<p>ಚಿತ್ರದುರ್ಗ: ಬೇಸಿಗೆ ಧಗೆ ತಗ್ಗಿಸಲು ಹಾಗೂ ಜನರ ದಾಹ ನೀಗಿಸುವ ಉದ್ದೇಶದಿಂದ ಮಜ್ಜಿಗೆಯನ್ನು ಎರಡು ತಿಂಗಳು ಉಚಿತವಾಗಿ ವಿತರಣೆ ಮಾಡಲಾಗುವುದು ಎಂದು ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರು ಹೇಳಿದರು.</p>.<p>ಇಲ್ಲಿನ ದಂತ ವೈದ್ಯಕೀಯ ಕಾಲೇಜು ಸಮೀಪ ಮುರುಘಾ ಮಠದ ವತಿಯಿಂದ ಏರ್ಪಡಿಸಿದ ಮಜ್ಜಿಗೆ ವಿತರಣೆಗೆ ಗುರುವಾರ ಚಾಲನೆ ನೀಡಿ ಅವರು ಮಾತನಾಡಿದರು.</p>.<p>‘ಪ್ರತಿವರ್ಷ ಬೇಸಿಗೆ ಸಂದರ್ಭದಲ್ಲಿ ಸಾರ್ವಜನಿಕರಿಗೆ ಮಜ್ಜಿಗೆ ವಿತರಣೆ ಮಾಡಲಾಗುತ್ತಿದೆ. ಏಪ್ರಿಲ್ ಮತ್ತು ಮೇ ತಿಂಗಳು ಶಿವದಾನ ಕಾರ್ಯಕ್ರಮ ನಡೆಯಲಿದೆ. ಇದೊಂದು ಉತ್ತಮ ಸೇವೆ ಎಂದು ಪರಿಗಣಿಸಿ ಮಠ ಈ ಪರಂಪರೆ ಆರಂಭಿಸಿದೆ’ ಎಂದು ಹೇಳಿದರು.</p>.<p>‘ಜಿಲ್ಲೆಯಲ್ಲಿ ಈಗಾಗಲೇ 36 ಡಿಗ್ರಿ ತಾಪಮಾನವಿದೆ. ಎರಡು ತಿಂಗಳು ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ. ಮಠದ ಕಾರ್ಯದಿಂದ ಪ್ರೇರಣೆಗೊಂಡ ಅನೇಕರು ಇದಕ್ಕೆ ಕೈಜೋಡಿಸಿದ್ದಾರೆ. ಯಾರ ನೆರವು ಸಿಗದಿದ್ದರೂ ಮಠ ಇದನ್ನು ಮುಂದುವರಿಸುತ್ತದೆ’ ಎಂದರು.</p>.<p>‘ಉತ್ತಮ ಕಾರ್ಯಗಳಿಗೆ ಮುರುಘಾ ಮಠ ಸದಾ ಮುಂದೆ ಇರುತ್ತದೆ. ಒಂದಿಲ್ಲೊಂದು ಪ್ರಯೋಗಮುಖಿ ಕಾರ್ಯಗಳನ್ನು ಮಾಡುತ್ತಿದೆ. ಮುರುಘಾ ಮಠದ ಸಮಾಜೋಪಯೋಗಿ ಕಾರ್ಯಗಳು ಅನುಕರಣೀಯ. ಉತ್ತಮ ಕೆಲಸಗಳಿಗೆ ಮುಂದೆ ಇದ್ದು, ಕೆಟ್ಟ ಕೆಲಸಗಳಿಗೆ ಹಿಂದಿರಬೇಕು’ ಎಂದು ಕಿವಿಮಾತು ಹೇಳಿದರು.</p>.<p><span class="quote">ಸರ್ಕಾರಕ್ಕೆ ಧನ್ಯವಾದ:</span>ಭದ್ರಾ ಮೇಲ್ದಂಡೆ ಯೋಜನೆಗೆ ರಾಷ್ಟ್ರೀಯ ಮಾನ್ಯತೆ ಕಲ್ಪಿಸುತ್ತಿರುವ ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಬಯಲುಸೀಮೆಯ ರೈತರ ಪರವಾಗಿ ಧನ್ಯವಾದ ಸಲ್ಲಿಸುತ್ತೇನೆ ಎಂದು ಶಿವಮೂರ್ತಿ ಮುರುಘಾ ಶರಣರು ಹೇಳಿದರು.</p>.<p>‘ಪ್ರಾಕೃತಿಕ ಅಸಮತೋಲನದ ಪರಿಣಾಮವಾಗಿ ಮಧ್ಯ ಕರ್ನಾಟಕದ ಚಿತ್ರದುರ್ಗ, ತುಮಕೂರು ಹಾಗೂ ಕೋಲಾರ ಜಿಲ್ಲೆಗಳು ಶಾಶ್ವತ ಬರಪೀಡಿತವಾಗಿವೆ. ಈ ಭಾಗಕ್ಕೆ ನೀರಾವರಿ ಯೋಜನೆ ಕಲ್ಪಿಸಿದರೆ ಜನರ ಬದುಕು ಹಸನವಾಗುತ್ತದೆ. ಇದೇ ಉದ್ದೇಶದಿಂದ ಮಠಾಧೀಶರು ಹೋರಾಟಕ್ಕೆ ನೇತೃತ್ವ ವಹಿಸಿದ್ದರು’ ಎಂದರು.</p>.<p>‘ರೈತರು ಹಾಗೂ ನೀರಾವರಿ ಹೋರಾಟಗಾರರ ಶ್ರಮದಿಂದ ಯೋಜನೆ ಸಾಕಾರಗೊಂಡಿದೆ. ರಾಷ್ಟ್ರೀಯ ಯೋಜನೆಯಾಗಿ ಘೋಷಣೆ ಮಾಡುವಂತೆ ರಾಜ್ಯ ಸರ್ಕಾರ ಸಲ್ಲಿಸಿದ ಶಿಫಾರಸಿಗೆ ಕೇಂದ್ರ ಒಪ್ಪಿಗೆ ನೀಡಿದೆ. ₹ 16 ಸಾವಿರ ಕೋಟಿ ಅನುದಾನ ಸಿಗುತ್ತಿರುವುದು ಸಂತಸವುಂಟು ಮಾಡಿದೆ’ ಎಂದು ಹೇಳಿದರು.</p>.<p>ದೇನಾ ಭಾಗವತ್ ಗುರೂಜಿ, ಬಸವ ಮಾಚಿದೇವ ಸ್ವಾಮೀಜಿ, ಬಸವ ನಾಗಿದೇವ ಸ್ವಾಮೀಜಿ, ಬಸವ ಕುಂಬಾರ ತಿಪ್ಪೇಸ್ವಾಮಿ ಸ್ವಾಮೀಜಿ, ಹನುಮಲಿ ಷಣ್ಮುಖಪ್ಪ, ಎ.ಜೆ. ಪರಮಶಿವಯ್ಯ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಿತ್ರದುರ್ಗ: ಬೇಸಿಗೆ ಧಗೆ ತಗ್ಗಿಸಲು ಹಾಗೂ ಜನರ ದಾಹ ನೀಗಿಸುವ ಉದ್ದೇಶದಿಂದ ಮಜ್ಜಿಗೆಯನ್ನು ಎರಡು ತಿಂಗಳು ಉಚಿತವಾಗಿ ವಿತರಣೆ ಮಾಡಲಾಗುವುದು ಎಂದು ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರು ಹೇಳಿದರು.</p>.<p>ಇಲ್ಲಿನ ದಂತ ವೈದ್ಯಕೀಯ ಕಾಲೇಜು ಸಮೀಪ ಮುರುಘಾ ಮಠದ ವತಿಯಿಂದ ಏರ್ಪಡಿಸಿದ ಮಜ್ಜಿಗೆ ವಿತರಣೆಗೆ ಗುರುವಾರ ಚಾಲನೆ ನೀಡಿ ಅವರು ಮಾತನಾಡಿದರು.</p>.<p>‘ಪ್ರತಿವರ್ಷ ಬೇಸಿಗೆ ಸಂದರ್ಭದಲ್ಲಿ ಸಾರ್ವಜನಿಕರಿಗೆ ಮಜ್ಜಿಗೆ ವಿತರಣೆ ಮಾಡಲಾಗುತ್ತಿದೆ. ಏಪ್ರಿಲ್ ಮತ್ತು ಮೇ ತಿಂಗಳು ಶಿವದಾನ ಕಾರ್ಯಕ್ರಮ ನಡೆಯಲಿದೆ. ಇದೊಂದು ಉತ್ತಮ ಸೇವೆ ಎಂದು ಪರಿಗಣಿಸಿ ಮಠ ಈ ಪರಂಪರೆ ಆರಂಭಿಸಿದೆ’ ಎಂದು ಹೇಳಿದರು.</p>.<p>‘ಜಿಲ್ಲೆಯಲ್ಲಿ ಈಗಾಗಲೇ 36 ಡಿಗ್ರಿ ತಾಪಮಾನವಿದೆ. ಎರಡು ತಿಂಗಳು ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ. ಮಠದ ಕಾರ್ಯದಿಂದ ಪ್ರೇರಣೆಗೊಂಡ ಅನೇಕರು ಇದಕ್ಕೆ ಕೈಜೋಡಿಸಿದ್ದಾರೆ. ಯಾರ ನೆರವು ಸಿಗದಿದ್ದರೂ ಮಠ ಇದನ್ನು ಮುಂದುವರಿಸುತ್ತದೆ’ ಎಂದರು.</p>.<p>‘ಉತ್ತಮ ಕಾರ್ಯಗಳಿಗೆ ಮುರುಘಾ ಮಠ ಸದಾ ಮುಂದೆ ಇರುತ್ತದೆ. ಒಂದಿಲ್ಲೊಂದು ಪ್ರಯೋಗಮುಖಿ ಕಾರ್ಯಗಳನ್ನು ಮಾಡುತ್ತಿದೆ. ಮುರುಘಾ ಮಠದ ಸಮಾಜೋಪಯೋಗಿ ಕಾರ್ಯಗಳು ಅನುಕರಣೀಯ. ಉತ್ತಮ ಕೆಲಸಗಳಿಗೆ ಮುಂದೆ ಇದ್ದು, ಕೆಟ್ಟ ಕೆಲಸಗಳಿಗೆ ಹಿಂದಿರಬೇಕು’ ಎಂದು ಕಿವಿಮಾತು ಹೇಳಿದರು.</p>.<p><span class="quote">ಸರ್ಕಾರಕ್ಕೆ ಧನ್ಯವಾದ:</span>ಭದ್ರಾ ಮೇಲ್ದಂಡೆ ಯೋಜನೆಗೆ ರಾಷ್ಟ್ರೀಯ ಮಾನ್ಯತೆ ಕಲ್ಪಿಸುತ್ತಿರುವ ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಬಯಲುಸೀಮೆಯ ರೈತರ ಪರವಾಗಿ ಧನ್ಯವಾದ ಸಲ್ಲಿಸುತ್ತೇನೆ ಎಂದು ಶಿವಮೂರ್ತಿ ಮುರುಘಾ ಶರಣರು ಹೇಳಿದರು.</p>.<p>‘ಪ್ರಾಕೃತಿಕ ಅಸಮತೋಲನದ ಪರಿಣಾಮವಾಗಿ ಮಧ್ಯ ಕರ್ನಾಟಕದ ಚಿತ್ರದುರ್ಗ, ತುಮಕೂರು ಹಾಗೂ ಕೋಲಾರ ಜಿಲ್ಲೆಗಳು ಶಾಶ್ವತ ಬರಪೀಡಿತವಾಗಿವೆ. ಈ ಭಾಗಕ್ಕೆ ನೀರಾವರಿ ಯೋಜನೆ ಕಲ್ಪಿಸಿದರೆ ಜನರ ಬದುಕು ಹಸನವಾಗುತ್ತದೆ. ಇದೇ ಉದ್ದೇಶದಿಂದ ಮಠಾಧೀಶರು ಹೋರಾಟಕ್ಕೆ ನೇತೃತ್ವ ವಹಿಸಿದ್ದರು’ ಎಂದರು.</p>.<p>‘ರೈತರು ಹಾಗೂ ನೀರಾವರಿ ಹೋರಾಟಗಾರರ ಶ್ರಮದಿಂದ ಯೋಜನೆ ಸಾಕಾರಗೊಂಡಿದೆ. ರಾಷ್ಟ್ರೀಯ ಯೋಜನೆಯಾಗಿ ಘೋಷಣೆ ಮಾಡುವಂತೆ ರಾಜ್ಯ ಸರ್ಕಾರ ಸಲ್ಲಿಸಿದ ಶಿಫಾರಸಿಗೆ ಕೇಂದ್ರ ಒಪ್ಪಿಗೆ ನೀಡಿದೆ. ₹ 16 ಸಾವಿರ ಕೋಟಿ ಅನುದಾನ ಸಿಗುತ್ತಿರುವುದು ಸಂತಸವುಂಟು ಮಾಡಿದೆ’ ಎಂದು ಹೇಳಿದರು.</p>.<p>ದೇನಾ ಭಾಗವತ್ ಗುರೂಜಿ, ಬಸವ ಮಾಚಿದೇವ ಸ್ವಾಮೀಜಿ, ಬಸವ ನಾಗಿದೇವ ಸ್ವಾಮೀಜಿ, ಬಸವ ಕುಂಬಾರ ತಿಪ್ಪೇಸ್ವಾಮಿ ಸ್ವಾಮೀಜಿ, ಹನುಮಲಿ ಷಣ್ಮುಖಪ್ಪ, ಎ.ಜೆ. ಪರಮಶಿವಯ್ಯ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>