ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಜೆಟ್‌ನಲ್ಲಿ ಕಾಣಿಸುತ್ತಿದೆ ಕಪ್ಪುಚುಕ್ಕೆ: ಸಂಸದ ಎ.ನಾರಾಯಣಸ್ವಾಮಿ ಅಸಮಾಧಾನ

Last Updated 9 ಮಾರ್ಚ್ 2021, 11:13 IST
ಅಕ್ಷರ ಗಾತ್ರ

ಚಿತ್ರದುರ್ಗ: ರಾಜ್ಯ ಬಜೆಟ್‌ನಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಹಿಂದುಳಿದ ವರ್ಗಗಳ ನಿಗಮಗಳಿಗೆ ಹಂಚಿಕೆ ಮಾಡಿದ ಅನುದಾನದ ಬಗ್ಗೆ ಅಸಮಾಧಾನವಿದೆ. ಬಜೆಟ್‌ಗೆ ಇದೊಂದು ಕಪ್ಪುಚುಕ್ಕೆಯಾಗಿ ಕಾಣಿಸುತ್ತಿದೆ ಎಂದು ಬಿಜೆಪಿ ಸಂಸದ ಎ.ನಾರಾಯಣಸ್ವಾಮಿ ಬೇಸರ ವ್ಯಕ್ತಪಡಿಸಿದರು.

ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಂಗಳವಾರ ಮಾತನಾಡಿದ ಅವರು, ‘ಮೇಲ್ವರ್ಗದ ನಿಗಮಗಳಿಗೆ ನೀಡಿದ ಅನುದಾನದ ಬಗ್ಗೆ ಆಕ್ಷೇಪವಿಲ್ಲ. ಆದರೆ, ತುಳಿತಕ್ಕೆ ಒಳಗಾದ ಹಾಗೂ ಆರ್ಥಿಕವಾಗಿ ಹಿಂದುಳಿದ ಸಮುದಾಯಗಳಿಗೆ ಹೆಚ್ಚು ಆದ್ಯತೆ ಸಿಗಬೇಕು. ಇದರಲ್ಲಿ ವ್ಯತ್ಯಾಸ ಕಾಣಿಸುತ್ತಿದೆ. ಈ ಸಮಸ್ಯೆಯನ್ನು ಸರಿಪಡಿಸಿಕೊಂಡರೆ ಪಕ್ಷಕ್ಕೆ ಅನುಕೂಲಗುತ್ತದೆ’ ಎಂದು ಹೇಳಿದರು.

‘ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ದಲಿತ ಮತ್ತು ಹಿಂದುಳಿದ ಸಮುದಾಯಕ್ಕೆ ಹೆಚ್ಚು ಒತ್ತು ನೀಡುವಂತೆ ಚರ್ಚಿಸಲಾಗುವುದು. ಸಾಮಾಜಿಕ ಕಳಕಳಿ ಹೊಂದಿದ ಯಡಿಯೂರಪ್ಪ ಅವರು ಸ್ಪಂದಿಸುವ ನಿರೀಕ್ಷೆ ಇದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT