ಕೊಲೆಯಾದ ಆಂಜನೇಯ (32) ಹಾಗೂ ಆರೋಪಿಗಳು ಪರಿಚಯಸ್ಥರು. ಕೊಲೆಯಾಗುವುದಕ್ಕೂ ಮೊದಲು ಇವರು ಒಟ್ಟಿಗೆ ಇದ್ದರು. ಕ್ಷುಲ್ಲಕ ಕಾರಣಕ್ಕೆ ಇವರ ನಡುವೆ ಗಲಾಟೆ ನಡೆದಿದೆ. ಇದರಿಂದ ಕೆರಳಿದ ಆರೋಪಿ ಮಂಜುನಾಥ್ ಅಲಿಯಾಸ್ ಕಳ್ಳಮಂಜ ದೊಣ್ಣೆಯಿಂದ ಹೊಡೆದು, ಕಲ್ಲು ಎತ್ತಿಹಾಕಿ ಕೊಲೆ ಮಾಡಿದ್ದಾನೆ. ಈ ಸಂದರ್ಭದಲ್ಲಿ ಗಿರೀಶ್ ಅಲಿಯಾಸ್ ದಿಲೀಪ್ ಕೂಡ ಜೊತೆಗಿದ್ದು ನೆರವಾಗಿದ್ದಾನೆ. ಗಿರೀಶನನ್ನು ವಶಕ್ಕೆ ಪಡೆದ ಪೊಲೀಸರು ವಿಚಾರಣೆಗೆ ಒಳಪಡಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ.