ಲೈಂಗಿಕ ಕಿರುಕುಳಕ್ಕೆ ಒಳಗಾಗಿದ್ದಾರೆನ್ನಲಾದ ಬಾಲಕಿಯರ ಪರ ಕಾನೂನು ಹೋರಾಟ ಮಾಡಲು ಒಡನಾಡಿ ಸಂಸ್ಥೆಯು ನಿರ್ಧರಿಸಿದೆ.
ಪ್ರಕರಣದಲ್ಲಿ ಆರೋಪಿಗಳಾಗಿರುವ ಮುರುಘಾ ಶರಣರಿಗೆ ನಿರೀಕ್ಷಣಾ ಜಾಮೀನು ಕೊಡಬಾರದು ಎಂದು ಕೋರಿ, ಸಂಸ್ಥೆಯ ಪರವಾಗಿ ಹೈಕೋರ್ಟ್ ವಕೀಲ ಶ್ರೀನಿವಾಸ ಅವರು ಸೆ.1ರಂದು ಚಿತ್ರದುರ್ಗ ನ್ಯಾಯಾಲಯದಲ್ಲಿ ತಕರಾರು ಅರ್ಜಿ ಸಲ್ಲಿಸಲಿದ್ದಾರೆ.