ್ರಜಾಪ್ರಭುತ್ವದ ಕ್ರಿಯೆಗಳು ನ್ಯಾಯಾಂಗದ ತೀರ್ಪುಗಳಿಗಿಂತಲೂ ಪರಿಣಾಮಕಾರಿಯಾಗಿವೆ. ಸಂಸದೀಯ ಪ್ರಜಾಪ್ರಭುತ್ವವನ್ನು ನಿರ್ದೇಶಿಸುವ ಆಶಯಗಳು ಸಾಮಾಜಿಕ ನ್ಯಾಯಕ್ಕೆ ಪೂರಕವಾಗಿ ಜನರ ಹೋರಾಟಗಳಿಂದಲೇ ರೂಪುಗೊಳ್ಳಬೇಕು’ ಎಂದರು.</p>.<p>ಸಾಮಾಜಿಕ ಸಂಘರ್ಷ ಸಮಿತಿಯ ಜಿಲ್ಲಾ ಕಾರ್ಯದರ್ಶಿ ಸಿ.ಎ.ಚಿಕ್ಕಣ್ಣ, ರಾಜ್ಯ ಕಾನೂನು ವಿದ್ಯಾರ್ಥಿಗಳ, ಪದವೀಧರರ ಸಂಘದ ಅಧ್ಯಕ್ಷ ಎನ್.ರುದ್ರೇಶ್, ಕಾರ್ಯದರ್ಶಿ ಕೆ.ವಿಶ್ವಾನಂದ, ವೈ.ರಾಜಣ್ಣ ತುರುವನೂರು, ಉಪನ್ಯಾಸಕ ಡಾ. ಸಂಜೀವಕುಮಾರ್ ಪೋತೆ, ಪ್ರೊ.ಜಿ.ವಿ.ನಾಗರಾಜ್, ಡಾ. ವಿ.ಬಸವರಾಜ್ ಮಾತನಾಡಿದರು.</p>.<p>‘ಭಾರತ ಸಂವಿಧಾನ ಮತ್ತು ಆರ್ಥಿಕವಾಗಿ ದುರ್ಬಲ ವರ್ಗಗಳಿಗೆ ನೀಡಿದ ಮೀಸಲಾತಿ’ ಕುರಿತು ಸಂವಾದ ಜರುಗಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿತ್ರದುರ್ಗ: </strong>ಸಂಸದೀಯ ಪ್ರಜಾಪ್ರಭುತ್ವವನ್ನು ಗಟ್ಟಿಗೊಳಿಸಲು ಜನಚಳವಳಿಯ ಅಗತ್ಯವಿದೆ ಎಂದು ಸಾಮಾಜಿಕ ಸಂಘರ್ಷ ಸಮಿತಿ ಅಧ್ಯಕ್ಷ ಪ್ರೊ.ಸಿ.ಕೆ.ಮಹೇಶ್ ಅಭಿಪ್ರಾಯಪಟ್ಟರು.</p>.<p>ಇಲ್ಲಿನ ಪತ್ರಿಕಾಭವನದಲ್ಲಿ ನವಯಾನ ಬುದ್ಧಿಸಂ, ಸಾಮಾಜಿಕ ಸಂಘರ್ಷ ಸಮಿತಿ, ರಾಜ್ಯ ಕಾನೂನು ವಿದ್ಯಾರ್ಥಿಗಳ, ಪದವೀಧರರ ಸಂಘ ಶನಿವಾರ ಏರ್ಪಡಿಸಿದ್ದ ಸಂವಿಧಾನ ಸಮರ್ಪಣಾ ದಿನಾಚರಣೆಯಲ್ಲಿ ಅವರು ಮಾತನಾಡಿದರು.</p>.<p>‘ಸಂಸದೀಯ ಪ್ರಜಾಪ್ರಭುತ್ವದ ಕ್ರಿಯೆಗಳು ನ್ಯಾಯಾಂಗದ ತೀರ್ಪುಗಳಿಗಿಂತಲೂ ಪರಿಣಾಮಕಾರಿಯಾಗಿವೆ. ಸಂಸದೀಯ ಪ್ರಜಾಪ್ರಭುತ್ವವನ್ನು ನಿರ್ದೇಶಿಸುವ ಆಶಯಗಳು ಸಾಮಾಜಿಕ ನ್ಯಾಯಕ್ಕೆ ಪೂರಕವಾಗಿ ಜನರ ಹೋರಾಟಗಳಿಂದಲೇ ರೂಪುಗೊಳ್ಳಬೇಕು’ ಎಂದರು.</p>.<p>ಸಾಮಾಜಿಕ ಸಂಘರ್ಷ ಸಮಿತಿಯ ಜಿಲ್ಲಾ ಕಾರ್ಯದರ್ಶಿ ಸಿ.ಎ.ಚಿಕ್ಕಣ್ಣ, ರಾಜ್ಯ ಕಾನೂನು ವಿದ್ಯಾರ್ಥಿಗಳ, ಪದವೀಧರರ ಸಂಘದ ಅಧ್ಯಕ್ಷ ಎನ್.ರುದ್ರೇಶ್, ಕಾರ್ಯದರ್ಶಿ ಕೆ.ವಿಶ್ವಾನಂದ, ವೈ.ರಾಜಣ್ಣ ತುರುವನೂರು, ಉಪನ್ಯಾಸಕ ಡಾ. ಸಂಜೀವಕುಮಾರ್ ಪೋತೆ, ಪ್ರೊ.ಜಿ.ವಿ.ನಾಗರಾಜ್, ಡಾ. ವಿ.ಬಸವರಾಜ್ ಮಾತನಾಡಿದರು.</p>.<p>‘ಭಾರತ ಸಂವಿಧಾನ ಮತ್ತು ಆರ್ಥಿಕವಾಗಿ ದುರ್ಬಲ ವರ್ಗಗಳಿಗೆ ನೀಡಿದ ಮೀಸಲಾತಿ’ ಕುರಿತು ಸಂವಾದ ಜರುಗಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>