<p><strong>ಚಿತ್ರದುರ್ಗ</strong>: ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಸೆ. 1ರಂದು ಬಂಧನಕ್ಕೆ ಒಳಗಾಗಿರುವ ಶಿವಮೂರ್ತಿ ಮುರುಘಾ ಶರಣರನ್ನು ಭಾನುವಾರ ಮುರುಘಾ ಮಠಕ್ಕೆ ಕರೆತಂದ ಪೊಲೀಸರು, ಅವರು ತಂಗುತ್ತಿದ್ದ ಕೊಠಡಿಯ ಮಹಜರು ನಡೆಸಿದರು.</p>.<p>ಪೊಲೀಸ್ ವಾಹನದಲ್ಲಿ ಭಾನುವಾರ ಆರೋಪಿಯನ್ನು ಮಠಕ್ಕೆ ಕರೆದೊಯ್ದ ತನಿಖಾ ತಂಡ, ಅವರು ತಂಗುತ್ತಿದ್ದ ಕೊಠಡಿಗೆ ಸಂಪರ್ಕ ಕಲ್ಪಿಸುವ ಮಾರ್ಗಗಳನ್ನೂ ಪರಿಶೀಲಿಸಿದೆ. ಅಂದಾಜು ಎರಡೂವರೆ ಗಂಟೆ ಮಹಜರು ನಡೆಯಿತು.</p>.<p>‘ಪ್ರಕರಣದ ಪ್ರಮುಖ ಆರೋಪಿಯಾದ ಮುರುಘಾ ಶರಣರನ್ನು ಮಠಕ್ಕೆ ಕರೆದೊಯ್ದು ಮಹಜರು ಮಾಡಲಾಗಿದೆ. ಅವರು ತಂಗುತ್ತಿದ್ದ ಕೊಠಡಿಯಲ್ಲಿ ದೋಷಾರೋಪಕ್ಕೆ ಪೂರಕವಾಗಿ ಲಭ್ಯವಾದ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ವಿಚಾರಣೆ ಇನ್ನೂ ಮುಂದುವರಿದಿದೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಪರಶುರಾಮ್ ಹೇಳಿದ್ದಾರೆ.</p>.<p>ಸಿಆರ್ಪಿಸಿ ಸೆಕ್ಷನ್ 164ರ ಅಡಿ ಸಂತ್ರಸ್ತ ಬಾಲಕಿಯರು ನ್ಯಾಯಾಲಯದಲ್ಲಿ ದಾಖಲಿಸಿದ ಹೇಳಿಕೆಯ ಪ್ರತಿಯು ಮುಚ್ಚಿದ ಲಕೋಟೆಯಲ್ಲಿ ತನಿಖಾಧಿಕಾರಿಯ ಕೈಸೇರಿದೆ. ಇದರಲ್ಲಿರುವ ಅಂಶಗಳ ಆಧಾರದಲ್ಲಿ ತನಿಖೆ ಚುರುಕುಗೊಳಿಸಿರುವ ಪೊಲೀಸರು, ಲೈಂಗಿಕ ದೌರ್ಜನ್ಯ ಎಸಗಿದ್ದರು ಎನ್ನಲಾದ ಸ್ಥಳಕ್ಕೆ ಆರೋಪಿಯೊಂದಿಗೆ ತೆರಳಿ ಪರಿಶೀಲನೆ ನಡೆಸಿದರು.</p>.<p>ತನಿಖಾ ತಂಡದೊಂದಿಗೆ ವಿಧಿವಿಜ್ಞಾನ ತಜ್ಞರು ಇರಲಿಲ್ಲ. ವಶಕ್ಕೆ ಪಡೆದ ವಸ್ತುಗಳನ್ನು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸುವ ಸಾಧ್ಯತೆ ಇದೆ. ಮಹಜರು ಸಂದರ್ಭ ಮಠದ ಆವರಣದಲ್ಲಿ ಬಿಗಿ ಭದ್ರತೆ ಕಲ್ಪಿಸಲಾಗಿತ್ತು. ಎಲ್ಲ ಪ್ರವೇಶ ದ್ವಾರಗಳನ್ನು ಮುಚ್ಚಿ ಭಕ್ತರು, ಪ್ರವಾಸಿಗರು ಬಾರದಂತೆ ನಿರ್ಬಂಧಿಸಲಾಗಿತ್ತು.</p>.<p>ಆರೋಪಿಯನ್ನು ಸೆ.2ರಂದು ವಿಚಾರಣೆಗಾಗಿ ವಶಕ್ಕೆ ಪಡೆದಿರುವ ತನಿಖಾ ತಂಡ ಡಿವೈಎಸ್ಪಿ ಕಚೇರಿಯಲ್ಲಿ ವಿಚಾರಣೆಗೆ ಒಳಪಡಿಸಿದೆ. ತನಿಖಾಧಿಕಾರಿ ಆಗಿರುವ ಡಿವೈಎಸ್ಪಿ ಅನಿಲ್ ಕುಮಾರ್ ನೇತೃತ್ವದ ತಂಡ ಕೇಳಿದ ಪ್ರಶ್ನೆಗಳಿಗೆ ಆರೋಪಿಯಿಂದ ಸಮರ್ಪಕ ಉತ್ತರ ಲಭ್ಯವಾಗಿಲ್ಲ ಎಂದು ಪೊಲೀಸ್ ಇಲಾಖೆಯ ಮೂಲಗಳು ಮಾಹಿತಿ ನೀಡಿವೆ.</p>.<p>ವಿಚಾರಣೆ ನಡೆಸುತ್ತಿರುವ ಡಿವೈಎಸ್ಪಿ ಕಚೇರಿ ಆವರಣದಲ್ಲಿಯೇ ವೈದ್ಯರ ತಂಡ ಬೀಡುಬಿಟ್ಟಿದೆ. ಆರೋಪಿಯನ್ನು ಆಗಾಗ ವೈದ್ಯಕೀಯ ತಪಾಸಣೆಗೆ ಒಳಪಡಿಸಿ ಆರೋಗ್ಯದ ಮೇಲೆ ನಿಗಾ ಇಟ್ಟಿದೆ. ಪೊಲೀಸ್ ಕಸ್ಟಡಿ ಅವಧಿಯು ಸೆ.5ರಂದು ಮುಕ್ತಾಯವಾಗಲಿದೆ. ತನಿಖಾ ತಂಡವು ಆರೋಪಿಯನ್ನು ಸೋಮವಾರ ನ್ಯಾಯಾಲಯದ ಎದುರು ಹಾಜರುಪಡಿಸಲಿದೆ.</p>.<p class="Briefhead"><strong>ವರದಿ ಸಲ್ಲಿಕೆಗೆ ಆಯೋಗ ಸೂಚನೆ</strong></p>.<p>ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ದೌರ್ಜನ್ಯ ತಡೆ ಕಾಯ್ದೆಯಡಿ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕೈಗೊಂಡಿರುವ ತನಿಖಾ ಕ್ರಮಗಳ ಕುರಿತು ರಾಜ್ಯ ಪರಿಶಿಷ್ಟ ಜಾತಿ ಮತ್ತು ಬುಡಕಟ್ಟು ಆಯೋಗ ವಿವರವಾದ ವರದಿ ಕೇಳಿದೆ.</p>.<p>ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಿಗೆ ಆಯೋಗದ ಕಾರ್ಯದರ್ಶಿ ಈ ಸಂಬಂಧ ಪತ್ರ ಬರೆದಿದ್ದಾರೆ.</p>.<p>‘ಪರಿಶಿಷ್ಟ ಜಾತಿಯ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇರೆಗೆ ಶಿವಮೂರ್ತಿ ಮುರುಘಾ ಶರಣರ ವಿರುದ್ಧ ದೂರು ದಾಖಲಾಗಿರುವುದಾಗಿ ವರದಿಯಾಗಿದೆ. ಬಾಲಕಿಯ ಭವಿಷ್ಯದ ಮೇಲೆ ಇದು ಪರಿಣಾಮ ಬೀರಲಿದೆ. ಈ ಬಗ್ಗೆ ವಿವರವಾದ ವರದಿ ನೀಡಿ’ ಎಂದು ಪತ್ರದಲ್ಲಿ ಸೂಚಿಸಲಾಗಿದೆ.</p>.<p class="Briefhead"><strong>ಸಾಮೂಹಿಕ ವಿವಾಹ ಇಂದು</strong></p>.<p>ಮುರುಘಾ ಮಠದಲ್ಲಿ ನಡೆಯಲಿರುವ ಮಾಸಿಕ ಸಾಮೂಹಿಕ ವಿವಾಹ ಸಮಾರಂಭಕ್ಕೆ ಸಿದ್ಧತೆಗಳು ನಡೆದಿವೆ. ಸೆ.5ರಂದು ಸಾಮೂಹಿಕ ವಿವಾಹ ಕಾರ್ಯಕ್ರಮ ಹಾಗೂ ಶಿಕ್ಷಕರ ದಿನಾಚರಣೆಯು ಪ್ರಭಾರ ಪೀಠಾಧಿಪತಿ ಮಹಾಂತ ರುದ್ರೇಶ್ವರ ಸ್ವಾಮೀಜಿ ನೇತೃತ್ವದಲ್ಲಿ ನಡೆಯಲಿದೆ.</p>.<p>ಸಾಮೂಹಿಕ ಕಲ್ಯಾಣ ಮಹೋತ್ಸವದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಡಲು ಏಳು ಜೋಡಿ ವಧು–ವರರು ನೋಂದಣಿ ಮಾಡಿಕೊಂಡಿದ್ದಾರೆ. ಗುರುಮಠಕಲ್ ಶಾಖಾ ಮಠದ ಶಾಂತವೀರ ಗುರು ಮುರುಘರಾಜೇಂದ್ರ ಸ್ವಾಮೀಜಿ ಭಾಗವಹಿಸಲಿದ್ದಾರೆ.</p>.<p>ಮಠದಲ್ಲಿ 32 ವರ್ಷಗಳಿಂದ ಪ್ರತಿ ತಿಂಗಳ 5ರಂದು ಸಾಮೂಹಿಕ ವಿವಾಹ ನಡೆಸಲಾಗುತ್ತಿದೆ. ಗ್ರಹಣ, ಅಮಾವಾಸ್ಯೆ ಎದುರಾದ ದಿನವೂ ಸಾಮೂಹಿಕ ವಿವಾಹ ಸ್ಥಗಿತಗೊಂಡಿರಲಿಲ್ಲ. ಶಿವಮೂರ್ತಿ ಮುರುಘಾ ಶರಣರು ಬಂಧಿತರಾಗಿದ್ದರಿಂದ ಈ ಕಾರ್ಯ ನೆರವೇರುವ ಬಗ್ಗೆ ಅನುಮಾನಗಳು ವ್ಯಕ್ತವಾಗಿದ್ದವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿತ್ರದುರ್ಗ</strong>: ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಸೆ. 1ರಂದು ಬಂಧನಕ್ಕೆ ಒಳಗಾಗಿರುವ ಶಿವಮೂರ್ತಿ ಮುರುಘಾ ಶರಣರನ್ನು ಭಾನುವಾರ ಮುರುಘಾ ಮಠಕ್ಕೆ ಕರೆತಂದ ಪೊಲೀಸರು, ಅವರು ತಂಗುತ್ತಿದ್ದ ಕೊಠಡಿಯ ಮಹಜರು ನಡೆಸಿದರು.</p>.<p>ಪೊಲೀಸ್ ವಾಹನದಲ್ಲಿ ಭಾನುವಾರ ಆರೋಪಿಯನ್ನು ಮಠಕ್ಕೆ ಕರೆದೊಯ್ದ ತನಿಖಾ ತಂಡ, ಅವರು ತಂಗುತ್ತಿದ್ದ ಕೊಠಡಿಗೆ ಸಂಪರ್ಕ ಕಲ್ಪಿಸುವ ಮಾರ್ಗಗಳನ್ನೂ ಪರಿಶೀಲಿಸಿದೆ. ಅಂದಾಜು ಎರಡೂವರೆ ಗಂಟೆ ಮಹಜರು ನಡೆಯಿತು.</p>.<p>‘ಪ್ರಕರಣದ ಪ್ರಮುಖ ಆರೋಪಿಯಾದ ಮುರುಘಾ ಶರಣರನ್ನು ಮಠಕ್ಕೆ ಕರೆದೊಯ್ದು ಮಹಜರು ಮಾಡಲಾಗಿದೆ. ಅವರು ತಂಗುತ್ತಿದ್ದ ಕೊಠಡಿಯಲ್ಲಿ ದೋಷಾರೋಪಕ್ಕೆ ಪೂರಕವಾಗಿ ಲಭ್ಯವಾದ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ವಿಚಾರಣೆ ಇನ್ನೂ ಮುಂದುವರಿದಿದೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಪರಶುರಾಮ್ ಹೇಳಿದ್ದಾರೆ.</p>.<p>ಸಿಆರ್ಪಿಸಿ ಸೆಕ್ಷನ್ 164ರ ಅಡಿ ಸಂತ್ರಸ್ತ ಬಾಲಕಿಯರು ನ್ಯಾಯಾಲಯದಲ್ಲಿ ದಾಖಲಿಸಿದ ಹೇಳಿಕೆಯ ಪ್ರತಿಯು ಮುಚ್ಚಿದ ಲಕೋಟೆಯಲ್ಲಿ ತನಿಖಾಧಿಕಾರಿಯ ಕೈಸೇರಿದೆ. ಇದರಲ್ಲಿರುವ ಅಂಶಗಳ ಆಧಾರದಲ್ಲಿ ತನಿಖೆ ಚುರುಕುಗೊಳಿಸಿರುವ ಪೊಲೀಸರು, ಲೈಂಗಿಕ ದೌರ್ಜನ್ಯ ಎಸಗಿದ್ದರು ಎನ್ನಲಾದ ಸ್ಥಳಕ್ಕೆ ಆರೋಪಿಯೊಂದಿಗೆ ತೆರಳಿ ಪರಿಶೀಲನೆ ನಡೆಸಿದರು.</p>.<p>ತನಿಖಾ ತಂಡದೊಂದಿಗೆ ವಿಧಿವಿಜ್ಞಾನ ತಜ್ಞರು ಇರಲಿಲ್ಲ. ವಶಕ್ಕೆ ಪಡೆದ ವಸ್ತುಗಳನ್ನು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸುವ ಸಾಧ್ಯತೆ ಇದೆ. ಮಹಜರು ಸಂದರ್ಭ ಮಠದ ಆವರಣದಲ್ಲಿ ಬಿಗಿ ಭದ್ರತೆ ಕಲ್ಪಿಸಲಾಗಿತ್ತು. ಎಲ್ಲ ಪ್ರವೇಶ ದ್ವಾರಗಳನ್ನು ಮುಚ್ಚಿ ಭಕ್ತರು, ಪ್ರವಾಸಿಗರು ಬಾರದಂತೆ ನಿರ್ಬಂಧಿಸಲಾಗಿತ್ತು.</p>.<p>ಆರೋಪಿಯನ್ನು ಸೆ.2ರಂದು ವಿಚಾರಣೆಗಾಗಿ ವಶಕ್ಕೆ ಪಡೆದಿರುವ ತನಿಖಾ ತಂಡ ಡಿವೈಎಸ್ಪಿ ಕಚೇರಿಯಲ್ಲಿ ವಿಚಾರಣೆಗೆ ಒಳಪಡಿಸಿದೆ. ತನಿಖಾಧಿಕಾರಿ ಆಗಿರುವ ಡಿವೈಎಸ್ಪಿ ಅನಿಲ್ ಕುಮಾರ್ ನೇತೃತ್ವದ ತಂಡ ಕೇಳಿದ ಪ್ರಶ್ನೆಗಳಿಗೆ ಆರೋಪಿಯಿಂದ ಸಮರ್ಪಕ ಉತ್ತರ ಲಭ್ಯವಾಗಿಲ್ಲ ಎಂದು ಪೊಲೀಸ್ ಇಲಾಖೆಯ ಮೂಲಗಳು ಮಾಹಿತಿ ನೀಡಿವೆ.</p>.<p>ವಿಚಾರಣೆ ನಡೆಸುತ್ತಿರುವ ಡಿವೈಎಸ್ಪಿ ಕಚೇರಿ ಆವರಣದಲ್ಲಿಯೇ ವೈದ್ಯರ ತಂಡ ಬೀಡುಬಿಟ್ಟಿದೆ. ಆರೋಪಿಯನ್ನು ಆಗಾಗ ವೈದ್ಯಕೀಯ ತಪಾಸಣೆಗೆ ಒಳಪಡಿಸಿ ಆರೋಗ್ಯದ ಮೇಲೆ ನಿಗಾ ಇಟ್ಟಿದೆ. ಪೊಲೀಸ್ ಕಸ್ಟಡಿ ಅವಧಿಯು ಸೆ.5ರಂದು ಮುಕ್ತಾಯವಾಗಲಿದೆ. ತನಿಖಾ ತಂಡವು ಆರೋಪಿಯನ್ನು ಸೋಮವಾರ ನ್ಯಾಯಾಲಯದ ಎದುರು ಹಾಜರುಪಡಿಸಲಿದೆ.</p>.<p class="Briefhead"><strong>ವರದಿ ಸಲ್ಲಿಕೆಗೆ ಆಯೋಗ ಸೂಚನೆ</strong></p>.