ಚಿನ್ನದ ಕಿರೀಟ ಸೇರಿ ಇತರೆ ಎಲ್ಲ ಆಭರಣಗಳನ್ನು ಭಕ್ತರ ಕೈಗೆ ನೀಡಿ, ರುದ್ರಾಕ್ಷಿ ಕಿರೀಟ ಧರಿಸಿ, ವಚನ ಕೃತಿಯನ್ನು ಕೈಯಲ್ಲಿ ಹಿಡಿದರು. ನಾಡಿನ ವಿವಿಧ ಮಠದ ಸ್ವಾಮೀಜಿಗಳು, ಸಾಧಕರು, ಭಕ್ತರು, ಉತ್ಸವ ಸಮಿತಿಯ ಕಾರ್ಯಾಧ್ಯಕ್ಷರು, ಸದಸ್ಯರು, ಎಸ್ಜೆಎಂ ವಿದ್ಯಾಪೀಠದ ಆಡಳಿತ ಮಂಡಳಿ ಸದಸ್ಯರು ಸೇರಿದಂತೆ ನೂರಾರು ಜನ ಸಮೂಹ ಜಯಘೋಷಣೆಗಳೊಂದಿಗೆ ಪೀಠಾರೋಹಣ ವೀಕ್ಷಿಸಿದರು.