ಉಪಅರಣ್ಯ ಸಂರಕ್ಷಣಾಧಿಕಾರಿ ಚಂದ್ರಶೇಖರ್ ನಾಯ್ಕ್, ‘ಕೋವಿಡ್ ನಿಯಂತ್ರಣ ಸಂಬಂಧ ಸರತಿ ಸಾಲಿನಲ್ಲಿ ಹೆಚ್ಚಿನ ಜನರು ನಿಲ್ಲಬಾರದು ಎಂಬುದು ಇಲಾಖೆಯ ಉದ್ದೇಶ. ಅದಕ್ಕಾಗಿ ಮೃಗಾಲಯ ವೀಕ್ಷಿಸಲು ಬರುವಂಥ ಪ್ರವಾಸಿಗರಿಗೆ, ಪ್ರಾಣಿ-ಪಕ್ಷಿ ಪ್ರಿಯರಿಗೆ, ಸಾರ್ವಜನಿಕರ ಆರೋಗ್ಯ ಹಿತದೃಷ್ಟಿಯಿಂದ ಆ್ಯಪ್ ಮೂಲಕ ಟಿಕೆಟ್ ಕಾಯ್ದಿರಿಸಿ ನೇರ ಪ್ರವೇಶಕ್ಕೆ ಅನುವು ಮಾಡಿಕೊಡಲಾಗುತ್ತಿದೆ’ ಎಂದರು.