<p>ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ದೌರ್ಜನ್ಯ ತಡೆ ಕಾಯ್ದೆಯಡಿ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕೈಗೊಂಡಿರುವ ತನಿಖಾ ಕ್ರಮಗಳ ಕುರಿತು ರಾಜ್ಯ ಪರಿಶಿಷ್ಟ ಜಾತಿ ಮತ್ತು ಬುಡಕಟ್ಟು ಆಯೋಗ ವಿವರವಾದ ವರದಿ ಕೇಳಿದೆ.</p>.<p>ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಿಗೆ ಆಯೋಗದ ಕಾರ್ಯದರ್ಶಿ ಈ ಸಂಬಂಧ ಪತ್ರ ಬರೆದಿದ್ದಾರೆ.</p>.<p>‘ಪರಿಶಿಷ್ಟ ಜಾತಿಯ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇರೆಗೆ ಶಿವಮೂರ್ತಿ ಮುರುಘಾ ಶರಣರ ವಿರುದ್ಧ ದೂರು ದಾಖಲಾಗಿರುವುದಾಗಿ ವರದಿಯಾಗಿದೆ. ಬಾಲಕಿಯ ಭವಿಷ್ಯದ ಮೇಲೆ ಇದು ಪರಿಣಾಮ ಬೀರಲಿದೆ. ಈ ಬಗ್ಗೆ ವಿವರವಾದ ವರದಿ ನೀಡಿ’ ಎಂದು ಪತ್ರದಲ್ಲಿ ಸೂಚಿಸಲಾಗಿದೆ.</p>.<p class="Briefhead"><strong>ಸಾಮೂಹಿಕ ವಿವಾಹ ಇಂದು</strong></p>.<p>ಮುರುಘಾ ಮಠದಲ್ಲಿ ನಡೆಯಲಿರುವ ಮಾಸಿಕ ಸಾಮೂಹಿಕ ವಿವಾಹ ಸಮಾರಂಭಕ್ಕೆ ಸಿದ್ಧತೆಗಳು ನಡೆದಿವೆ. ಸೆ.5ರಂದು ಸಾಮೂಹಿಕ ವಿವಾಹ ಕಾರ್ಯಕ್ರಮ ಹಾಗೂ ಶಿಕ್ಷಕರ ದಿನಾಚರಣೆಯು ಪ್ರಭಾರ ಪೀಠಾಧಿಪತಿ ಮಹಾಂತ ರುದ್ರೇಶ್ವರ ಸ್ವಾಮೀಜಿ ನೇತೃತ್ವದಲ್ಲಿ ನಡೆಯಲಿದೆ.</p>.<p>ಸಾಮೂಹಿಕ ಕಲ್ಯಾಣ ಮಹೋತ್ಸವದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಡಲು ಏಳು ಜೋಡಿ ವಧು–ವರರು ನೋಂದಣಿ ಮಾಡಿಕೊಂಡಿದ್ದಾರೆ. ಗುರುಮಠಕಲ್ ಶಾಖಾ ಮಠದ ಶಾಂತವೀರ ಗುರು ಮುರುಘರಾಜೇಂದ್ರ ಸ್ವಾಮೀಜಿ ಭಾಗವಹಿಸಲಿದ್ದಾರೆ.</p>.<p>ಮಠದಲ್ಲಿ 32 ವರ್ಷಗಳಿಂದ ಪ್ರತಿ ತಿಂಗಳ 5ರಂದು ಸಾಮೂಹಿಕ ವಿವಾಹ ನಡೆಸಲಾಗುತ್ತಿದೆ. ಗ್ರಹಣ, ಅಮಾವಾಸ್ಯೆ ಎದುರಾದ ದಿನವೂ ಸಾಮೂಹಿಕ ವಿವಾಹ ಸ್ಥಗಿತಗೊಂಡಿರಲಿಲ್ಲ. ಶಿವಮೂರ್ತಿ ಮುರುಘಾ ಶರಣರು ಬಂಧಿತರಾಗಿದ್ದರಿಂದ ಈ ಕಾರ್ಯ ನೆರವೇರುವ ಬಗ್ಗೆ ಅನುಮಾನಗಳು ವ್ಯಕ್ತವಾಗಿದ್ದವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>